38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಫೆ.5-6: ಶಿಬಾಜೆ ಶ್ರೀಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶತಚಂಡಿಕಾಯಾಗ ಮತ್ತು ನವೀಕೃತ ರಾಜಾಂಗಣದ ಲೋಕಾರ್ಪಣೆ

ಶಿಬಾಜೆ ಶ್ರೀಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥ ಶತಚಂಡಿಕಾಯಾಗ ಮತ್ತು ನವೀಕೃತ ರಾಜಾಂಗಣದ ಲೋಕಾರ್ಪಣೆ ಕಾರ್ಯಕ್ರಮ ಫೆ. 5 ಮತ್ತು 6 ರಂದು ಶ್ರೀಕ್ಷೇತ್ರದ ತಂತ್ರಿವರ್ಯರಾದ ಕೆಮ್ಮಿಂಜೆ ಶ್ರೀ ನಾಗೇಶ ತಂತ್ರಿಗಳ ಉಪಸ್ಥಿತಿಯಲ್ಲಿ ನಡೆಯಲಿದೆ.

ವೈದಿಕ ಕಾರ್ಯಕ್ರಮಗಳು: ಫೆ.05 ಬೆಳಿಗ್ಗೆ ವೇದಘೋಷಪೂರ್ವಕ ದೇವತಾ ಪ್ರಾರ್ಥನೆ, ಅವಿಘ್ನ ಗಣಪತಿ ಪೂಜೆ, ಪುಣ್ಯಾಹ ವಾಚನ, ಆಚಾರ್ಯಾದಿ ಋತ್ವಿಕ್‌ರಣ – ಮಧುಪರ್ಕ, ನವೀಕೃತ ರಾಜಾಂಗಣ ಉದ್ಘಾಟನೆ, ಭಜನಾ ಸೇವೆ ಆರಂಭ, ಶ್ರೀ ಕ್ಷೇತ್ರ ದೈವಗಳಿಗೆ ತಂಬಿಲ, ಶ್ರೀಸೂಕ್ತ ಪಾರಾಯಣ, ಅಥರ್ವ ಶೀರ್ಷ ಪಾರಾಯಣ, ಪ್ರಾಸಾದ ಶುದ್ಧಿ, ಸಗ್ರಹ ಅಷ್ಟೋತ್ತರಶತ ಮೋದಕ ಹೋಮ. ಯಾಗಶಾಲಾ ಚತುರ್ದ್ವಾರ ಪೂಜೆ, ಕಲಶಾರಾಧನೆ, ದೇವತಾ ಸ್ಥಾಪನೆ, ದೇವೀ ಸೂಕ್ತ ಪಾರಾಯಣ, ದುರ್ಗಾಸೂಕ್ತ ಪಾರಾಯಣ, ಚತುಃಷಷ್ಟಿ ಯೋಗಿನೀ ಪೂಜೆ, ಕ್ಷೇತ್ರದ ದೇವರಿಗೆ ಮಹಾಪೂಜೆ, ಮಂಗಳಾರತಿ, ಪ್ರಸಾದ ವಿನಿಯೋಗ.

ಸಂಜೆ ಅರಣಿ ಮಥನ, ಅಗ್ನಿಜನನ, ಕುಂಡ ಸಂಸ್ಕಾರ, ಅಗ್ನಿ ಪ್ರತಿಷ್ಠೆ, ವೇದ ಪಾರಾಯಣ, ಕಲಶಾರಾಧನೆ, ಅಷ್ಟಾವಧಾನ ಸೇವೆ, ಶ್ರೀಕ್ಷೇತ್ರದ ದೇವರಿಗೆ ರಂಗಪೂಜೆ, ರಾತ್ರಿ ಗಂಟೆ 8.00ಕ್ಕೆ ಮಂಗಳಾರತಿ, ಪ್ರಸಾದ ವಿನಿಯೋಗ.

ಫೆ.06 ರಂದು ಉಷಃಕಾಲ ಪೂಜೆ, ದುರ್ಗಾಯಂತ್ರಮಂಡಲ ಪೂಜೆ, ಪೂರ್ವಾಂಗ ಹೋಮ ಪ್ರಯೋಗ, ಚಂಡಿಕಾಹೋಮ, ತರ್ಪ ಬಲಿದಾನ. ಪೂರ್ಣಾಹುತಿ, ಸುವಾಸಿನೀ, ಕುಮಾರಿಕಾ, ದಂಪತಿ ಪೂಜೆ, ಕರ್ಮ ಸಮಾಪ್ತಿ, ಫಲಮಂತ್ರಾಕ್ಷತೆ, ಆಶೀರ್ವಚನ. ಶ್ರೀ ದೇವ ಮಹಾಪೂಜೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಲಿದೆ.

Related posts

ದಂತ ವೈದ್ಯಕೀಯದಲ್ಲಿ ಅತ್ಯುತ್ತಮ ಸಾಧನೆ ತೋರಿದ ಬೆಳ್ತಂಗಡಿಯ ಹಮ್ನಾ ಜಝೀಲಾ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ

Suddi Udaya

ಕಾಜೂರು: ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಾಗಾರ

Suddi Udaya

ಪಟ್ರಮೆ: ಪಟ್ಟೂರು ಗುತ್ತು ಮನೆತನದ ನಿವಾಸಿ ಕುಂಞಣ್ಣ ಶೆಟ್ಟಿ ನಿಧನ

Suddi Udaya

ಮೊಗ್ರು ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಗಂಗಾಧರ ಪೂಜಾರಿ, ಉಪಾಧ್ಯಕ್ಷರಾಗಿ ಕೃಷ್ಣ

Suddi Udaya

ರಾಜ್ಯಮಟ್ಟದ ಜನಪದ ಗೀತಗಾಯನದಲ್ಲಿ ವಾಣಿ ಕಾಲೇಜಿನ ರೇಂಜರ್ಸ್ ತಂಡ ಪ್ರಥಮ

Suddi Udaya
error: Content is protected !!