22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪ್ರತಿಷ್ಠಿತ ಬಿಲ್ಲವ ಗುತ್ತು ಮನೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ : ಕರಾಯ ಗ್ರಾಮದ ಮುಗ್ಗ ಗುತ್ತು ಶ್ರೀ ದುರ್ಗಾಂಬಿಕಾ ದೇವಿಯ ವಾರ್ಷಿಕ ಪೂಜೆಯನ್ನು ಜ.28 ರಂದು ಮುಗ್ಗಗುತ್ತಿನಲ್ಲಿ ನವಕ ಪ್ರಧಾನ ಹೋಮ , ನಾಗತನುದ ತಂಬಿಲ, ವೆಂಕಟರಮಣ ದೇವರ ಮುಡಿಪು , ದೈವಗಳಿಗೆ ಪಂಚ ಪರ್ವ, ದೇವಿಗೆ ಸರ್ವಾಲಂಕಾರ ಪೂಜೆಯ ಬಳಿಕ ಆಡಳಿತ ಸಮಿತಿಯ ಸಭೆಯು ಜರಗಿ, ಡಾ ರಾಜಾರಾಮ್, ಚರಣ್, ಪ್ರಶಾಂತ್ ಬಂಗೇರ, ಹಾಗೂ ಕೀರ್ತಿ ಬಂಗೇರನ್ನು, ಸಮಿತಿಗೆ ಆಮಂತ್ರಿತರಾಗಿ ನೇಮಿಸಲಾಯಿತು.

ಈ ಸಂದರ್ಭದಲ್ಲಿ ಮೆಸ್ಕಾಂ ಅಧ್ಯಕ್ಷರಾಗಿ ಆಯ್ಕೆಯಾದ ಗುತ್ತಿನ ಅಧ್ಯಕ್ಷ ಕೆ ಹರೀಶ್ ಕುಮಾರ್ ಮತ್ತು ಗುರುದೇವ ವಿವಿದೋದ್ದೇಶ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಭಗೀರಥ ಜಿ ಅವರನ್ನು ಶಾಲು ಹೊದಿಸಿ ಗೌರವಿಸಲಾಯಿತು.

ಗುತ್ತಿನ ಅಭಿವೃದ್ಧಿಯಲ್ಲಿ ಸಹಕರಿಸಿದ ಹೆರಾಜೆ ಕುಟುಂಬಸ್ಥರು, ಸರ್ವೆ ದೋಳ ಶ್ರೀಮತಿ ಅನ್ವಿತಾ ಪ್ರದೀಪ್ ಪೂಜಾರಿ, ಶ್ರೀಮತಿ ಕೀರ್ತನ ರಾಜೇಂದ್ರ ಪೂಜಾರಿ ಮೂಡಬಿದ್ರಿ ಇವರನ್ನು ಅಭಿನಂದಿಸಲಾಯಿತು.
ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭದಲ್ಲಿ ಆಡಳಿತ ಮೊಕ್ತೇಸರ ಪೀತಾಂಬರ ಹೆರಾಜೆ, ಅಧ್ಯಕ್ಷ ಕೆ ಹರೀಶ್ ಕುಮಾರ್, ಉಪಾಧ್ಯಕ್ಷ ಎಂ ಜಗನ್ನಾಥ ಬಂಗೇರ, ಕಾರ್ಯದರ್ಶಿ ಭಗೀರಥ ಜಿ, ಜೊತೆ ಕಾರ್ಯದರ್ಶಿ ಸೋಮನಾಥ ಬಂಗೇರ, ಕೋಶಾಧಿಕಾರಿ ದಿನೇಶ್ ಪಿದಮ್ಮಲೆ, ಡಾ ರಾಜಾರಾಮ್ , ಕಮಲಾಕ್ಷ ಬೋಳಾರ, ಮಿತ್ರ ಹೆರಾಜೆ, ತುಕಾರಾಮ ಬಂಗೇರ, ನಾರಾಯಣ ಮಚ್ಚಿನ, ಹೇಮಾ ದಾಮೋದರ, ಶಾರದ ಕೃಷ್ಣ, ಜಾನಕಿ ಕೇಶವ, ನವೀನ್ ಬಂಗೇರ, ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

Related posts

ಶ್ರೀ ರಾಮ ಕ್ಷೇತ್ರಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭಜನಾ ತಂಡದೊಂದಿಗೆ ಭೇಟಿ

Suddi Udaya

ಬೆಳ್ತಂಗಡಿ ಬಗರ್ ಹುಕ್ಂ ಅಕ್ರಮ ಸಕ್ರಮ ಸಮಿತಿ ಸಭೆ

Suddi Udaya

ಲಾಯಿಲ : ಭಾರತೀಯ ಗಡಿ ಭದ್ರತಾ ಪಡೆಯಲ್ಲಿ ಸೇವೆಗೈದ ನಿವೃತ್ತ ಯೋಧ ಗಣೇಶ್ ಬಿ ಎಲ್ ರವರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಉಜಿರೆ: ಸೌರಭ ಆರ್ಕೇಡ್ ನಲ್ಲಿ ನೂತನ “ಸೆವೆನ್ತ್ ಹೆವೆನ್ (7th Heaven)” ಕೇಕ್ ಹೌಸ್ ಶುಭಾರಂಭ

Suddi Udaya

ಅ.11: ಬೆಳ್ತಂಗಡಿಯಲ್ಲಿ ಇಂದಿರಾ ಕ್ಯಾಂಟೀನ್‌ ಉದ್ಘಾಟನೆ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಂದ ಚಾಲನೆ

Suddi Udaya

ನ್ಯಾಯಾಲಯಕ್ಕೆ ಹಾಜರಾಗದ ವಾರಂಟು ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya
error: Content is protected !!