22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪ್ರತಿಷ್ಠಿತ ಬಿಲ್ಲವ ಗುತ್ತು ಮನೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ : ಕರಾಯ ಗ್ರಾಮದ ಮುಗ್ಗ ಗುತ್ತು ಶ್ರೀ ದುರ್ಗಾಂಬಿಕಾ ದೇವಿಯ ವಾರ್ಷಿಕ ಪೂಜೆಯನ್ನು ಜ.28 ರಂದು ಮುಗ್ಗಗುತ್ತಿನಲ್ಲಿ ನವಕ ಪ್ರಧಾನ ಹೋಮ , ನಾಗತನುದ ತಂಬಿಲ, ವೆಂಕಟರಮಣ ದೇವರ ಮುಡಿಪು , ದೈವಗಳಿಗೆ ಪಂಚ ಪರ್ವ, ದೇವಿಗೆ ಸರ್ವಾಲಂಕಾರ ಪೂಜೆಯ ಬಳಿಕ ಆಡಳಿತ ಸಮಿತಿಯ ಸಭೆಯು ಜರಗಿ, ಡಾ ರಾಜಾರಾಮ್, ಚರಣ್, ಪ್ರಶಾಂತ್ ಬಂಗೇರ, ಹಾಗೂ ಕೀರ್ತಿ ಬಂಗೇರನ್ನು, ಸಮಿತಿಗೆ ಆಮಂತ್ರಿತರಾಗಿ ನೇಮಿಸಲಾಯಿತು.

ಈ ಸಂದರ್ಭದಲ್ಲಿ ಮೆಸ್ಕಾಂ ಅಧ್ಯಕ್ಷರಾಗಿ ಆಯ್ಕೆಯಾದ ಗುತ್ತಿನ ಅಧ್ಯಕ್ಷ ಕೆ ಹರೀಶ್ ಕುಮಾರ್ ಮತ್ತು ಗುರುದೇವ ವಿವಿದೋದ್ದೇಶ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಭಗೀರಥ ಜಿ ಅವರನ್ನು ಶಾಲು ಹೊದಿಸಿ ಗೌರವಿಸಲಾಯಿತು.

ಗುತ್ತಿನ ಅಭಿವೃದ್ಧಿಯಲ್ಲಿ ಸಹಕರಿಸಿದ ಹೆರಾಜೆ ಕುಟುಂಬಸ್ಥರು, ಸರ್ವೆ ದೋಳ ಶ್ರೀಮತಿ ಅನ್ವಿತಾ ಪ್ರದೀಪ್ ಪೂಜಾರಿ, ಶ್ರೀಮತಿ ಕೀರ್ತನ ರಾಜೇಂದ್ರ ಪೂಜಾರಿ ಮೂಡಬಿದ್ರಿ ಇವರನ್ನು ಅಭಿನಂದಿಸಲಾಯಿತು.
ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭದಲ್ಲಿ ಆಡಳಿತ ಮೊಕ್ತೇಸರ ಪೀತಾಂಬರ ಹೆರಾಜೆ, ಅಧ್ಯಕ್ಷ ಕೆ ಹರೀಶ್ ಕುಮಾರ್, ಉಪಾಧ್ಯಕ್ಷ ಎಂ ಜಗನ್ನಾಥ ಬಂಗೇರ, ಕಾರ್ಯದರ್ಶಿ ಭಗೀರಥ ಜಿ, ಜೊತೆ ಕಾರ್ಯದರ್ಶಿ ಸೋಮನಾಥ ಬಂಗೇರ, ಕೋಶಾಧಿಕಾರಿ ದಿನೇಶ್ ಪಿದಮ್ಮಲೆ, ಡಾ ರಾಜಾರಾಮ್ , ಕಮಲಾಕ್ಷ ಬೋಳಾರ, ಮಿತ್ರ ಹೆರಾಜೆ, ತುಕಾರಾಮ ಬಂಗೇರ, ನಾರಾಯಣ ಮಚ್ಚಿನ, ಹೇಮಾ ದಾಮೋದರ, ಶಾರದ ಕೃಷ್ಣ, ಜಾನಕಿ ಕೇಶವ, ನವೀನ್ ಬಂಗೇರ, ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ

Suddi Udaya

ಪ.ಜಾತಿ ಮತ್ತು ಪ.ಪಂಗಡದ ವಿದ್ಯಾರ್ಥಿಗಳಿಂದ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ ದಾಖಲಿಸಲು ಅರ್ಜಿ ಆಹ್ವಾನ

Suddi Udaya

ದಿಡುಪೆ: ಮರದಿಂದ ಬಿದ್ದು ವ್ಯಕ್ತಿ ಸಾವು

Suddi Udaya

ಅರಸಿನಮಕ್ಕಿ ಶ್ರೀ ಕ್ಷೇ.ಧ.ಶೌ.ವಿ.ನಿ. ಘಟಕ ಮತ್ತು ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ ಸಹಭಾಗಿತ್ವದಲ್ಲಿ ವನ್ಯಜೀವಿ ಕಾಳಜಿ ಅಭಿಯಾನ ಮತ್ತು ಕಾಳ್ಗಿಚ್ಚು ಮುಂಜಾಗೃತಿ ಕ್ರಮಗಳ ಬಗ್ಗೆ ಜಾಗೃತಿ ಅಭಿಯಾನ

Suddi Udaya

ಡಿ.5 : ನೇತ್ರಾನಗರ ಧರ್ಮಸ್ಥಳದಲ್ಲಿ “ಯಾತ್ರಾ ಆತಿಥ್ಯ” ಶುಭಾರಂಭ: ಪ್ರವಾಸಿಗರಿಗೆ, ಯಾತ್ರಾರ್ಥಿಗಳಿಗೆ ಅನುಕೂಲ, ಸುಮಾರು 108 ರೂಮ್ಸ್

Suddi Udaya

ನಿಟ್ಟಡೆ ಕುಂಭಶ್ರೀ ವಿದ್ಯಾಸಂಸ್ಥೆಗೆ ಶೇ.100 ಫಲಿತಾಂಶ

Suddi Udaya
error: Content is protected !!