23.7 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲಾಯಿಲ ಶ್ರೀ ರಾಘವೇಂದ್ರ ಮಠದ ಗೌರವ ಸಲಹೆಗಾರರಾಗಿ ಸುಮಂತ್ ಕುಮಾರ್ ಜೈನ್ ಆಯ್ಕೆ

ಬೆಳ್ತಂಗಡಿ : ಲಾಯಿಲ ಶ್ರೀ ರಾಘವೇಂದ್ರ ಮಠದ ಟ್ರಸ್ಟಿನ ಸಭೆಯು ಜ.೨೭ ರಂದು ಶ್ರೀ ರಾಘವೇಂದ್ರ ಮಂಟಪದಲ್ಲಿ ನಡೆಯಿತು. ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್‌ರವರು ಗೌರವ ಸಲಹೆಗಾರರಾಗಿ ಸರ್ವಾನುಮತದಿಂದ ಆಯ್ಕೆಯಾದರು.

ಪ್ರಧಾನ ಕಾರ್ಯದರ್ಶಿ ವಸಂತ ಸುವರ್ಣರವರು ಸ್ವಾಗತಿಸಿ ಪ್ರಸ್ತಾವಿಸಿದರು. ಕೋಶಾಧಿಕಾರಿ ಶ್ರವಣ್ ಕುಮಾರ್‌ರವರು ಲೆಕ್ಕಪತ್ರಗಳನ್ನು ಮಂಡಿಸಿದರು.


ಕ್ಷೇತ್ರಕ್ಕೆ ಬರುವ ಭಕ್ತರಿಗೆ ಯಾವುದೇ ಅನಾನುಕೂಲ ಆಗದಂತೆ ಪೂಜಾ ವಿಧಿ ವಿಧಾನಗಳು ಸಮಯ ಶ್ರದ್ಧೆ ಮತ್ತು ಶಿಸ್ತುನಿಂದ ಶ್ರೀ ಕ್ಷೇತ್ರದಲ್ಲಿ ನಡೆಯುತ್ತಿದೆ. ಫೆಬ್ರವರಿ ೭ರಂದು ನಡೆಯುವ ಸಾರ್ವಜನಿಕ ಶ್ರೀ ಶನೇಶ್ವರ ಪೂಜೆಗೆ ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸಬೇಕೆಂದು ಅಧ್ಯಕ್ಷರಾದ ಪೀತಾಂಬರ ಹೇರಾಜೆ ಅವರು ತಿಳಿಸಿದರು.

ಉಜಿರೆ ಎಸ್‌ಡಿಎಂ ಕಾಲೇಜಿನ ಮಾಜಿ ಪ್ರಾಂಶುಪಾಲ ಡಾ.ಕುಮಾರ ಹೆಗ್ಡೆಯವರನ್ನು ಟ್ರಸ್ಟಿಗೆ ನೂತನವಾಗಿ ಸೇರಿಸಲಾಯಿತು. ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ಮಹಾಬಲ ಶೆಟ್ಟಿ, ಹಿರಿಯ ಟ್ರಸ್ಟಿಗಳಾದ ಪ್ರೊ ಎ. ಕೃಷ್ಣಪ್ಪ ಪೂಜಾರಿ, ಸೋಮೇಗೌಡ, ಶ್ರೀಮತಿ ಉಮಾ ರಂಜನ್ ರಾವ್, ಮಂಜುನಾಥ ಶೆಟ್ಟಿ, ಕೃಷ್ಣ ಶೆಟ್ಟಿ ಹಾಗೂ ಇತರ ಪ್ರಮುಖರು ಹಾಜರಿದ್ದರು.

Related posts

ಲಾಯಿಲ: ಕುಂಟಿನಿ ಮುಹಿಯ್ಯುದ್ಧೀನ್ ಅರಬಿಕ್ ಮದರಸ ನೂತನ ಕಟ್ಟಡ ಉದ್ಘಾಟನೆ

Suddi Udaya

ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಹೋಮಕುಂಡದ ಭೂಮಿ ಪೂಜೆ

Suddi Udaya

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಚಂಡಿಕಾ ಹೋಮ, ದುರ್ಗಾಪೂಜೆ

Suddi Udaya

ಧರ್ಮಸ್ಥಳ: ಜೋಡುಸ್ಥಾನ ನಿವಾಸಿ ಟೈಲರ್ ಬಿ. ಕೃಷ್ಣ ಮಡಿವಾಳ ನಿಧನ

Suddi Udaya

ಬರೆಂಗಾಯದಲ್ಲಿ ಉಜಿರೆ ಎಸ್ ಡಿ ಎಮ್ ಪಿಯು ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿ : ಚೆಕ್ ಅಮಾನ್ಯ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ ಪ್ರಕಟ

Suddi Udaya
error: Content is protected !!