25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ.29 (ಇಂದು): ಬದ್ಯಾರಿನಲ್ಲಿ “ಹಿಬರೋಡಿ ಯಕ್ಷೋತ್ಸವ”‌ -“ಸಹಸ್ರ ಕವಚ ಮೋಕ್ಷ” ಯಕ್ಷಗಾನ ಬಯಲಾಟ”

ಬದ್ಯಾರು:ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಿಂದ ಶ್ರೀ ಮಂಜುನಾಥ ಸ್ವಾಮಿ ಹಾಗೂ ಶ್ರೀ ಮಹಾಗಣಪತಿ ದೇವರ ಸೇವಾರ್ಥ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿಯ ನಿರಂತರ ಸೇವಾ ಬಯಲಾಟ “ಸಹಸ್ರ ಕವಚ ಮೋಕ್ಷ” ತೆಂಕಕಾರಂದೂರಿನ ಬದ್ಯಾರಿನಲ್ಲಿರುವ ಹಿಬರೋಡಿ ಅನುಗ್ರಹ ನಿಲಯದ ವಠಾರದಲ್ಲಿ ಜ.29 ರಂದು ರಾತ್ರಿ ಗಂಟೆ 7ರಿಂದ ರಾತ್ರಿ 12ರ ತನಕ ಪ್ರದರ್ಶನಗೊಂಡು ಯಕ್ಷ ಕಲಾಪ್ರೇಮಿಗಳಿಗೆ ರಸದೌತಣ ನೀಡಲಿದೆ ಎಂದು ಸೇವಾಕರ್ತರು, ಬೆಳ್ತಂಗಡಿ ಲಯನ್ಸ್ ಕ್ಲಬ್ ನಿಕಟಪೂರ್ವಧ್ಯಕ್ಷ,ಯಕ್ಷಪ್ರೇಮಿ ದೇವದಾಸ್ ಶೆಟ್ಟಿ ಹಿಬರೋಡಿ ತಿಳಿಸಿರುತ್ತಾರೆ.

ಪ್ರತಿ ವರ್ಷ ನೂತನ ಪ್ರಸಂಗ:

ಇದೇ ಸ್ಥಳದಲ್ಲಿ 2004 ಮತ್ತು 2005ರಲ್ಲಿ ಕಟೀಲು ಮೇಳದ ಪ್ರಸಂಗಗಳನ್ನು ಪ್ರದರ್ಶಿಸುವುದರೊಂದಿಗೆ ಆರಂಭವಾದ ಕಲಾಪ್ರೇಮ ನಿರಂತರ ಬೆಳೆಯುತ್ತ ಬಂದಿದೆ. 2006ರಲ್ಲಿ ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಬಯಲಾಟದೊಂದಿಗೆ ಈ ಸೇವೆ ಮುಂದುವರೆದು ಪ್ರತಿ ವರ್ಷವೂ ಅದೇ ಮೇಳದ ನೂತನ ಪ್ರಸಂಗ ಪ್ರದರ್ಶನದ ಮೂಲಕ ಜನಮನ ರಂಜನೆಯನ್ನೂ ಮಾಡಿಕೊಂಡು ಬಂದಿದೆ. ಮಧ್ಯೆ ಒಂದು ವರ್ಷ ಧರ್ಮಸ್ಥಳ ಮತ್ತು ಕಟೀಲು ಮೇಳಗಳ ಪ್ರತ್ಯೇಕ ಪ್ರದರ್ಶನಗಳೂ ಆಗಿವೆ.

ನಿರಂತರ 22ವರ್ಷಗಳಿಂದ ಸೇವೆ:

ಕಳೆದ 22 ವರ್ಷಗಳಿಂದ ನಿರಂತರ ಯಕ್ಷಗಾನ ಸೇವೆ ನಡಿತೀದೆ. ಸಾವಿರಾರು ಕಲಾಸಕ್ತರಿಗೆ ಕಲಾರಂಜನೆಯ ಜೊತೆಗೆ ಆತಿಥ್ಯ ಸತ್ಕಾರದ ಮೂಲಕವೂ ಸಂತೃಪ್ತಿಯನ್ನು ನೀಡುತ್ತಿರುವುದು ಇಲ್ಲಿರುವ ವೈಶಿಷ್ಟ್ಯ.

Related posts

ಗಾಳಿ ಮಳೆಗೆ ಕುಸಿದು ಬಿದ್ದ ಮನೆ : ಉಜಿರೆ ಗ್ರಾ.ಪಂ. ನಿಂದ ರೂ.10 ಸಾವಿರ ಪರಿಹಾರ ಮಂಜೂರು

Suddi Udaya

ನಾಳೆ(ಫೆ. 7): ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಕಾರ್ಯಾಲಯ ಉದ್ಘಾಟನೆ

Suddi Udaya

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಅದೃಷ್ಟ ಕೂಪನ್ ಡ್ರಾ ವಿಜೇತರು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೀರೆ ವಿತರಣೆ

Suddi Udaya

ಸುವರ್ಣ ಸಾಂಸ್ಕೃತಿಕ ವೈಭವ: ಜೋಡು ಜೀಟಿಗೆ ನಾಟಕ ಸಾವಿರಾರು ಜನರಿಂದ ವೀಕ್ಷಣೆ : ಸಾಂಸ್ಕೃತಿಕ ರಾಯಭಾರಿ ಸಂಪತ್ ಬಿ ಸುವರ್ಣರವರಿಗೆ ವ್ಯಾಪಕ ಮೆಚ್ಚುಗೆ

Suddi Udaya

ನಾರಾವಿ ಉ.ಪ್ರಾಥಮಿಕ ಶಾಲೆ: ಪುಸ್ತಕ ವಿತರಣೆ

Suddi Udaya
error: Content is protected !!