July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲಾಯಿಲ ಶ್ರೀ ರಾಘವೇಂದ್ರ ಮಠದ ಗೌರವ ಸಲಹೆಗಾರರಾಗಿ ಸುಮಂತ್ ಕುಮಾರ್ ಜೈನ್ ಆಯ್ಕೆ

ಬೆಳ್ತಂಗಡಿ : ಲಾಯಿಲ ಶ್ರೀ ರಾಘವೇಂದ್ರ ಮಠದ ಟ್ರಸ್ಟಿನ ಸಭೆಯು ಜ.೨೭ ರಂದು ಶ್ರೀ ರಾಘವೇಂದ್ರ ಮಂಟಪದಲ್ಲಿ ನಡೆಯಿತು. ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್‌ರವರು ಗೌರವ ಸಲಹೆಗಾರರಾಗಿ ಸರ್ವಾನುಮತದಿಂದ ಆಯ್ಕೆಯಾದರು.

ಪ್ರಧಾನ ಕಾರ್ಯದರ್ಶಿ ವಸಂತ ಸುವರ್ಣರವರು ಸ್ವಾಗತಿಸಿ ಪ್ರಸ್ತಾವಿಸಿದರು. ಕೋಶಾಧಿಕಾರಿ ಶ್ರವಣ್ ಕುಮಾರ್‌ರವರು ಲೆಕ್ಕಪತ್ರಗಳನ್ನು ಮಂಡಿಸಿದರು.


ಕ್ಷೇತ್ರಕ್ಕೆ ಬರುವ ಭಕ್ತರಿಗೆ ಯಾವುದೇ ಅನಾನುಕೂಲ ಆಗದಂತೆ ಪೂಜಾ ವಿಧಿ ವಿಧಾನಗಳು ಸಮಯ ಶ್ರದ್ಧೆ ಮತ್ತು ಶಿಸ್ತುನಿಂದ ಶ್ರೀ ಕ್ಷೇತ್ರದಲ್ಲಿ ನಡೆಯುತ್ತಿದೆ. ಫೆಬ್ರವರಿ ೭ರಂದು ನಡೆಯುವ ಸಾರ್ವಜನಿಕ ಶ್ರೀ ಶನೇಶ್ವರ ಪೂಜೆಗೆ ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸಬೇಕೆಂದು ಅಧ್ಯಕ್ಷರಾದ ಪೀತಾಂಬರ ಹೇರಾಜೆ ಅವರು ತಿಳಿಸಿದರು.

ಉಜಿರೆ ಎಸ್‌ಡಿಎಂ ಕಾಲೇಜಿನ ಮಾಜಿ ಪ್ರಾಂಶುಪಾಲ ಡಾ.ಕುಮಾರ ಹೆಗ್ಡೆಯವರನ್ನು ಟ್ರಸ್ಟಿಗೆ ನೂತನವಾಗಿ ಸೇರಿಸಲಾಯಿತು. ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ಮಹಾಬಲ ಶೆಟ್ಟಿ, ಹಿರಿಯ ಟ್ರಸ್ಟಿಗಳಾದ ಪ್ರೊ ಎ. ಕೃಷ್ಣಪ್ಪ ಪೂಜಾರಿ, ಸೋಮೇಗೌಡ, ಶ್ರೀಮತಿ ಉಮಾ ರಂಜನ್ ರಾವ್, ಮಂಜುನಾಥ ಶೆಟ್ಟಿ, ಕೃಷ್ಣ ಶೆಟ್ಟಿ ಹಾಗೂ ಇತರ ಪ್ರಮುಖರು ಹಾಜರಿದ್ದರು.

Related posts

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್‌ನಲ್ಲಿ ತಾಂತ್ರಿಕ ಸಂವಾದ

Suddi Udaya

ಪುದುವೆಟ್ಟು : ನೂತನ ಬಸದಿಯ ಪಂಚಕಲ್ಯಾಣ ಮತ್ತು ನೂತನ ಬಿಂಬದ ಪ್ರತಿಷ್ಠಾ ಮಹೋತ್ಸವ

Suddi Udaya

ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆ ಮತ್ತು ಯುವ ಬಿಲ್ಲವ ವೇದಿಕೆ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಕನ್ಯಾಡಿ ಸೇವಾಭಾರತಿಯ ನೂತನ ಕಾರ್ಯಾಲಯದ ವಾಸ್ತುಪೂಜೆ ಹಾಗೂ ಪ್ರವೇಶ:

Suddi Udaya

ಧರ್ಮಸ್ಥಳ ಮೇಳದ ಹಿರಿಯ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸಮಾಲೋಚನಾ ಸಭೆ: ಜನಜಾಗೃತಿ ವೇದಿಕೆ ಮೂಲಕ ಧರ್ಮಸ್ಥಳದಿಂದ ಆಗಿರುವ ಪರಿವರ್ತನೆ ಅಪರಿಮಿತ: ಪ್ರತಾಪ ಸಿಂಹ ನಾಯಕ್

Suddi Udaya
error: Content is protected !!