July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರ ಮಾರಾಟ ಮಳಿಗೆ ಯೋಜನೆ

ಬೆಳ್ತಂಗಡಿ: ಶಿರಸಿಯಲ್ಲಿ ಜನವರಿ 22 ರಿಂದ 26 ರವರೆಗೆ ಶಿರಸಿ ರೋಟರಿ ಕ್ಲಬ್ ಆಯೋಜಿಸಿದ ಆಹಾರ ಮೇಳ ಹಾಗೂ ಆಲೆಮನೆ ಉತ್ಸವ – 2026 ಕಾರ್ಯಕ್ರಮದಲ್ಲಿ ಉತ್ತರಕನ್ನಡ ಜಿಲ್ಲೆಯ ದಿವ್ಯಾಂಗರ ನೇತೃತ್ವದಲ್ಲಿ ಸೇವಾಧಾಮದಿಂದ ಪುನಶ್ಚೇತನಗೊಂಡ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರು ತಯಾರಿಸಿದ ವಿವಿಧ ಕರಕುಶಲ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಮಳಿಗೆಯನ್ನು ಹಮ್ಮಿಕೊಳ್ಳಲಾಗಿತ್ತು.

ಈ ಮಳಿಗೆಯಲ್ಲಿ ದಿವ್ಯಾಂಗರಿಂದ ತಯಾರಿಸಲಾದ ಹತ್ತಿಯಿಂದ ಬತ್ತಿ, ಉಲ್ಲನ್ ಸ್ವೇಟರ್‌ಗಳು, ಬ್ಯಾಗ್‌ಗಳು, ಟೆಡ್ಡಿ, ಕೀ ಚೈನ್, ಕೌದಿ, ಬಾಗಿಲ ತೋರಣ, ಅರಿಶಿನಪುಡಿ, ರೊಟ್ಟಿ, ಹಣ್ಣು–ಹೂವಿನ ಬುಟ್ಟಿ, ಫ್ಲೋರ್ ಮ್ಯಾಟ್, ಜೋಕಾಲಿ ಮುಂತಾದ ವಿವಿಧ ಉತ್ಪನ್ನಗಳನ್ನು ಪ್ರದರ್ಶಿಸಿ ಮಾರಾಟ ಮಾಡಲಾಯಿತು. ಉತ್ಸವದ ಭಾಗವಾಗಿ ಮಿರ್ಚಿ ಮಂಡಕ್ಕಿ ಸ್ಟಾಲ್ ಕೂಡ ಆಯೋಜಿಸಲಾಗಿದ್ದು, ಐದು ದಿನಗಳ ಅವಧಿಯಲ್ಲಿ ಸುಮಾರು ₹40,000ರ ವ್ಯಾಪಾರ ನಡೆಯಿತು. ಇದು ಕಾರ್ಯಕ್ರಮದ ಯಶಸ್ಸಿನೊಂದಿಗೆ ದಿವ್ಯಾಂಗರ ಆತ್ಮವಿಶ್ವಾಸದ ಸ್ಪಷ್ಟ ಉದಾಹರಣೆಯಾಗಿದೆ.

ಉತ್ಸವದ ಸಂದರ್ಭದಲ್ಲಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ, ಹಾಗೂ ಶಿರಸಿ–ಸಿದ್ದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಭೀಮಣ್ಣ ಟಿ. ನಾಯ್ಕ್ ರವರು ಮಳಿಗೆಯನ್ನು ಭೇಟಿ ನೀಡಿ ಸೇವಾಭಾರತಿಯ ಕಾರ್ಯವನ್ನು ಮೆಚ್ಚಿದರು. ಜೊತೆಗೆ ಶಿರಸಿ ರೋಟರಿ ಕ್ಲಬ್‌ನ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಹಾಗೂ ಸೇವಾಭಾರತಿ ಸಂಸ್ಥೆಯು ಶಿರಸಿಯಲ್ಲಿ ಆಯೋಜಿಸಿದ ವೈದ್ಯಕೀಯ ಶಿಬಿರಕ್ಕೆ ಸಹಕರಿಸಿದ್ದ ಡಾ. ದಿನೇಶ್ ಹೆಗ್ಡೆ, ಡಾ. ಸುಮನ್ ಹೆಗ್ಡೆ, ಡಾ. ಕೈಲಾಶ್ ಪೈ, ಶ್ರೀ ಮಹೇಶ್ ತೆಲಂಗ, ಶ್ರೀ ರವಿ ಹೆಗ್ಡೆ,ಗಡಿಹಳ್ಳಿ, ಡಾ. ರೋಹಿತ್ ಹೆಗ್ಡೆ, ಡಾ. ರಾಯ್ಸದ್ ಮತ್ತು ಡಾ. ವಿನಯ ಹೆಗ್ಡೆ ಮುಂತಾದವರು ಮಳಿಗೆಯನ್ನು ಸಂದರ್ಶಿಸಿದರು.

ಉತ್ಸವಕ್ಕೆ ಆಗಮಿಸಿದ ಜನಸಮೂಹದ ನಡುವೆ ಸೇವಾಭಾರತಿ ಸಂಸ್ಥೆಯ ಉದ್ದೇಶಗಳು, ಸೇವಾಧಾಮದಲ್ಲಿ ನಡೆಯುವ ದಿವ್ಯಾಂಗರ ಪುನಶ್ಚೇತನ ಕಾರ್ಯಗಳು ಹಾಗೂ ಬೆನ್ನುಹುರಿ ಅಪಘಾತದ ಬಗ್ಗೆ ಜಾಗೃತಿ ಮೂಡಿಸಲಾಯಿತು.

Related posts

ಕಳಿಯ : ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಪೂರ್ವಭಾವಿ ಸಭೆ ಹಾಗೂ ಸಮಿತಿ ರಚನೆ

Suddi Udaya

ಗರ್ಡಾಡಿ ಶಕ್ತಿ ಕೇಂದ್ರದಲ್ಲಿ ಮೂರನೇ ಸುತ್ತಿನ ಬಿರುಸಿನ ಮತಯಾಚನೆ

Suddi Udaya

ಬಳಂಜ: ಬೊಳ್ಳಾಜೆ- ಡೆಂಜೋಲಿ ರಸ್ತೆ ಮದ್ಯೆ ವಿದ್ಯುತ್ ತಂತಿ ಮೇಲೆ ಬಿದ್ದ ಮರವನ್ನು ತೆರವುಗೊಳಿಸಿದ ಸಾರ್ವಜನಿಕರು: ಅಪಾಯಕಾರಿ ಮರಗಳನ್ನು ತೆರವುಗೊಳಿಸಲು ಬಳಂಜ ಗ್ರಾ‌.ಪಂ ಹಾಗೂ ಅರಣ್ಯ ಇಲಾಖೆಗೆ ಮನವಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆಲಂಗಾಣ ರಾಜ್ಯದ ಸಾರಿಗೆ ಸಚಿವ ಪೊಣ್ಣಂ ಪ್ರಭಾಕರ್ ಭೇಟಿ

Suddi Udaya

ಪೆರಾಡಿ :ಬಂಟರ ಸಂಘ (ರಿ.)ಬೆಳ್ತಂಗಡಿ ಮತ್ತು ಬಂಟರ ಗ್ರಾಮ ಸಮಿತಿ ಪೆರಾಡಿ ಇದರ ಸರ್ವ ಸದಸ್ಯರ ಕುಟುಂಬ ಮಿಲನ ಕಾರ್ಯಕ್ರಮ

Suddi Udaya

ಜು.4: ಚಾರ್ಮಾಡಿಯಲ್ಲಿ ಹೊಸ ಮಾರುತಿ ಸುಜುಕಿ ಅರೆನಾ ಸ್ಯಾಟಲೈಟ್ ಶಾಖೆ ಆರಂಭ

Suddi Udaya
error: Content is protected !!