25.5 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ನಾವೂರು: ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆ ಕಾರ್ಯಕ್ರಮಕ್ಕೆ ಧರ್ಮಸ್ಥಳದ ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಭೇಟಿ

ನಾವೂರು: ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವ, ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ, ಡಾ| ವೀಣಾ ಬನ್ನಂಜೆ ರವರಿಂದ ಜ.28ರಂದು ನಡೆದ ಆರನೇ ದಿನದ ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆ ಕಾರ್ಯಕ್ರಮಕ್ಕೆ ಧರ್ಮಸ್ಥಳದ ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಅವರು ಭೇಟಿ ನೀಡಿದರು.

ಡಾ| ವೀಣಾ ಬನ್ನಂಜೆ ರವರಿಂದ ನಡೆದ ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆಯನ್ನು ಸಂಪೂರ್ಣವಾಗಿ ಆಲಿಸಿ ನಂತರ ದೇವಸ್ಥಾನ ವತಿಯಿಂದ ಅವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ವಾರ್ಷಿಕ ಜಾತ್ರೋತ್ಸವ ಸಮಿತಿ ಅಧ್ಯಕ್ಷ ಡಾ. ಪ್ರದೀಪ್ ಎ., ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ದಶಮಾನೋತ್ಸವ ಸಮಿತಿ ಅಧ್ಯಕ್ಷ ಶಶಿಧರ್ ಶೆಟ್ಟಿ ಬರೋಡ, ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ಉಪಾಧ್ಯಕ್ಷೆ ತನುಜಾ ಶೇಖರ್, ಸಂಚಾಲಕ ಮೋಹನ್ ಬಂಗೇರ, ಸೂರ್ಯನಾರಾಯಣ ರಾವ್, ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ಅಧ್ಯಕ್ಷ ಹರೀಶ್ ಸಾಲಿಯಾನ್ ಮೊರ್ತಾಜೆ, ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಲ| ಧರ್ಣಪ್ಪ ಮೂಲ್ಯ ಕಾಯರ್ದಡಿ, ಕಾರ್ಯದರ್ಶಿ ತಿಮ್ಮಪ್ಪ ಜಿ ಗೋಳ್ತಾರ, ಕೋಶಾಧಿಕಾರಿ ಬಿ ಉಮೇಶ್ ಪ್ರಭು ಹಡೀಲು, ಸದಸ್ಯರಾದ ಎ.ಬಿ ಉಮೇಶ್ ಅತ್ಯಡ್ಕ, ಹರೀಶ್ ಕೆ ಕಾರಿಂಜ, ತನಿಯಪ್ಪ ನಲ್ಕೆ ಕಿರ್ನಡ್ಕ, ಎನ್ ಗಣೇಶ್ ಗೌಡ ನೆಲ್ಲಿಪಲ್ಕೆ, ವಾರ್ಷಿಕ ಜಾತ್ರೋತ್ಸವ ಸಮಿತಿಯ ಪದಾಧಿಕಾರಿಗಳು, ದಶಮಾನೋತ್ಸವ ಸಮಿತಿ ಪದಾಧಿಕಾರಿಗಳು, ಬೈಲುವಾರು ಸಮಿತಿ ಅಧ್ಯಕ್ಷರುಗಳು, ಪದಾಧಿಕಾರಿಗಳು, ಸರ್ವ ಸಮಿತಿಗಳು, ಊರ ಪರವೂರ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಮೊಗ್ರು: ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ -ಮುಗೇರಡ್ಕ ಬೆಳ್ಳಿಹಬ್ಬದ ಆಚರಣೆಯ ಸಮಾಲೋಚನ ಸಭೆ

Suddi Udaya

ಕಡಿರುದ್ಯಾವರ ಗ್ರಾಮ ಪಂಚಾಯತ್ ಗ್ರಾಮಸಭೆ

Suddi Udaya

ಬೆಳ್ತಂಗಡಿ ಧರ್ಮಾಧ್ಯಕ್ಷ ಲಾರೆನ್ಸ್ ಮುಕ್ಕುಝೀ ಯವರನ್ನು ಮಾಜಿ ಸಚಿವ ಮತ್ತು ಕೆಪಿಸಿಸಿ ಉಪಾಧ್ಯಕ್ಷರು ಗಂಗಾಧರ ಗೌಡ ಭೇಟಿ

Suddi Udaya

ಬೆಳ್ತಂಗಡಿಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭೋತ್ಸವ

Suddi Udaya

ಬ್ರೈನ್ ಹ್ಯಾಮರೇಜ್: ಬೆಳ್ತಂಗಡಿ ಗಣೇಶ್ ಹೋಟೆಲ್ ಮಾಲಕ ದಿವಾಕರ ಪ್ರಭು ಆಸ್ಪತ್ರೆಗೆ : ಸ್ಥಿತಿ ಗಂಭೀರ

Suddi Udaya

ಮಚ್ಚಿನ: ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!