ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಫೆ.4-5: ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವ

ವೇಣೂರು: ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರ ಬರ್ಕಜೆಯಲ್ಲಿ 11ನೇ ವರ್ಷದ ಜಾತ್ರಾ ಮಹೋತ್ಸವವು ಫೆ.4 ಮತ್ತು ಫೆ.5ರಂದು ವಿಜೃಂಭಣೆಯಿಂದ ಜರುಗಲಿದೆ ಎಂದು ಕ್ಷೇತ್ರದ ಧರ್ಮದರ್ಶಿ ರಮೇಶ್ ತಿಳಿಸಿದ್ದಾರೆ.

ಫೆ.4 ರಂದು ರಾತ್ರಿ ವಾಸ್ತುಪೂಜೆ, ವಾಸ್ತುಹೋಮ, ದಿಕ್‌ಬಲಿ ಹಾಗೂ 11 ನೇ ವರ್ಷದ ಜಾತ್ರಾ ಮಹೋತ್ಸವ ಮತ್ತು ಮಹಾಚಂಡಿಕಾಯಾಗ, ಬೆಳಿಗ್ಗೆ ಬ್ರಹ್ಮ,ವಿಷ್ಣು ಹಾಗೂ 9 ಕಾಳಿ ದೇವತೆಗಳ ಮೂರ್ತಿ ಅನಾವರಣ ನಡೆಯಲಿದೆ.
ಜ.5 ರಂದು ಬೆಳಗ್ಗೆ ನಾಗಬನದಲ್ಲಿ ಶ್ರೀ ನಾಗದೇವರಿಗೆ ತಂಬಿಲ, ಶ್ರೀ ದುರ್ಗಾದೇವಿ ಗುಡಿಯಲ್ಲಿ ಚಂಡಿಕಾಯಾಗ, ಪಂಚಾಮೃತ ಅಭಿಷೇಕ, ಪಂಚವಿಂಶತಿ ಕಲಶ, ಪಲ್ಲಪೂಜೆ, ಆದಿವಾಸ ಹೋಮ, ತುಲಾಭಾರ ಸೇವೆ, ಭಜನಾ ಕಾರ್ಯಕ್ರಮ, ವಿಶೇಷ ರಂಗಪೂಜೆ ಮತ್ತು ಮಹಾಪೂಜೆ ಪರಿವಾರ ದೈವಗಳ ಗಗ್ಗರಸೇವೆ, ಮೈಸಂದಾಯ, ದುಗಲಾಯ, ಪಂಜುರ್ಲಿ, ಮಂತ್ರದೇವತೆ, ಮೈಯಂತಿ, ಮಂತ್ರದೇವತೆ, ಸನ್ಯಾಸಿ ಗುಳಿಗ, ಕೊರಗಜ್ಜ ದೈವಗಳ ಗಗ್ಗರಸೇವೆ ಪ್ರಸಾದ ವಿತರಣೆ ಅನ್ನಸಂತರ್ಪಣೆ ಜರಗಲಿದೆ.

ರಾತ್ರಿ ನವ ಗುಳಿಗಗಳ ವಿಶೇಷ ಗಗ್ಗರ ಸೇವೆ, ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ಜರುಗಲಿದೆ.

ನವಗುಳಿಗಗಳ ಗಗ್ಗರ ಸೇವೆ ವಿಶೇಷ: ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ನವಗುಳಿಗ ಕ್ಷೇತ್ರದಲ್ಲಿ 11ನೇ ವರ್ಷದ ಜಾತ್ರಾ ಮಹೋತ್ಸವವು ವಿಜೃಂಭಣೆಯಿಂದ ನಡೆಯಲಿದ್ದು, ಕ್ಷೇತ್ರದಲ್ಲಿ ವಿವಿಧ ಧಾರ್ಮಿಕ ವಿಧಿ ವಿಧಾನಗಳು, ವಿಶೇಷವಾಗಿ ನವ ಗುಳಿಗ ದೈವಗಳ ಗಗ್ಗರ ಸೇವೆ ಹಾಗೂ ಪರಿವಾರ ದೈವಗಳ ಗಗ್ಗರ ಸೇವೆ ನಡೆಯಲಿದೆ. ಕ್ಷೇತ್ರದಲ್ಲಿ ಭಕ್ತರಿಗೆ ಎರಡು ದಿನವು ಅನ್ನಸಂತರ್ಪಣೆ ಸೇವೆ ನಡೆಯಲಿದೆ. ಊರ, ಪರವೂರ ಸರ್ವರೂ ಕೂಡ ಆಗಮಿಸಿ ದೇವರ ಕೃಪೆಗೆ ಪಾತ್ರರಾಗಬೇಕು ಎಂದು ಕ್ಷೇತ್ರದ ಧರ್ಮದರ್ಶಿ ರಮೇಶ್ ಬರ್ಕಜೆ ತಿಳಿಸಿದರು.

ರಂಗ ಮಂಟಪ ಲೋಕಾರ್ಪಣೆ: ಕಳೆದ ಹಲವಾರು ವರ್ಷಗಳಿಂದ ದೇವಸ್ಥಾನದಲ್ಲಿ ನಿರಂತರ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿರುವ ಕ್ಷೇತ್ರದ ಧರ್ಮದರ್ಶಿ ರಮೇಶ್ ಅವರು ಅವರ ಮಾತ- ಪಿತರವರ ಹೆಸರಿನಲ್ಲಿ ಸುಮಾರು ೭.೦೦ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಮತಿ ಗುಲಾಬಿ ಪೂಜಾರ್ತಿ ಮತ್ತು ದಿ.ಆದಪ್ಪ ಪೂಜಾರಿ ರಂಗಮAಟಪವು ಫೆ ೪ರಂದು ಬೆಳಿಗ್ಗೆ ವಿವಿಧ ಕ್ಷೇತ್ರದ ಗಣ್ಯರ ಸಮ್ಮುಖದಲ್ಲಿ ಲೋಕಾರ್ಪಣೆಗೊಳ್ಳಲಿದೆ.

ರಸ್ತೆ ಡಾಂಬರೀಕರಣಕ್ಕೆ ಒತ್ತಾಯ: ಬೇರೆಡೆ ಎಲ್ಲಾ ಕಡೆ ರಸ್ತೆ ಡಾಮರೀಕರಣ ಆಗಿದೆ ಆದರೆ ಬರ್ಕಜೆ ಕ್ಷೇತ್ರಕ್ಕೆ ದಿನನಿತ್ಯ ಭಕ್ತರು ಬರುವ ರಸ್ತೆ ಕಲ್ಲಣಿಯಿಂದ ಎರಡು ಕಿ.ಮೀ. ಡಾಮರೀಕರಣ ಅತೀ ಶೀಘ್ರದಲ್ಲಿ ಆಗಬೇಕಿದೆ. ಸಂಬAಧಪಟ್ಟವರಿಗೆ ಮನವಿ ಸಲ್ಲಿಸಿದ್ದರು ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ. ಯಾರೂ ಕೂಡ ಈ ರಸ್ತೆಯ ಬಗ್ಗೆ ಯಾಕೆ ಗಮನ ನೀಡುತ್ತಿಲ್ಲ ಎಂಬುದು ಕ್ಷೇತ್ರಕ್ಕೆ ಬರುವ ಭಕ್ತರು ಕೇಳುತ್ತಿದ್ದಾರೆ. ೨೦೨೭ಕ್ಕೆ ಈ ಕ್ಷೇತ್ರದ ಬ್ರಹ್ಮಕಲಶೋತ್ಸವ ನಡೆಯಲಿದೆ. ಆದುದರಿಂದ ರಸ್ತೆ ಡಾಮರೀಕರಣ ಅನಿವಾರ್ಯವಾಗಿದೆ ಎಂದು ಕ್ಷೇತ್ರದ ಧರ್ಮದರ್ಶಿ ರಮೇಶ್ ಬರ್ಕಜೆ ಹೇಳಿದರು.

Related posts

ಕಲೆ ,ಸಾಹಿತ್ಯ, ಕ್ರೀಡೆ ಮತ್ತು ಸಾಂಸ್ಕೃತಿಕವಾಗಿ ರಾಜ್ಯಮಟ್ಟದಲ್ಲಿ ಗುರುತಿಸಲ್ಪಟ್ಟ ಬಳಂಜ ಶ್ರೀ ಉಮಾಮಹೇಶ್ವರ ಯುವಕ ಮಂಡಲದ ಪದಾಧಿಕಾರಿಗಳ ಆಯ್ಕೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ. 25 ಸಾವಿರ ಸಹಾಯಧನ ವಿತರಣೆ

Suddi Udaya

ಕುಕ್ಕುಟೋದ್ಯಮದ ಸಮಸ್ಯೆಗಳ ಕುರಿತು ಬೆಂಗಳೂರಿನಲ್ಲಿ ಸಭೆ – ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಬಲವಾದ ಪ್ರತಿಪಾದನೆ

Suddi Udaya

ಮಡಂತ್ಯಾರು ಶ್ರೀ ಕೃಷ್ಣಜನ್ಮಾಷ್ಟಮಿ ಸಮಿತಿಗೆ 37ನೇ ವರ್ಷದ ಮೊಸರು ಕುಡಿಕೆ ಉತ್ಸವದ ಅಧ್ಯಕ್ಷರಾಗಿ ಬಿಜೆಪಿ ಬೆಳ್ತಂಗಡಿ ಮಂಡಲದ ಪ್ರಧಾನ ಕಾರ್ಯದರ್ಶಿ, ಸಾಮಾಜಿಕ ಕ್ಷೇತ್ರದ ಮುಂದಾಳು ಪ್ರಶಾಂತ್ ಎಂ. ಪಾರೆಂಕಿ ಗೌರವಾಧ್ಯಕ್ಷರಾಗಿ ಸಮಾಜಸೇವಕ, ಉದ್ಯಮಿ ಹಾಗೂ ಕೊಡುಗೈ ದಾನಿ ಪದ್ಮನಾಭ ಸುವರ್ಣ ಬಳ್ಳಮಂಜ

Suddi Udaya

ಅಂತರ್ ಕಾಲೇಜು “ತುಳು ಐಸಿರೇ- 2023” : ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮ

Suddi Udaya
error: Content is protected !!