September 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಚರ್ಚ್‌ರೋಡ್ ಬಾಡಿಗೆ ಮನೆಯಲ್ಲಿದ್ದ ರೋಷನ್ ನಾಪತ್ತೆ: ಪತ್ನಿ ಠಾಣೆಗೆ ದೂರು

ಬೆಳ್ತಂಗಡಿ: ಇಲ್ಲಿಯ ಕಸಬಾ ಗ್ರಾಮದ ಚರ್ಚ್ ರಸ್ತೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಪಿಕಪ್ ಚಾಲಕರಾಗಿ ಕೆಲಸ ಮಾಡಿಕೊಂಡಿದ್ದ ರೋಷನ್ ಕಿರಣ್ ಡಿಸೋಜ (೩೬ವ) ಎಂಬವರು ನಾಪತ್ತೆಯಾಗಿರುವುದಾಗಿ ಅವರ ಪತ್ನಿ ಲಿಖಿತ ಕೆ. ಜ.26 ರಂದು ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದಾರೆ.

ಜ.24ರಂದು ರೋಷನ್ ಅವರು ಪತ್ನಿಗೆ ಕರೆ ಮಾಡಿ, ತಾನು ಜ.25ರಂದು ಬೆಂಗಳೂರಿಗೆ ಬಸ್ಸಿನಲ್ಲಿ ಬರುವುದಾಗಿ ತಿಳಿಸಿದ್ದರು. ಸಂಜೆ ೪ ಗಂಟೆಗೆ ಪತ್ನಿ ಲಿಖಿತ ಅವರು ಪತಿಗೆ ಕರೆ ಮಾಡಿದಾಗ ಅವರು ಕರೆ ಸ್ವೀಕರಿಸಲಿಲ್ಲ. ಸಂಜೆ ೬.೨೫ಕ್ಕೆ ರೋಷನ್ ಪತ್ನಿಯ ವಾಟ್ಸ್ಯಾಪ್‌ಗೆ `ನಾನು ಇರುವುದಿಲ್ಲ’ ಎಂದು ಮೆಸೇಜ್ ಹಾಕಿದ್ದರು. ಇದರಿಂದ ಆತಂಕಗೊಂಡ ಲಿಖಿತ ಅವರು ಗಂಡನ ಮೊಬೈಲ್‌ಗೆ ಕರೆ ಮಾಡಿದರೂ ಸ್ವೀಕರಿಸಲಿಲ್ಲ. ಗಾಬರಿಗೊಂಡು ನೆರೆಯ ಪರಿಚಯಸ್ಥರನ್ನು ವಿಚಾರಿಸಿದರೂ ಯಾವುದೇ ಮಾಹಿತಿ ಲಭ್ಯವಾಗದಿದ್ದುದರಿಂದ ಕೂಡಲೇ ಬೆಂಗಳೂರಿನಿಂದ ಹೊರಟು ಬೆಳ್ತಂಗಡಿಯ ಬಾಡಿಗೆ ಮನೆಗೆ ಬಂದು ನೋಡಿದರೂ ರೋಷನ್ ಕಿರಣ್ ಡಿಸೋಜ ಮನೆಯಲ್ಲಿ ಇರಲಿಲ್ಲ. ಈ ಬಗ್ಗೆ ಅವರು ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದು, ನಾಪತ್ತೆ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣಾ ಸ್ಥಿರ ದೂರವಾಣಿ ಸಂಖ್ಯೆ (೦೮೨೫೬-೨೩೨೦೯೩) ನೇ ಅಥಾವಾ ೯೪೮೦೮೦೫೩೭೦ ನೇಯದಕ್ಕೆ ಕರೆ ಮಾಡಿ ತಿಳಿಸಿ ಕಾಣೆಯಾದವರ ಪತ್ತೆಗೆ ಸಹಕರಿಸಲು ಕೋರಿದೆ.

Related posts

ಕನ್ಯಾಡಿ ಯಕ್ಷಭಾರತಿಯಿಂದ ಮನೆ ಮನೆ ತಾಳಮದ್ದಳೆ ಚಾವಡಿಕೂಟ ಆರಂಭ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ‘ಮೈ ನೆಕ್ಸ್ಟ್ ಸ್ಟೆಪ್ ‘ ಕಾರ್ಯಕ್ರಮ

Suddi Udaya

ಬಂಗೇರ ಬ್ರಿಗೇಡ್ ಪಡಂಗಡಿ ಪಂಚಾಯತ್ ವ್ಯಾಪ್ತಿಯ ನೂತನ ಸಮಿತಿ ರಚನೆ

Suddi Udaya

ಬೆಳ್ತಂಗಡಿ ವುಮೆನ್ ಇಂಡಿಯಾ ಮೂವ್ಮೆಂಟ್, ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕೊಯ್ಯೂರು ಗ್ರಾಮ ಪಟ್ಟಣ ಪಂಚಾಯತ್ ಸೇರ್ಪಡೆ ಆದೇಶ ರದ್ದು ಪಡಿಸುವಂತೆ ಮನವಿ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಶಶಿಧರ ಅಧಿಕಾರ ಸ್ವೀಕಾರ

Suddi Udaya
error: Content is protected !!