July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಪಾಂಗಳದಲ್ಲಿ ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳತನ

ಧರ್ಮಸ್ಥಳ: ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯೊಳಗೆ ನುಗ್ಗಿದ ಕಳ್ಳರು ಚಿನ್ನಾಭರಣ ಕಳ್ಳತನ ಮಾಡಿಕೊಂಡ ಹೋದ ಘಟನೆ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಪಾಂಗಳದ ಲಕ್ಷ್ಮೀ ನಿವಾಸದ ಬಾಲಕೃಷ್ಣ ಗೌಡರ ಮನೆಗೆ ಜ.29 ರಂದು ಬೆಳಗ್ಗೆ 9:30 ರಿಂದ ಸಂಜೆ 4 ಗಂಟೆ ಒಳಗಡೆ ಮನೆಯಲ್ಲಿ ಯಾರು ಇಲ್ಲದ ವೇಳೆಗೆ ಕಳ್ಳತನ ನಡೆದಿದೆ.ಸಂಜೆ ವೇಳೆಗೆ ಕೆಲಸದಿಂದ ಮನೆಗೆ ಬಂದಾಗ ಕಳ್ಳತನ ಬೆಳಕಿಗೆ ಬಂದಿದ್ದು‌, ಮನೆಯೊಳಗಿದ್ದ 40 ಸಾವಿರ ಮೌಲ್ಯದ 4 ಗ್ರಾಂ ಕಿವಿಓಲೆ,2 ಸಾವಿರ ಮೌಲ್ಯದ 2 ಜೊತೆ ಬೆಳ್ಳಿಯ ಕಾಲುಗೆಜ್ಜೆ,5,500 ರೂಪಾಯಿ ನಗದು ಸೇರಿ ಒಟ್ಟು 47,500 ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿರುವ ಬಗ್ಗೆ ಮನೆ ಮಾಲೀಕ ಬಾಲಕೃಷ್ಣ ಗೌಡ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ.ಬಿಎಸ್ , ಧರ್ಮಸ್ಥಳ ಸಬ್ ಇನ್ಸ್‌ಪೆಕ್ಟರ್ ಸಮರ್ಥ್ ಆರ್ ಗಾಣಿಗೇರ ಮತ್ತು ತಂಡ, ಮಂಗಳೂರು ಬೆರಳಚ್ಚು ತಜ್ಞರು, ಪುತ್ತೂರು ಸೊಕೋ ತಂಡ, ಮಂಗಳೂರು ಶ್ವಾನ ದಳ ಬಂದು ಪರಿಶೀಲನೆ ನಡೆಸಿದ್ದಾರೆ.

Related posts

ನಾರಾವಿ ಪಂಚಾಯತು ಮೀಸಲು ಜಾಗದಲ್ಲಿ ಅಕ್ರಮವಾಗಿ ಶೆಡ್ ನಿರ್ಮಾಣ: ಕಂದಾಯ ಇಲಾಖೆ, ಪೊಲೀಸರ ಸಹಕಾರದಲ್ಲಿ ತೆರವು

Suddi Udaya

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದಿಂದ ಶ್ರೀ ಮಹಾಭಾರತ ಸರಣಿ ತಾಳಮದ್ದಳೆ, ಸನ್ಮಾನ

Suddi Udaya

ಧರ್ಮಸ್ಥಳದಲ್ಲಿ “ನಲಿಯೋಣ ಬಾ” ರಂಗಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ

Suddi Udaya

ಚಾರ್ಮಾಡಿ: ಅರಣ್ಯ ಇಲಾಖೆಯಿಂದಸತ್ತ ಆನೆಯ ದಫನ: ಆನೆಯ ಎರಡು ದಂತ ಸ್ವಾಧೀನ ಪಡಿಸಿಕೊಂಡ ಅಧಿಕಾರಿಗಳು

Suddi Udaya
error: Content is protected !!