25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಫೆ.5-6: ಶಿಬಾಜೆ ಶ್ರೀಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶತಚಂಡಿಕಾಯಾಗ ಮತ್ತು ನವೀಕೃತ ರಾಜಾಂಗಣದ ಲೋಕಾರ್ಪಣೆ

ಶಿಬಾಜೆ ಶ್ರೀಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥ ಶತಚಂಡಿಕಾಯಾಗ ಮತ್ತು ನವೀಕೃತ ರಾಜಾಂಗಣದ ಲೋಕಾರ್ಪಣೆ ಕಾರ್ಯಕ್ರಮ ಫೆ. 5 ಮತ್ತು 6 ರಂದು ಶ್ರೀಕ್ಷೇತ್ರದ ತಂತ್ರಿವರ್ಯರಾದ ಕೆಮ್ಮಿಂಜೆ ಶ್ರೀ ನಾಗೇಶ ತಂತ್ರಿಗಳ ಉಪಸ್ಥಿತಿಯಲ್ಲಿ ನಡೆಯಲಿದೆ.

ವೈದಿಕ ಕಾರ್ಯಕ್ರಮಗಳು: ಫೆ.05 ಬೆಳಿಗ್ಗೆ ವೇದಘೋಷಪೂರ್ವಕ ದೇವತಾ ಪ್ರಾರ್ಥನೆ, ಅವಿಘ್ನ ಗಣಪತಿ ಪೂಜೆ, ಪುಣ್ಯಾಹ ವಾಚನ, ಆಚಾರ್ಯಾದಿ ಋತ್ವಿಕ್‌ರಣ – ಮಧುಪರ್ಕ, ನವೀಕೃತ ರಾಜಾಂಗಣ ಉದ್ಘಾಟನೆ, ಭಜನಾ ಸೇವೆ ಆರಂಭ, ಶ್ರೀ ಕ್ಷೇತ್ರ ದೈವಗಳಿಗೆ ತಂಬಿಲ, ಶ್ರೀಸೂಕ್ತ ಪಾರಾಯಣ, ಅಥರ್ವ ಶೀರ್ಷ ಪಾರಾಯಣ, ಪ್ರಾಸಾದ ಶುದ್ಧಿ, ಸಗ್ರಹ ಅಷ್ಟೋತ್ತರಶತ ಮೋದಕ ಹೋಮ. ಯಾಗಶಾಲಾ ಚತುರ್ದ್ವಾರ ಪೂಜೆ, ಕಲಶಾರಾಧನೆ, ದೇವತಾ ಸ್ಥಾಪನೆ, ದೇವೀ ಸೂಕ್ತ ಪಾರಾಯಣ, ದುರ್ಗಾಸೂಕ್ತ ಪಾರಾಯಣ, ಚತುಃಷಷ್ಟಿ ಯೋಗಿನೀ ಪೂಜೆ, ಕ್ಷೇತ್ರದ ದೇವರಿಗೆ ಮಹಾಪೂಜೆ, ಮಂಗಳಾರತಿ, ಪ್ರಸಾದ ವಿನಿಯೋಗ.

ಸಂಜೆ ಅರಣಿ ಮಥನ, ಅಗ್ನಿಜನನ, ಕುಂಡ ಸಂಸ್ಕಾರ, ಅಗ್ನಿ ಪ್ರತಿಷ್ಠೆ, ವೇದ ಪಾರಾಯಣ, ಕಲಶಾರಾಧನೆ, ಅಷ್ಟಾವಧಾನ ಸೇವೆ, ಶ್ರೀಕ್ಷೇತ್ರದ ದೇವರಿಗೆ ರಂಗಪೂಜೆ, ರಾತ್ರಿ ಗಂಟೆ 8.00ಕ್ಕೆ ಮಂಗಳಾರತಿ, ಪ್ರಸಾದ ವಿನಿಯೋಗ.

ಫೆ.06 ರಂದು ಉಷಃಕಾಲ ಪೂಜೆ, ದುರ್ಗಾಯಂತ್ರಮಂಡಲ ಪೂಜೆ, ಪೂರ್ವಾಂಗ ಹೋಮ ಪ್ರಯೋಗ, ಚಂಡಿಕಾಹೋಮ, ತರ್ಪ ಬಲಿದಾನ. ಪೂರ್ಣಾಹುತಿ, ಸುವಾಸಿನೀ, ಕುಮಾರಿಕಾ, ದಂಪತಿ ಪೂಜೆ, ಕರ್ಮ ಸಮಾಪ್ತಿ, ಫಲಮಂತ್ರಾಕ್ಷತೆ, ಆಶೀರ್ವಚನ. ಶ್ರೀ ದೇವ ಮಹಾಪೂಜೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಲಿದೆ.

Related posts

ಸ್ಟಾರ್ ಲೈನ್ ಆಂ.ಮಾ. ಶಾಲೆ ರಝ ಗಾರ್ಡನ್ ಮಂಜೊಟ್ಟಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಲಾಯಿಲದಲ್ಲಿ ನಡೆದಿರುವುದು ವಾಮಾಚಾರ ಅಲ್ಲ, ದೋಷ ಪರಿಹಾರದ ಪೂಜೆ

Suddi Udaya

ಹುಣ್ಸೆಕಟ್ಟೆ ಪಲ್ಕೆ ನಿವಾಸಿ ನಾರಾಯಣ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಗುರುದೇವ ಮಠದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಬೆಳ್ತಂಗಡಿ: ಜೈನ್ ಮೊಬೈಲ್ ಮತ್ತು ನ್ಯೂ ಜೈನ್ ಮೊಬೈಲ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ದರ ಕಡಿತ ಮಾರಾಟ: ಪ್ರತಿ ಖರೀದಿಗೂ ಪಡೆಯಿರಿ ಕೂಪನ್ ಹಾಗೂ ಅಧಿಕ ಬಹುಮಾನಗಳು

Suddi Udaya

ಭಗೀನಿಯರ ಸುವರ್ಣ ಸಂಭ್ರಮ: ಧರ್ಮಾಧ್ಯಕ್ಷರಿಂದ ಗೌರವ ಮತ್ತು ಅಭಿನಂದನೆ

Suddi Udaya
error: Content is protected !!