25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಚರ್ಚ್‌ರೋಡ್ ಬಾಡಿಗೆ ಮನೆಯಲ್ಲಿದ್ದ ರೋಷನ್ ನಾಪತ್ತೆ: ಪತ್ನಿ ಠಾಣೆಗೆ ದೂರು

ಬೆಳ್ತಂಗಡಿ: ಇಲ್ಲಿಯ ಕಸಬಾ ಗ್ರಾಮದ ಚರ್ಚ್ ರಸ್ತೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಪಿಕಪ್ ಚಾಲಕರಾಗಿ ಕೆಲಸ ಮಾಡಿಕೊಂಡಿದ್ದ ರೋಷನ್ ಕಿರಣ್ ಡಿಸೋಜ (೩೬ವ) ಎಂಬವರು ನಾಪತ್ತೆಯಾಗಿರುವುದಾಗಿ ಅವರ ಪತ್ನಿ ಲಿಖಿತ ಕೆ. ಜ.26 ರಂದು ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದಾರೆ.

ಜ.24ರಂದು ರೋಷನ್ ಅವರು ಪತ್ನಿಗೆ ಕರೆ ಮಾಡಿ, ತಾನು ಜ.25ರಂದು ಬೆಂಗಳೂರಿಗೆ ಬಸ್ಸಿನಲ್ಲಿ ಬರುವುದಾಗಿ ತಿಳಿಸಿದ್ದರು. ಸಂಜೆ ೪ ಗಂಟೆಗೆ ಪತ್ನಿ ಲಿಖಿತ ಅವರು ಪತಿಗೆ ಕರೆ ಮಾಡಿದಾಗ ಅವರು ಕರೆ ಸ್ವೀಕರಿಸಲಿಲ್ಲ. ಸಂಜೆ ೬.೨೫ಕ್ಕೆ ರೋಷನ್ ಪತ್ನಿಯ ವಾಟ್ಸ್ಯಾಪ್‌ಗೆ `ನಾನು ಇರುವುದಿಲ್ಲ’ ಎಂದು ಮೆಸೇಜ್ ಹಾಕಿದ್ದರು. ಇದರಿಂದ ಆತಂಕಗೊಂಡ ಲಿಖಿತ ಅವರು ಗಂಡನ ಮೊಬೈಲ್‌ಗೆ ಕರೆ ಮಾಡಿದರೂ ಸ್ವೀಕರಿಸಲಿಲ್ಲ. ಗಾಬರಿಗೊಂಡು ನೆರೆಯ ಪರಿಚಯಸ್ಥರನ್ನು ವಿಚಾರಿಸಿದರೂ ಯಾವುದೇ ಮಾಹಿತಿ ಲಭ್ಯವಾಗದಿದ್ದುದರಿಂದ ಕೂಡಲೇ ಬೆಂಗಳೂರಿನಿಂದ ಹೊರಟು ಬೆಳ್ತಂಗಡಿಯ ಬಾಡಿಗೆ ಮನೆಗೆ ಬಂದು ನೋಡಿದರೂ ರೋಷನ್ ಕಿರಣ್ ಡಿಸೋಜ ಮನೆಯಲ್ಲಿ ಇರಲಿಲ್ಲ. ಈ ಬಗ್ಗೆ ಅವರು ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದು, ನಾಪತ್ತೆ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣಾ ಸ್ಥಿರ ದೂರವಾಣಿ ಸಂಖ್ಯೆ (೦೮೨೫೬-೨೩೨೦೯೩) ನೇ ಅಥಾವಾ ೯೪೮೦೮೦೫೩೭೦ ನೇಯದಕ್ಕೆ ಕರೆ ಮಾಡಿ ತಿಳಿಸಿ ಕಾಣೆಯಾದವರ ಪತ್ತೆಗೆ ಸಹಕರಿಸಲು ಕೋರಿದೆ.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಧರ್ಮಸ್ಥಳ ಕುರಿತು ನಡೆಯುತ್ತಿರುವ ಅಪಪ್ರಚಾರ ವಿರೋಧಿಸಿ, ಬೆಂಗಳೂರಿಂದ ಧರ್ಮಸ್ಥಳ ಚಲೋ’ ಅಭಿಯಾನ ಆರಂಭ: 400ಕ್ಕೂ ಹೆಚ್ಚು ವಾಹನಗಳಲ್ಲಿ ಆಗಮಿಸುತ್ತಿರುವ ಭಕ್ತರು

Suddi Udaya

ರಬ್ಬರ್ ಕೃಷಿಕರ ಸಮಸ್ಯೆ ಬಗ್ಗೆ ರಾಜ್ಯಸಭಾ ಸದಸ್ಯ, ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಮನವಿ

Suddi Udaya

ನಾವೂರು ಗ್ರಾಮ ಪಂಚಾಯತ್‌ನಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಇಂದಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!