22.9 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಪಾಂಗಳದಲ್ಲಿ ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳತನ

ಧರ್ಮಸ್ಥಳ: ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯೊಳಗೆ ನುಗ್ಗಿದ ಕಳ್ಳರು ಚಿನ್ನಾಭರಣ ಕಳ್ಳತನ ಮಾಡಿಕೊಂಡ ಹೋದ ಘಟನೆ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಪಾಂಗಳದ ಲಕ್ಷ್ಮೀ ನಿವಾಸದ ಬಾಲಕೃಷ್ಣ ಗೌಡರ ಮನೆಗೆ ಜ.29 ರಂದು ಬೆಳಗ್ಗೆ 9:30 ರಿಂದ ಸಂಜೆ 4 ಗಂಟೆ ಒಳಗಡೆ ಮನೆಯಲ್ಲಿ ಯಾರು ಇಲ್ಲದ ವೇಳೆಗೆ ಕಳ್ಳತನ ನಡೆದಿದೆ.ಸಂಜೆ ವೇಳೆಗೆ ಕೆಲಸದಿಂದ ಮನೆಗೆ ಬಂದಾಗ ಕಳ್ಳತನ ಬೆಳಕಿಗೆ ಬಂದಿದ್ದು‌, ಮನೆಯೊಳಗಿದ್ದ 40 ಸಾವಿರ ಮೌಲ್ಯದ 4 ಗ್ರಾಂ ಕಿವಿಓಲೆ,2 ಸಾವಿರ ಮೌಲ್ಯದ 2 ಜೊತೆ ಬೆಳ್ಳಿಯ ಕಾಲುಗೆಜ್ಜೆ,5,500 ರೂಪಾಯಿ ನಗದು ಸೇರಿ ಒಟ್ಟು 47,500 ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿರುವ ಬಗ್ಗೆ ಮನೆ ಮಾಲೀಕ ಬಾಲಕೃಷ್ಣ ಗೌಡ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ.ಬಿಎಸ್ , ಧರ್ಮಸ್ಥಳ ಸಬ್ ಇನ್ಸ್‌ಪೆಕ್ಟರ್ ಸಮರ್ಥ್ ಆರ್ ಗಾಣಿಗೇರ ಮತ್ತು ತಂಡ, ಮಂಗಳೂರು ಬೆರಳಚ್ಚು ತಜ್ಞರು, ಪುತ್ತೂರು ಸೊಕೋ ತಂಡ, ಮಂಗಳೂರು ಶ್ವಾನ ದಳ ಬಂದು ಪರಿಶೀಲನೆ ನಡೆಸಿದ್ದಾರೆ.

Related posts

ಕಳೆಂಜ: ಶಿಬರಾಜೆಯ ಬ್ರಹ್ಮಲಿಂಗ ದೇವರಿಗೆ ವೃಶ್ಚಿಕ ಸಂಕ್ರಮಣದ ಪ್ರಯುಕ್ತ ವಿಶೇಷ ಅಭಿಷೇಕ ಪೂಜೆ

Suddi Udaya

ಬೆಳ್ತಂಗಡಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಗುರುಜಯಂತಿ: ಸಮಾಜದ ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳ ದತ್ತು ಸ್ವೀಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ: ಮಲವಂತಿಗೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿಗೆ ಸಿದ್ಧರಾಮಯ್ಯರಿಗೆ ಮನವಿ

Suddi Udaya

ರಾತ್ರಿ 3 ಗಂಟೆಗೆ ಚಾರ್ಮಾಡಿ ಮೂಲಕ ಬೆಳ್ತಂಗಡಿ ತಲುಪುವ ಬಂಗೇರರ ಪ್ರಾರ್ಥಿವ ಶರೀರ: ಬೆಳ್ತಂಗಡಿ ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ಅವಕಾಶ ಬೆಳ್ತಂಗಡಿ ನಗರದಲ್ಲಿ ಅಂತಿಮ ಯಾತ್ರೆ

Suddi Udaya

ಕಂಪನಿ ಸೆಕ್ರೆಟರಿ ಪ್ರವೇಶ ಪರೀಕ್ಷೆಯಲ್ಲಿ ಉಜಿರೆ ಶ್ರೀ ಧ.ಮಂ. ಪ.ಪೂ ಕಾಲೇಜಿನ ಏಳು ವಿದ್ಯಾರ್ಥಿಗಳು ತೇರ್ಗಡೆ

Suddi Udaya

ಕುಕ್ಕಾವು ಬ್ರಹ್ಮಶ್ರೀ ಮಹಿಳಾ ಸಂಘದಿಂದ ಆರ್ಥಿಕ ನೆರವು

Suddi Udaya
error: Content is protected !!