25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಚರ್ಚ್‌ರೋಡ್ ಬಾಡಿಗೆ ಮನೆಯಲ್ಲಿದ್ದ ರೋಷನ್ ನಾಪತ್ತೆ: ಪತ್ನಿ ಠಾಣೆಗೆ ದೂರು

ಬೆಳ್ತಂಗಡಿ: ಇಲ್ಲಿಯ ಕಸಬಾ ಗ್ರಾಮದ ಚರ್ಚ್ ರಸ್ತೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಪಿಕಪ್ ಚಾಲಕರಾಗಿ ಕೆಲಸ ಮಾಡಿಕೊಂಡಿದ್ದ ರೋಷನ್ ಕಿರಣ್ ಡಿಸೋಜ (೩೬ವ) ಎಂಬವರು ನಾಪತ್ತೆಯಾಗಿರುವುದಾಗಿ ಅವರ ಪತ್ನಿ ಲಿಖಿತ ಕೆ. ಜ.26 ರಂದು ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದಾರೆ.

ಜ.24ರಂದು ರೋಷನ್ ಅವರು ಪತ್ನಿಗೆ ಕರೆ ಮಾಡಿ, ತಾನು ಜ.25ರಂದು ಬೆಂಗಳೂರಿಗೆ ಬಸ್ಸಿನಲ್ಲಿ ಬರುವುದಾಗಿ ತಿಳಿಸಿದ್ದರು. ಸಂಜೆ ೪ ಗಂಟೆಗೆ ಪತ್ನಿ ಲಿಖಿತ ಅವರು ಪತಿಗೆ ಕರೆ ಮಾಡಿದಾಗ ಅವರು ಕರೆ ಸ್ವೀಕರಿಸಲಿಲ್ಲ. ಸಂಜೆ ೬.೨೫ಕ್ಕೆ ರೋಷನ್ ಪತ್ನಿಯ ವಾಟ್ಸ್ಯಾಪ್‌ಗೆ `ನಾನು ಇರುವುದಿಲ್ಲ’ ಎಂದು ಮೆಸೇಜ್ ಹಾಕಿದ್ದರು. ಇದರಿಂದ ಆತಂಕಗೊಂಡ ಲಿಖಿತ ಅವರು ಗಂಡನ ಮೊಬೈಲ್‌ಗೆ ಕರೆ ಮಾಡಿದರೂ ಸ್ವೀಕರಿಸಲಿಲ್ಲ. ಗಾಬರಿಗೊಂಡು ನೆರೆಯ ಪರಿಚಯಸ್ಥರನ್ನು ವಿಚಾರಿಸಿದರೂ ಯಾವುದೇ ಮಾಹಿತಿ ಲಭ್ಯವಾಗದಿದ್ದುದರಿಂದ ಕೂಡಲೇ ಬೆಂಗಳೂರಿನಿಂದ ಹೊರಟು ಬೆಳ್ತಂಗಡಿಯ ಬಾಡಿಗೆ ಮನೆಗೆ ಬಂದು ನೋಡಿದರೂ ರೋಷನ್ ಕಿರಣ್ ಡಿಸೋಜ ಮನೆಯಲ್ಲಿ ಇರಲಿಲ್ಲ. ಈ ಬಗ್ಗೆ ಅವರು ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದು, ನಾಪತ್ತೆ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣಾ ಸ್ಥಿರ ದೂರವಾಣಿ ಸಂಖ್ಯೆ (೦೮೨೫೬-೨೩೨೦೯೩) ನೇ ಅಥಾವಾ ೯೪೮೦೮೦೫೩೭೦ ನೇಯದಕ್ಕೆ ಕರೆ ಮಾಡಿ ತಿಳಿಸಿ ಕಾಣೆಯಾದವರ ಪತ್ತೆಗೆ ಸಹಕರಿಸಲು ಕೋರಿದೆ.

Related posts

ತಾಲೂಕಿನಾದ್ಯಂತ ಧಾರಕಾರ ಮಳೆ -ಅಲರ್ಟ್ ಘೋಷಣೆ

Suddi Udaya

ಕಳಿಯ ಗ್ರಾಮ ಪಂಚಾಯತ್ ನ್ಯಾಯ ಸಮಿತಿ ಸಭೆ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಪಟ್ರಮೆ ಗ್ರಾಮ ಪಂಚಾಯತ್ ಬಳಿ ಬಿಜೆಪಿ ಪ್ರತಿಭಟನೆ

Suddi Udaya

ವಿಧಾನ ಪರಿಷತ್ ಉಪಚುನಾವಣೆ : ಬೆಳ್ತಂಗಡಿ ಮಂಡಲದ ಬಿಜೆಪಿ ಚುನಾವಣಾ ಸಂಚಾಲಕರಾಗಿ ಪ್ರಭಾಕರ ಆಚಾರ್ಯ, ಸಹ ಸಂಚಾಲಕರಾಗಿ ಅರವಿಂದ ಲಾಯಿಲ

Suddi Udaya

ಆರಂಬೋಡಿ ದ.ಕ.ಜಿ.ಪಂ.ಉ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ರಚನೆ

Suddi Udaya

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!