23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ: ರುಡ್ ಸೆಟ್‌ನಲ್ಲಿ ವಿದ್ಯುತ್ ಉಪಕರಣ ಹಾಗೂ ದ್ವಿಚಕ್ರ ವಾಹನ ರಿಪೇರಿ ತರಬೇತಿ ಸಮಾರೋಪ

ಉಜಿರೆ: ರುಡ್ ಸೆಟ್ ಸಂಸ್ಥೆ, ಉಜಿರೆ ಇವರ ಆಶ್ರಯದಲ್ಲಿ ನಡೆದ ಗೃಹೋಪಯೋಗಿ ವಿದ್ಯುತ್ ಉಪಕರಣಗಳ ದುರಸ್ತಿ ಹಾಗೂ ದ್ವಿಚಕ್ರ ವಾಹನಗಳ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇತ್ತೀಚೆಗೆ ನಡೆಯಿತು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳದ ಪಾರುಪತ್ಯಗಾರರಾದ ಲಕ್ಷ್ಮೀ ನಾರಾಯಣ ರಾವ್ ಅವರು ಮಾತನಾಡಿ, ವೃತ್ತಿಯಲ್ಲಿ ಶಿಸ್ತು, ಸೇವಾಭಾವ ಹಾಗೂ ಪ್ರಾಮಾಣಿಕತೆಯನ್ನು ಅಳವಡಿಸಿಕೊಂಡು ಅನುಭವ ಗಳಿಸಬೇಕು ಎಂದು ಸಲಹೆ ನೀಡಿದರು. ಹೆಗ್ಗಡೆಯವರ ಪರಿಕಲ್ಪನೆಯ ರುಡ್ ಸೆಟ್ ಸಂಸ್ಥೆ ಕೇವಲ ತಾಂತ್ರಿಕ ತರಬೇತಿಗೆ ಸೀಮಿತವಾಗದೇ, ಜೀವನ ಕೌಶಲ್ಯಗಳನ್ನು ಕಲಿಸುವ ಅತ್ಯಂತ ಮಹತ್ವದ ಸಂಸ್ಥೆಯಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರುಡ್ ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಪಿ. ವಿಜಯಕುಮಾರ್ ವಹಿಸಿ ಮಾತನಾಡಿ, ತರಬೇತಿ ಪಡೆದವರು ಬ್ಯಾಂಕ್ ಹಾಗೂ ಸರ್ಕಾರದ ವಿವಿಧ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಸ್ವ ಉದ್ಯೋಗ ಆರಂಭಿಸುವಂತೆ ಕರೆ ನೀಡಿದರು.

ಉಜಿರೆ ರುಡ್ ಸೆಟ್ ಸಂಸ್ಥೆಯ ನಿರ್ದೇಶಕ ಅಜೇಯ ಸ್ವಾಗತ ಭಾಷಣ ಮಾಡಿದರು. ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರೂಪಣೆ ನಡೆಸಿದರು. ಹಿರಿಯ ಉಪನ್ಯಾಸಕ ಕೆ. ಕರುಣಾಕರ ಜೈನ್ ವಂದಿಸಿದರು.

ಸೀತಾ ಹೆಗಡೆ ಹಾಗೂ ರಶ್ಮಿ ಪ್ರಾರ್ಥನೆ ನೆರವೇರಿಸಿದರು. ತರಬೇತಿರ್ಥಿಗಳಾದ ಗಿರೀಶ್, ಪುರಂದರ ರೈ, ಜೋಸೆಫ್ ಪಿಂಟೋ ಹಾಗೂ ಸುರೇಶ್ ಅವರುಗಳು ತಮ್ಮ ತರಬೇತಿ ಅನುಭವಗಳನ್ನು ಹಂಚಿಕೊಂಡರು.

Related posts

ಜಮ್ಮು ಕಾಶ್ಮೀರದಲ್ಲಿ ನಾಗರಿಕರ ಮೇಲಿನ ದಾಳಿ ಅಮಾನವೀಯ : ಭಯೋತ್ಪಾದಕರನ್ನು ಈ ದೇಶದಿಂದ ಬೇರು ಸಮೇತ ಕಿತ್ತು ಹಾಕಬೇಕಿದೆ, ಕಿರಣ್ ಚಂದ್ರ ಪುಷ್ಪಗಿರಿ ಖಂಡನೆ

Suddi Udaya

ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ಧರೆ ಕುಸಿತ : ಪೊಲೀಸ್ ಠಾಣೆಯ ಕಾಂಪೌಂಡ್ ಗೋಡೆ ಕುಸಿಯುವ ಸಾಧ್ಯತೆ

Suddi Udaya

ನ.26- ನ.30: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ

Suddi Udaya

ಕಾವಳಕಟ್ಟೆ ವಲಯ ಬಂಟರ ಸಂಘದಿಂದ ಸಮಾಜಮುಖಿ ಚಿಂತನಾ ಕಾರ್ಯಕ್ರಮ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ವಿ.ಪ. ಶಾಸಕ ಕಿಶೋರ್ ಕುಮಾರ್ ರವರಿಗೆ ಸನ್ಮಾನ

Suddi Udaya

ಹೊಸ ವಿದ್ಯುತ್ ಸಂಪರ್ಕಗಳಿಗೆ ಇನ್ನು ಬರಲಿದೆ..ಸ್ಮಾರ್ಟ್ ಮೀಟರ್: ಮೊಬೈಲ್ ಮೂಲಕ ಪ್ರೀ ಪೇಯ್ಡ್ ಪೋಸ್ಟ್ ಪೇಯ್ಡ್ ಸೌಲಭ್ಯ

Suddi Udaya
error: Content is protected !!