25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ.29 (ಇಂದು): ಬದ್ಯಾರಿನಲ್ಲಿ “ಹಿಬರೋಡಿ ಯಕ್ಷೋತ್ಸವ”‌ -“ಸಹಸ್ರ ಕವಚ ಮೋಕ್ಷ” ಯಕ್ಷಗಾನ ಬಯಲಾಟ”

ಬದ್ಯಾರು:ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಿಂದ ಶ್ರೀ ಮಂಜುನಾಥ ಸ್ವಾಮಿ ಹಾಗೂ ಶ್ರೀ ಮಹಾಗಣಪತಿ ದೇವರ ಸೇವಾರ್ಥ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿಯ ನಿರಂತರ ಸೇವಾ ಬಯಲಾಟ “ಸಹಸ್ರ ಕವಚ ಮೋಕ್ಷ” ತೆಂಕಕಾರಂದೂರಿನ ಬದ್ಯಾರಿನಲ್ಲಿರುವ ಹಿಬರೋಡಿ ಅನುಗ್ರಹ ನಿಲಯದ ವಠಾರದಲ್ಲಿ ಜ.29 ರಂದು ರಾತ್ರಿ ಗಂಟೆ 7ರಿಂದ ರಾತ್ರಿ 12ರ ತನಕ ಪ್ರದರ್ಶನಗೊಂಡು ಯಕ್ಷ ಕಲಾಪ್ರೇಮಿಗಳಿಗೆ ರಸದೌತಣ ನೀಡಲಿದೆ ಎಂದು ಸೇವಾಕರ್ತರು, ಬೆಳ್ತಂಗಡಿ ಲಯನ್ಸ್ ಕ್ಲಬ್ ನಿಕಟಪೂರ್ವಧ್ಯಕ್ಷ,ಯಕ್ಷಪ್ರೇಮಿ ದೇವದಾಸ್ ಶೆಟ್ಟಿ ಹಿಬರೋಡಿ ತಿಳಿಸಿರುತ್ತಾರೆ.

ಪ್ರತಿ ವರ್ಷ ನೂತನ ಪ್ರಸಂಗ:

ಇದೇ ಸ್ಥಳದಲ್ಲಿ 2004 ಮತ್ತು 2005ರಲ್ಲಿ ಕಟೀಲು ಮೇಳದ ಪ್ರಸಂಗಗಳನ್ನು ಪ್ರದರ್ಶಿಸುವುದರೊಂದಿಗೆ ಆರಂಭವಾದ ಕಲಾಪ್ರೇಮ ನಿರಂತರ ಬೆಳೆಯುತ್ತ ಬಂದಿದೆ. 2006ರಲ್ಲಿ ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಬಯಲಾಟದೊಂದಿಗೆ ಈ ಸೇವೆ ಮುಂದುವರೆದು ಪ್ರತಿ ವರ್ಷವೂ ಅದೇ ಮೇಳದ ನೂತನ ಪ್ರಸಂಗ ಪ್ರದರ್ಶನದ ಮೂಲಕ ಜನಮನ ರಂಜನೆಯನ್ನೂ ಮಾಡಿಕೊಂಡು ಬಂದಿದೆ. ಮಧ್ಯೆ ಒಂದು ವರ್ಷ ಧರ್ಮಸ್ಥಳ ಮತ್ತು ಕಟೀಲು ಮೇಳಗಳ ಪ್ರತ್ಯೇಕ ಪ್ರದರ್ಶನಗಳೂ ಆಗಿವೆ.

ನಿರಂತರ 22ವರ್ಷಗಳಿಂದ ಸೇವೆ:

ಕಳೆದ 22 ವರ್ಷಗಳಿಂದ ನಿರಂತರ ಯಕ್ಷಗಾನ ಸೇವೆ ನಡಿತೀದೆ. ಸಾವಿರಾರು ಕಲಾಸಕ್ತರಿಗೆ ಕಲಾರಂಜನೆಯ ಜೊತೆಗೆ ಆತಿಥ್ಯ ಸತ್ಕಾರದ ಮೂಲಕವೂ ಸಂತೃಪ್ತಿಯನ್ನು ನೀಡುತ್ತಿರುವುದು ಇಲ್ಲಿರುವ ವೈಶಿಷ್ಟ್ಯ.

Related posts

ಚುನಾವಣಾ ಕಾನೂನು ಸುವ್ಯವಸ್ಥೆ, ಕಾಪಾಡುವ ಹಿತದೃಷ್ಟಿಯಿಂದ : ಎ.17 ಸೋಮವಾರ ಬೆಳ್ತಂಗಡಿ ಸಂತೆಕಟ್ಟೆ‌ಯಿಂದ ಬಸ್ ನಿಲ್ದಾಣದವರೆಗೆ ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ ವ್ಯಾಪಾರ ನಿಷೇಧ

Suddi Udaya

ವೇಣೂರು: ಸಾಯಿ ಈಶ್ವರ್ ಗುರೂಜಿಯವರ ದಿವ್ಯ ಸಂಕಲ್ಪದಂತೆ ಸನಾತನ ಹಿಂದೂ ಧರ್ಮದ 300 ಹೆಣ್ಣು ಮಕ್ಕಳಿಗೆ ಉಚಿತ ಮೂಗುತಿ ಧಾರಣೆ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಉಜಿರೆ ವಲಯ ಹಾಗೂ ಕೇಸರಿ ಗೆಳೆಯರ ಬಳಗ ಕುಂಜರ್ಪಇದರ ಆಶ್ರಯದಲ್ಲಿ ನಡೆಯುವ ” ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಸೌಜನ್ಯ ಟ್ರೋಫಿ -2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ಕರ್ನಾಟಕ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅರುಣ್ ಚಕ್ರವರ್ತಿ ಭೇಟಿ

Suddi Udaya

ಬೆಳ್ತಂಗಡಿ : ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಮೂರು ಕೋಟಿ ಅನುದಾನ ಮಂಜೂರು; ಸಮಾಜ ಕಲ್ಯಾಣ ಸಚಿವರಿಗೆ ಅಭಿನಂದನೆ

Suddi Udaya

ಗೇರುಕಟ್ಟೆ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯಿಂದ ಗೇರುಕಟ್ಟೆ ಶ್ರೀ ಗಣೇಶೋತ್ಸವ ಸಮಿತಿಯ ಸಭಾಂಗಣಕ್ಕೆ 50 ಚಯರ್ ಕೊಡುಗೆ

Suddi Udaya
error: Content is protected !!