22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪ್ರತಿಷ್ಠಿತ ಬಿಲ್ಲವ ಗುತ್ತು ಮನೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ : ಕರಾಯ ಗ್ರಾಮದ ಮುಗ್ಗ ಗುತ್ತು ಶ್ರೀ ದುರ್ಗಾಂಬಿಕಾ ದೇವಿಯ ವಾರ್ಷಿಕ ಪೂಜೆಯನ್ನು ಜ.28 ರಂದು ಮುಗ್ಗಗುತ್ತಿನಲ್ಲಿ ನವಕ ಪ್ರಧಾನ ಹೋಮ , ನಾಗತನುದ ತಂಬಿಲ, ವೆಂಕಟರಮಣ ದೇವರ ಮುಡಿಪು , ದೈವಗಳಿಗೆ ಪಂಚ ಪರ್ವ, ದೇವಿಗೆ ಸರ್ವಾಲಂಕಾರ ಪೂಜೆಯ ಬಳಿಕ ಆಡಳಿತ ಸಮಿತಿಯ ಸಭೆಯು ಜರಗಿ, ಡಾ ರಾಜಾರಾಮ್, ಚರಣ್, ಪ್ರಶಾಂತ್ ಬಂಗೇರ, ಹಾಗೂ ಕೀರ್ತಿ ಬಂಗೇರನ್ನು, ಸಮಿತಿಗೆ ಆಮಂತ್ರಿತರಾಗಿ ನೇಮಿಸಲಾಯಿತು.

ಈ ಸಂದರ್ಭದಲ್ಲಿ ಮೆಸ್ಕಾಂ ಅಧ್ಯಕ್ಷರಾಗಿ ಆಯ್ಕೆಯಾದ ಗುತ್ತಿನ ಅಧ್ಯಕ್ಷ ಕೆ ಹರೀಶ್ ಕುಮಾರ್ ಮತ್ತು ಗುರುದೇವ ವಿವಿದೋದ್ದೇಶ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಭಗೀರಥ ಜಿ ಅವರನ್ನು ಶಾಲು ಹೊದಿಸಿ ಗೌರವಿಸಲಾಯಿತು.

ಗುತ್ತಿನ ಅಭಿವೃದ್ಧಿಯಲ್ಲಿ ಸಹಕರಿಸಿದ ಹೆರಾಜೆ ಕುಟುಂಬಸ್ಥರು, ಸರ್ವೆ ದೋಳ ಶ್ರೀಮತಿ ಅನ್ವಿತಾ ಪ್ರದೀಪ್ ಪೂಜಾರಿ, ಶ್ರೀಮತಿ ಕೀರ್ತನ ರಾಜೇಂದ್ರ ಪೂಜಾರಿ ಮೂಡಬಿದ್ರಿ ಇವರನ್ನು ಅಭಿನಂದಿಸಲಾಯಿತು.
ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭದಲ್ಲಿ ಆಡಳಿತ ಮೊಕ್ತೇಸರ ಪೀತಾಂಬರ ಹೆರಾಜೆ, ಅಧ್ಯಕ್ಷ ಕೆ ಹರೀಶ್ ಕುಮಾರ್, ಉಪಾಧ್ಯಕ್ಷ ಎಂ ಜಗನ್ನಾಥ ಬಂಗೇರ, ಕಾರ್ಯದರ್ಶಿ ಭಗೀರಥ ಜಿ, ಜೊತೆ ಕಾರ್ಯದರ್ಶಿ ಸೋಮನಾಥ ಬಂಗೇರ, ಕೋಶಾಧಿಕಾರಿ ದಿನೇಶ್ ಪಿದಮ್ಮಲೆ, ಡಾ ರಾಜಾರಾಮ್ , ಕಮಲಾಕ್ಷ ಬೋಳಾರ, ಮಿತ್ರ ಹೆರಾಜೆ, ತುಕಾರಾಮ ಬಂಗೇರ, ನಾರಾಯಣ ಮಚ್ಚಿನ, ಹೇಮಾ ದಾಮೋದರ, ಶಾರದ ಕೃಷ್ಣ, ಜಾನಕಿ ಕೇಶವ, ನವೀನ್ ಬಂಗೇರ, ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

Related posts

ಅಳದಂಗಡಿ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

Suddi Udaya

ಹಣ ತೆಗೆಯಲು ಅಪರಿಚಿತನಿಗೆ ಎಟಿಎಂ ಕಾರ್ಡ್, ಪಿನ್ ನಂಬರ್ ನೀಡಿದ ವ್ಯಕ್ತಿ ಎಟಿಎಂ ಕಾರ್ಡ್ ಬದಲಾಯಿಸಿ ನೀಡಿದ ಅಪರಿಚಿತ ಖಾತೆಯಿಂದ 1 ಲಕ್ಷಕ್ಕೂ ಅಧಿಕ ರೂ. ತೆಗೆದು ವಂಚನೆ

Suddi Udaya

ಬೆಳ್ತಂಗಡಿ: ಅಕ್ರಮ ಮರ ಕಡಿತಲೆ ಪ್ರಕರಣ: ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಹೆಚ್.ಎನ್. ಅಮಾನತು

Suddi Udaya

ಸುಲ್ಕೇರಿ ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಬಗ್ಗೆ ಸಮಾಲೋಚನ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಹಾಗೂ ಕ್ರೀಡಾ ಶಿಬಿರ ಉದ್ಘಾಟನೆ

Suddi Udaya

ಆಪರೇಷನ್ ಸಿಂಧೂರ: ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ

Suddi Udaya
error: Content is protected !!