23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಣ್ಯ ಇಲಾಖೆ ಬುಡಕಟ್ಟು ಸಮುದಾಯದ ಜೊತೆಗೆ ಸರ್ಕಾರವನ್ನು ಕೂಡ ವಂಚಿಸುತ್ತಿದೆ : ಹರೀಶ್ ಎಳನೀರ್

ಬೆಳ್ತಂಗಡಿ: ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಬುಡಕಟ್ಟು ಸಮುದಾಯದ ಕಾಲೋನಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅರಣ್ಯ ಹಕ್ಕು ಕಾಯ್ದೆಯ ಸೆಕ್ಷನ್ 3 (2) ಪ್ರಕಾರ ಅವಕಾಶವಿದ್ದು. ವನ್ಯ ಜೀವಿ ಮಂಡಳಿಯ ಅನುಮತಿ ಮತ್ತು ಅರಣ್ಯ ಸಂರಕ್ಷಣಾ ಕಾಯ್ದೆಯ ಅನ್ವಯ ಭೂ ಪರಿವರ್ತನೆ ಅವಶ್ಯಕತೆ ಇಲ್ಲ ಎಂದು ಬುಡಕಟ್ಟು ಸಚಿವಾಲಯ ಸ್ಪಷ್ಟತೆಯನ್ನು ಕೊಟ್ಟ ಮೇಲೂ ಕೂಡ ಅರಣ್ಯ ಇಲಾಖೆ ವಿತ್ತಂಡ ವಾದ ಮಾಡುತ್ತಿರುವುದು ವಿಪರ್ಯಾಸ.

ಜೀವನೋಪಾಯಕ್ಕಾಗಿ , ಮೇಯಿಸುವುದಕ್ಕಾಗಿ ಅರಣ್ಯವನ್ನು ಅವಲಂಬಿಸಿರುವ ಬುಡಕಟ್ಟುಗಳನ್ನು ಅರಣ್ಯ ಹಕ್ಕು ಕಾಯ್ದೆಯ ಸೆಕ್ಷನ್ 2 (c) ಯಲ್ಲಿ ಅರಣ್ಯವಾಸಿ ಎಂದು ಪರಿಗಣನೆ ಮಾಡಬೇಕು. ಪಟ್ಟಾ ಜಮೀನಿನಲ್ಲಿ ವಾಸವಾಗಿರುವ ಬುಡಕಟ್ಟುಗಳಿಗೆ ಇದು ಅನ್ವಯ ಆಗಲ್ಲ ಅಂತ ಅರಣ್ಯ ಇಲಾಖೆ ಹೇಳುತ್ತಿರುವುದು ಹಾಸ್ಯಾಸ್ಪದ. ಜಿಲ್ಲಾಡಳಿತ ಜನಪ್ರತಿನಿಧಿಗಳು ಜಾರಿಯಲ್ಲಿರುವ ಕಾನೂನನ್ನು ಅನುಷ್ಠಾನ ಮಾಡಲು ಮುಂದಾಗಬೇಕು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಹರೀಶ್ ಎಳನೀರ್ ರವರು ಆಗ್ರಹಿಸಿದ್ದಾರೆ.

Related posts

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚರ್ಚಾ ಸ್ಪರ್ಧೆ

Suddi Udaya

ಸಾಹಿತ್ಯ ಸಮ್ಮೇಳನದ ಸಂಯೋಜನಾ ಸಮಿತಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ: ಕನ್ನಡ ಸಾಹಿತ್ಯ ಸಮ್ಮೇಳನವು ಸುವರ್ಣ ಕರ್ನಾಟಕದ ಆಶಯವನ್ನು ಬಿಂಬಿಸುವಂತಿರಲಿ: ಶಾಸಕ ಹರೀಶ್ ಪೂಂಜ

Suddi Udaya

ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಭೀಕರ ರಸ್ತೆ ಅಪಘಾತ – ಮೂವರಿಗೆ ಗಂಭೀರ ಗಾಯ

Suddi Udaya

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ: ನಡ ಸರಕಾರಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!