22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬದ್ಯಾರು ಹಿಬರೋಡಿ ಅನುಗ್ರಹ ನಿಲಯ ವಠಾರದಲ್ಲಿ ಸಂಭ್ರಮ ಸಡಗರದಿಂದ ನಡೆದ ‘ಹಿಬರೋಡಿ ಯಕ್ಷೋತ್ಸವ’

ಬೆಳ್ತಂಗಡಿ: ಪರಮಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ, ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಹಾಗೂ ಶ್ರೀ ಮಹಾಗಣಪತಿ ದೇವರ ಸೇವಾರ್ಥವಾಗಿ ಹಿಬರೋಡಿ ಯಕ್ಷೋತ್ಸವ ಕಾರ್ಯಕ್ರಮ ಜ.29 ರಂದು ಶ್ರೀಮತಿ ಮತ್ತು ದೇವದಾಸ್ ಶೆಟ್ಟಿ ಅನುಗ್ರಹ ನಿಲಯ ಹಿಬರೋಡಿ ಬದ್ಯಾರು ಇವರ ನೇತೃತ್ವದಲ್ಲಿ ಆದ್ದೂರಿಯಾಗಿ ಜರುಗಿತು.

ಬೆಳಿಗ್ಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯವರನ್ನು ಅನುಗ್ರಹ ಮನೆ ವಠಾರಕ್ಕೆ ಬರಮಾಡಿಕೊಳ್ಳಲಾಯಿತು. ಮಧ್ಯಾಹ್ನ 12 ಕ್ಕೆ ಶ್ರೀ ಮಹಾಗಣಪತಿ ದೇವರಿಗೆ ಹೋಮ, ಮಧ್ಯಾಹ್ನ ಮಹಾಪೂಜೆ ಬಳಿಕ ಸಾರ್ವಜನಿಕ ಪ್ರಸಾದ ಭೋಜನ ಕಾರ್ಯಕ್ರಮ ನಡೆಯತು.

ಸಂಜೆ 6 ಕ್ಕೆ ಯಕ್ಷಗಾನ ಮೇಳದ ಚೌಕಿಯಲ್ಲಿ ಮಹಾಗಣಪತಿ ದೇವರಿಗೆ ವಿಶೇಷ ಪೂಜೆ ನಡೆದು ಯಕ್ಷಗಾನ ಆರಂಭಗೊಂಡಿತು. ಸಾರ್ವಜನಿಕ ಪ್ರಸಾದ ಭೋಜನಾ ಕಾರ್ಯಕ್ರಮ ಜರುಗಿತು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯವರಿಂದ “ಸಹಸ್ರ ಕವಚ ಮೋಕ್ಷ ” ಎಂಬ ಪುರಾಣ ಕಥಾ ಭಾಗವನ್ನು ಸೇವೆ ಬಯಲಾಟವಾಗಿ ಪ್ರದರ್ಶನಗೊಂಡಿತು.

ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಆಗಮಿಸಿದಾಗ ಶ್ರೀಮತಿ ಮತ್ತು ದೇವದಾಸ್ ಶೆಟ್ಟಿ, ಮೋಹನ್ ಶೆಟ್ಟಿ ಹಾಗೂ ಕುಟುಂಬಸ್ಥರು ಅವರನ್ನು ಆದರದಿಂದ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ತಾಲೂಕಿನ ಗಣ್ಯರು, ಸಂಘ-ಸಂಸ್ಥೆಯವರು, ಊರಿನ ನಾಗರಿಕರು ಅಪಾರ ಸಂಖ್ಯೆಯಲ್ಲಿ ಭಾಗವಹಿಸಿ ಯಕ್ಷಗಾನವನ್ನು ವೀಕ್ಷಿಸಿದರು.

Related posts

ತಾಲೂಕು ಮಟ್ಟದ ಚದುರಂಗ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮುಳಿಯ ಜುವೆಲ್ಸ್ ನಲ್ಲಿ ಕರಿಮಣಿ ಮತ್ತು ಬಳೆಗಳ ಉತ್ಸವ

Suddi Udaya

ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಕದಿರು ಹಬ್ಬ

Suddi Udaya

ನವ ವಿವಾಹಿತ, ಕಂಪನಿ ಉದ್ಯೋಗಿ, ನಾಲ್ಕೂರಿನ ಯುವಕ ಮೈಸೂರಲ್ಲಿ ಆತ್ಮಹತ್ಯೆ

Suddi Udaya

ಬೆಳ್ತಂಗಡಿ: ಕುತ್ಯಾರು ರಸ್ತೆಯಲ್ಲಿ ಗಾಳಿ ಮಳೆಗೆ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ಧರ್ಮಸ್ಥಳ: ಎಸ್.ಕೆ. ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya
error: Content is protected !!