July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಚರ್ಚ್‌ರೋಡ್ ಬಾಡಿಗೆ ಮನೆಯಲ್ಲಿದ್ದ ರೋಷನ್ ನಾಪತ್ತೆ: ಪತ್ನಿ ಠಾಣೆಗೆ ದೂರು

ಬೆಳ್ತಂಗಡಿ: ಇಲ್ಲಿಯ ಕಸಬಾ ಗ್ರಾಮದ ಚರ್ಚ್ ರಸ್ತೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಪಿಕಪ್ ಚಾಲಕರಾಗಿ ಕೆಲಸ ಮಾಡಿಕೊಂಡಿದ್ದ ರೋಷನ್ ಕಿರಣ್ ಡಿಸೋಜ (೩೬ವ) ಎಂಬವರು ನಾಪತ್ತೆಯಾಗಿರುವುದಾಗಿ ಅವರ ಪತ್ನಿ ಲಿಖಿತ ಕೆ. ಜ.26 ರಂದು ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದಾರೆ.

ಜ.24ರಂದು ರೋಷನ್ ಅವರು ಪತ್ನಿಗೆ ಕರೆ ಮಾಡಿ, ತಾನು ಜ.25ರಂದು ಬೆಂಗಳೂರಿಗೆ ಬಸ್ಸಿನಲ್ಲಿ ಬರುವುದಾಗಿ ತಿಳಿಸಿದ್ದರು. ಸಂಜೆ ೪ ಗಂಟೆಗೆ ಪತ್ನಿ ಲಿಖಿತ ಅವರು ಪತಿಗೆ ಕರೆ ಮಾಡಿದಾಗ ಅವರು ಕರೆ ಸ್ವೀಕರಿಸಲಿಲ್ಲ. ಸಂಜೆ ೬.೨೫ಕ್ಕೆ ರೋಷನ್ ಪತ್ನಿಯ ವಾಟ್ಸ್ಯಾಪ್‌ಗೆ `ನಾನು ಇರುವುದಿಲ್ಲ’ ಎಂದು ಮೆಸೇಜ್ ಹಾಕಿದ್ದರು. ಇದರಿಂದ ಆತಂಕಗೊಂಡ ಲಿಖಿತ ಅವರು ಗಂಡನ ಮೊಬೈಲ್‌ಗೆ ಕರೆ ಮಾಡಿದರೂ ಸ್ವೀಕರಿಸಲಿಲ್ಲ. ಗಾಬರಿಗೊಂಡು ನೆರೆಯ ಪರಿಚಯಸ್ಥರನ್ನು ವಿಚಾರಿಸಿದರೂ ಯಾವುದೇ ಮಾಹಿತಿ ಲಭ್ಯವಾಗದಿದ್ದುದರಿಂದ ಕೂಡಲೇ ಬೆಂಗಳೂರಿನಿಂದ ಹೊರಟು ಬೆಳ್ತಂಗಡಿಯ ಬಾಡಿಗೆ ಮನೆಗೆ ಬಂದು ನೋಡಿದರೂ ರೋಷನ್ ಕಿರಣ್ ಡಿಸೋಜ ಮನೆಯಲ್ಲಿ ಇರಲಿಲ್ಲ. ಈ ಬಗ್ಗೆ ಅವರು ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದು, ನಾಪತ್ತೆ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣಾ ಸ್ಥಿರ ದೂರವಾಣಿ ಸಂಖ್ಯೆ (೦೮೨೫೬-೨೩೨೦೯೩) ನೇ ಅಥಾವಾ ೯೪೮೦೮೦೫೩೭೦ ನೇಯದಕ್ಕೆ ಕರೆ ಮಾಡಿ ತಿಳಿಸಿ ಕಾಣೆಯಾದವರ ಪತ್ತೆಗೆ ಸಹಕರಿಸಲು ಕೋರಿದೆ.

Related posts

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಹಾಗೂ ಪ್ರಜಾಪ್ರಭುತ್ವ ವೇದಿಕೆ ಬೆಳ್ತಂಗಡಿ ವತಿಯಿಂದ ಕೋಲ್ಕತ್ತಾದ ಮೆಡಿಕಲ್ ವಿದ್ಯಾರ್ಥಿನಿ ಹತ್ಯೆ ಪ್ರಕರಣ ಖಂಡಿಸಿ ಪಂಜಿನ ಮೆರವಣಿಗೆ

Suddi Udaya

ಶ್ಲೋಕ ಕಂಠಪಾಠ : ಉರುವಾಲು ಶ್ರೀ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ರಿಷಿಕ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಚಾರ್ಮಾಡಿ ಘಾಟ್ ತಿರುವಿನಲ್ಲಿ ಕಾಡಾನೆ ಪ್ರತ್ಯಕ್ಷ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯಿಂದ ತಾಲೂಕಿನ ಸಾಧಕ ಮಹಿಳೆಯರಿಗೆ ಪಂಚರತ್ನ ಪ್ರಶಸ್ತಿ ಪುರಸ್ಕಾರ

Suddi Udaya

ಬೆಳ್ತಂಗಡಿ ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘ ಪದಾಧಿಕಾರಿಗಳ ಆಯ್ಕೆ

Suddi Udaya

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುರುವಾಯನಕೆರೆಯಲ್ಲಿ 76ನೇ ಗಣರಾಜ್ಯೋತ್ಸವ

Suddi Udaya
error: Content is protected !!