22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಚರ್ಚ್‌ರೋಡ್ ಬಾಡಿಗೆ ಮನೆಯಲ್ಲಿದ್ದ ರೋಷನ್ ನಾಪತ್ತೆ: ಪತ್ನಿ ಠಾಣೆಗೆ ದೂರು

ಬೆಳ್ತಂಗಡಿ: ಇಲ್ಲಿಯ ಕಸಬಾ ಗ್ರಾಮದ ಚರ್ಚ್ ರಸ್ತೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಪಿಕಪ್ ಚಾಲಕರಾಗಿ ಕೆಲಸ ಮಾಡಿಕೊಂಡಿದ್ದ ರೋಷನ್ ಕಿರಣ್ ಡಿಸೋಜ (೩೬ವ) ಎಂಬವರು ನಾಪತ್ತೆಯಾಗಿರುವುದಾಗಿ ಅವರ ಪತ್ನಿ ಲಿಖಿತ ಕೆ. ಜ.26 ರಂದು ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದಾರೆ.

ಜ.24ರಂದು ರೋಷನ್ ಅವರು ಪತ್ನಿಗೆ ಕರೆ ಮಾಡಿ, ತಾನು ಜ.25ರಂದು ಬೆಂಗಳೂರಿಗೆ ಬಸ್ಸಿನಲ್ಲಿ ಬರುವುದಾಗಿ ತಿಳಿಸಿದ್ದರು. ಸಂಜೆ ೪ ಗಂಟೆಗೆ ಪತ್ನಿ ಲಿಖಿತ ಅವರು ಪತಿಗೆ ಕರೆ ಮಾಡಿದಾಗ ಅವರು ಕರೆ ಸ್ವೀಕರಿಸಲಿಲ್ಲ. ಸಂಜೆ ೬.೨೫ಕ್ಕೆ ರೋಷನ್ ಪತ್ನಿಯ ವಾಟ್ಸ್ಯಾಪ್‌ಗೆ `ನಾನು ಇರುವುದಿಲ್ಲ’ ಎಂದು ಮೆಸೇಜ್ ಹಾಕಿದ್ದರು. ಇದರಿಂದ ಆತಂಕಗೊಂಡ ಲಿಖಿತ ಅವರು ಗಂಡನ ಮೊಬೈಲ್‌ಗೆ ಕರೆ ಮಾಡಿದರೂ ಸ್ವೀಕರಿಸಲಿಲ್ಲ. ಗಾಬರಿಗೊಂಡು ನೆರೆಯ ಪರಿಚಯಸ್ಥರನ್ನು ವಿಚಾರಿಸಿದರೂ ಯಾವುದೇ ಮಾಹಿತಿ ಲಭ್ಯವಾಗದಿದ್ದುದರಿಂದ ಕೂಡಲೇ ಬೆಂಗಳೂರಿನಿಂದ ಹೊರಟು ಬೆಳ್ತಂಗಡಿಯ ಬಾಡಿಗೆ ಮನೆಗೆ ಬಂದು ನೋಡಿದರೂ ರೋಷನ್ ಕಿರಣ್ ಡಿಸೋಜ ಮನೆಯಲ್ಲಿ ಇರಲಿಲ್ಲ. ಈ ಬಗ್ಗೆ ಅವರು ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದು, ನಾಪತ್ತೆ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣಾ ಸ್ಥಿರ ದೂರವಾಣಿ ಸಂಖ್ಯೆ (೦೮೨೫೬-೨೩೨೦೯೩) ನೇ ಅಥಾವಾ ೯೪೮೦೮೦೫೩೭೦ ನೇಯದಕ್ಕೆ ಕರೆ ಮಾಡಿ ತಿಳಿಸಿ ಕಾಣೆಯಾದವರ ಪತ್ತೆಗೆ ಸಹಕರಿಸಲು ಕೋರಿದೆ.

Related posts

ತಾಲೂಕಿನಲ್ಲಿ ಶೇ.25 ರಷ್ಟು ಮತದಾನ

Suddi Udaya

ಮಂಜೊಟ್ಟಿ ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಗ್ರಾಮ ಸಂಗ್ರಾಮ್

Suddi Udaya

ಚಾತುರ್ಮಾಸ್ಯ ವೃತಾಚಾರಣೆ, ಬೆಳ್ತಂಗಡಿ ಪತ್ರಕರ್ತರ ಸಂಘದಿಂದ ಮಹಾಮಂಡಲೇಶ್ವರ ಕನ್ಯಾಡಿ ಶ್ರೀಗಳ ಭೇಟಿ

Suddi Udaya

ಬೆಳ್ತಂಗಡಿ ವಕೀಲರ ಸಂಘದ ನೇತೃತ್ವದಲ್ಲಿ ಈದ್ ಮಿಲಾದ್ ಕಾರ್ಯಕ್ರಮ

Suddi Udaya

ಅಂತರ್ ರಾಜ್ಯ ಮಹಿಳೆಯರ ವಾಲಿಬಾಲ್ ಪಂದ್ಯಾಟ : ಎಸ್.ಡಿ.ಎಂ ಕಾಲೇಜಿಗೆ ಪ್ರಶಸ್ತಿ

Suddi Udaya
error: Content is protected !!