July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಣ್ಯ ಇಲಾಖೆ ಬುಡಕಟ್ಟು ಸಮುದಾಯದ ಜೊತೆಗೆ ಸರ್ಕಾರವನ್ನು ಕೂಡ ವಂಚಿಸುತ್ತಿದೆ : ಹರೀಶ್ ಎಳನೀರ್

ಬೆಳ್ತಂಗಡಿ: ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಬುಡಕಟ್ಟು ಸಮುದಾಯದ ಕಾಲೋನಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅರಣ್ಯ ಹಕ್ಕು ಕಾಯ್ದೆಯ ಸೆಕ್ಷನ್ 3 (2) ಪ್ರಕಾರ ಅವಕಾಶವಿದ್ದು. ವನ್ಯ ಜೀವಿ ಮಂಡಳಿಯ ಅನುಮತಿ ಮತ್ತು ಅರಣ್ಯ ಸಂರಕ್ಷಣಾ ಕಾಯ್ದೆಯ ಅನ್ವಯ ಭೂ ಪರಿವರ್ತನೆ ಅವಶ್ಯಕತೆ ಇಲ್ಲ ಎಂದು ಬುಡಕಟ್ಟು ಸಚಿವಾಲಯ ಸ್ಪಷ್ಟತೆಯನ್ನು ಕೊಟ್ಟ ಮೇಲೂ ಕೂಡ ಅರಣ್ಯ ಇಲಾಖೆ ವಿತ್ತಂಡ ವಾದ ಮಾಡುತ್ತಿರುವುದು ವಿಪರ್ಯಾಸ.

ಜೀವನೋಪಾಯಕ್ಕಾಗಿ , ಮೇಯಿಸುವುದಕ್ಕಾಗಿ ಅರಣ್ಯವನ್ನು ಅವಲಂಬಿಸಿರುವ ಬುಡಕಟ್ಟುಗಳನ್ನು ಅರಣ್ಯ ಹಕ್ಕು ಕಾಯ್ದೆಯ ಸೆಕ್ಷನ್ 2 (c) ಯಲ್ಲಿ ಅರಣ್ಯವಾಸಿ ಎಂದು ಪರಿಗಣನೆ ಮಾಡಬೇಕು. ಪಟ್ಟಾ ಜಮೀನಿನಲ್ಲಿ ವಾಸವಾಗಿರುವ ಬುಡಕಟ್ಟುಗಳಿಗೆ ಇದು ಅನ್ವಯ ಆಗಲ್ಲ ಅಂತ ಅರಣ್ಯ ಇಲಾಖೆ ಹೇಳುತ್ತಿರುವುದು ಹಾಸ್ಯಾಸ್ಪದ. ಜಿಲ್ಲಾಡಳಿತ ಜನಪ್ರತಿನಿಧಿಗಳು ಜಾರಿಯಲ್ಲಿರುವ ಕಾನೂನನ್ನು ಅನುಷ್ಠಾನ ಮಾಡಲು ಮುಂದಾಗಬೇಕು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಹರೀಶ್ ಎಳನೀರ್ ರವರು ಆಗ್ರಹಿಸಿದ್ದಾರೆ.

Related posts

ಗುರುವಾಯನಕೆರೆ: ಸ್ಕೂಟಿ- ಬೈಕ್ ಮುಖಾಮುಖಿ ಡಿಕ್ಕಿ,ಸವಾರರಿಬ್ಬರಿಗೆ ಗಂಭೀರ ಗಾಯ,ಆಸ್ಪತ್ರೆಗೆ ದಾಖಲು

Suddi Udaya

ಕೊಕ್ಕಡ: ಕಲಾಯಿ ನಿವಾಸಿ ತಿಮ್ಮಪ್ಪ ಗೌಡ ನಿಧನ

Suddi Udaya

ಮಹಾತ್ಮ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ ಪುರಸ್ಕೃತ ರಾಜೇಶ್ ಪೈ ಅವರಿಗೆ ಉಜಿರೆ ವರ್ತಕರ ಸಂಘದಿಂದ ಗೌರವ ಸನ್ಮಾನ-ಉಜಿರೆ ನನ್ನನ್ನು ಬೆಳೆಸಿದ, ಪೋಷಿಸಿದ ಊರು: ಉದ್ಯಮಿ ರಾಜೇಶ್ ಪೈ

Suddi Udaya

ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ: ಕಾಶಿಪಟ್ಣ ಸ.ಪ್ರೌ. ಶಾಲೆ ದ್ವಿತೀಯ ಸ್ಥಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ರಾಜ್ಯ ಮಟ್ಟದ ಕ್ರೀಡಾಕೂಟ: ನಾವೂರು ಸರಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿ ಜೀವಿತ್ 4ನೇ ಸ್ಥಾನ

Suddi Udaya
error: Content is protected !!