24 C
ಪುತ್ತೂರು, ಬೆಳ್ತಂಗಡಿ
June 8, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಚರ್ಚ್‌ರೋಡ್ ಬಾಡಿಗೆ ಮನೆಯಲ್ಲಿದ್ದ ರೋಷನ್ ನಾಪತ್ತೆ: ಪತ್ನಿ ಠಾಣೆಗೆ ದೂರು

ಬೆಳ್ತಂಗಡಿ: ಇಲ್ಲಿಯ ಕಸಬಾ ಗ್ರಾಮದ ಚರ್ಚ್ ರಸ್ತೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಪಿಕಪ್ ಚಾಲಕರಾಗಿ ಕೆಲಸ ಮಾಡಿಕೊಂಡಿದ್ದ ರೋಷನ್ ಕಿರಣ್ ಡಿಸೋಜ (೩೬ವ) ಎಂಬವರು ನಾಪತ್ತೆಯಾಗಿರುವುದಾಗಿ ಅವರ ಪತ್ನಿ ಲಿಖಿತ ಕೆ. ಜ.26 ರಂದು ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದಾರೆ.

ಜ.24ರಂದು ರೋಷನ್ ಅವರು ಪತ್ನಿಗೆ ಕರೆ ಮಾಡಿ, ತಾನು ಜ.25ರಂದು ಬೆಂಗಳೂರಿಗೆ ಬಸ್ಸಿನಲ್ಲಿ ಬರುವುದಾಗಿ ತಿಳಿಸಿದ್ದರು. ಸಂಜೆ ೪ ಗಂಟೆಗೆ ಪತ್ನಿ ಲಿಖಿತ ಅವರು ಪತಿಗೆ ಕರೆ ಮಾಡಿದಾಗ ಅವರು ಕರೆ ಸ್ವೀಕರಿಸಲಿಲ್ಲ. ಸಂಜೆ ೬.೨೫ಕ್ಕೆ ರೋಷನ್ ಪತ್ನಿಯ ವಾಟ್ಸ್ಯಾಪ್‌ಗೆ `ನಾನು ಇರುವುದಿಲ್ಲ’ ಎಂದು ಮೆಸೇಜ್ ಹಾಕಿದ್ದರು. ಇದರಿಂದ ಆತಂಕಗೊಂಡ ಲಿಖಿತ ಅವರು ಗಂಡನ ಮೊಬೈಲ್‌ಗೆ ಕರೆ ಮಾಡಿದರೂ ಸ್ವೀಕರಿಸಲಿಲ್ಲ. ಗಾಬರಿಗೊಂಡು ನೆರೆಯ ಪರಿಚಯಸ್ಥರನ್ನು ವಿಚಾರಿಸಿದರೂ ಯಾವುದೇ ಮಾಹಿತಿ ಲಭ್ಯವಾಗದಿದ್ದುದರಿಂದ ಕೂಡಲೇ ಬೆಂಗಳೂರಿನಿಂದ ಹೊರಟು ಬೆಳ್ತಂಗಡಿಯ ಬಾಡಿಗೆ ಮನೆಗೆ ಬಂದು ನೋಡಿದರೂ ರೋಷನ್ ಕಿರಣ್ ಡಿಸೋಜ ಮನೆಯಲ್ಲಿ ಇರಲಿಲ್ಲ. ಈ ಬಗ್ಗೆ ಅವರು ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದು, ನಾಪತ್ತೆ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣಾ ಸ್ಥಿರ ದೂರವಾಣಿ ಸಂಖ್ಯೆ (೦೮೨೫೬-೨೩೨೦೯೩) ನೇ ಅಥಾವಾ ೯೪೮೦೮೦೫೩೭೦ ನೇಯದಕ್ಕೆ ಕರೆ ಮಾಡಿ ತಿಳಿಸಿ ಕಾಣೆಯಾದವರ ಪತ್ತೆಗೆ ಸಹಕರಿಸಲು ಕೋರಿದೆ.

Related posts

ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಬೆಳಾಲು ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಬಡಗಕಾರಂದೂರು ಸ.ಉ.ಹಿ.ಪ್ರಾ ಶಾಲೆಯಲ್ಲಿ ಶಾಲಾಭಿವೃದ್ಧಿ-ಮೇಲುಸ್ತುವಾರಿ ಸಮಿತಿಯ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಹಿರಿಯ ಪಶುಪರೀಕ್ಷಕ ರಮೇಶ್ ಅಳದಂಗಡಿ ನೇಮಕ

Suddi Udaya

ಕಳೆಂಜ: ಬಿಜೆಪಿ ಶಕ್ತಿ ಕೇಂದ್ರ ಪ್ರಮುಖ್ ಆಗಿ ಧನಂಜಯ ಗೌಡ ಆಯ್ಕೆ

Suddi Udaya

ಬೆಳಾಲು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ಮಂಗಳೂರು ಹಾಲು ಒಕ್ಕೂಟದ ನೌಕರರ ಟ್ರಸ್ಟಿನ ವತಿಯಿಂದ ಅಶೋಕ ಕುಮಾರ್ ಕುಟುಂಬಕ್ಕೆರೂ1.50 ಲಕ್ಷ ಚೆಕ್ ಹಸ್ತಾಂತರ

Suddi Udaya
error: Content is protected !!