30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬದ್ಯಾರು ಹಿಬರೋಡಿ ಅನುಗ್ರಹ ನಿಲಯ ವಠಾರದಲ್ಲಿ ಸಂಭ್ರಮ ಸಡಗರದಿಂದ ನಡೆದ ‘ಹಿಬರೋಡಿ ಯಕ್ಷೋತ್ಸವ’

ಬೆಳ್ತಂಗಡಿ: ಪರಮಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ, ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಹಾಗೂ ಶ್ರೀ ಮಹಾಗಣಪತಿ ದೇವರ ಸೇವಾರ್ಥವಾಗಿ ಹಿಬರೋಡಿ ಯಕ್ಷೋತ್ಸವ ಕಾರ್ಯಕ್ರಮ ಜ.29 ರಂದು ಶ್ರೀಮತಿ ಮತ್ತು ದೇವದಾಸ್ ಶೆಟ್ಟಿ ಅನುಗ್ರಹ ನಿಲಯ ಹಿಬರೋಡಿ ಬದ್ಯಾರು ಇವರ ನೇತೃತ್ವದಲ್ಲಿ ಆದ್ದೂರಿಯಾಗಿ ಜರುಗಿತು.

ಬೆಳಿಗ್ಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯವರನ್ನು ಅನುಗ್ರಹ ಮನೆ ವಠಾರಕ್ಕೆ ಬರಮಾಡಿಕೊಳ್ಳಲಾಯಿತು. ಮಧ್ಯಾಹ್ನ 12 ಕ್ಕೆ ಶ್ರೀ ಮಹಾಗಣಪತಿ ದೇವರಿಗೆ ಹೋಮ, ಮಧ್ಯಾಹ್ನ ಮಹಾಪೂಜೆ ಬಳಿಕ ಸಾರ್ವಜನಿಕ ಪ್ರಸಾದ ಭೋಜನ ಕಾರ್ಯಕ್ರಮ ನಡೆಯತು.

ಸಂಜೆ 6 ಕ್ಕೆ ಯಕ್ಷಗಾನ ಮೇಳದ ಚೌಕಿಯಲ್ಲಿ ಮಹಾಗಣಪತಿ ದೇವರಿಗೆ ವಿಶೇಷ ಪೂಜೆ ನಡೆದು ಯಕ್ಷಗಾನ ಆರಂಭಗೊಂಡಿತು. ಸಾರ್ವಜನಿಕ ಪ್ರಸಾದ ಭೋಜನಾ ಕಾರ್ಯಕ್ರಮ ಜರುಗಿತು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯವರಿಂದ “ಸಹಸ್ರ ಕವಚ ಮೋಕ್ಷ ” ಎಂಬ ಪುರಾಣ ಕಥಾ ಭಾಗವನ್ನು ಸೇವೆ ಬಯಲಾಟವಾಗಿ ಪ್ರದರ್ಶನಗೊಂಡಿತು.

ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಆಗಮಿಸಿದಾಗ ಶ್ರೀಮತಿ ಮತ್ತು ದೇವದಾಸ್ ಶೆಟ್ಟಿ, ಮೋಹನ್ ಶೆಟ್ಟಿ ಹಾಗೂ ಕುಟುಂಬಸ್ಥರು ಅವರನ್ನು ಆದರದಿಂದ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ತಾಲೂಕಿನ ಗಣ್ಯರು, ಸಂಘ-ಸಂಸ್ಥೆಯವರು, ಊರಿನ ನಾಗರಿಕರು ಅಪಾರ ಸಂಖ್ಯೆಯಲ್ಲಿ ಭಾಗವಹಿಸಿ ಯಕ್ಷಗಾನವನ್ನು ವೀಕ್ಷಿಸಿದರು.

Related posts

ಕಾರಿಂಜ ಶ್ರೀ ವನ ಶಾಸ್ತಾರ , ಶ್ರೀ ವೀರಭದ್ರ ದೇವಸ್ಥಾನದ ಜೀರ್ಣೊದ್ದಾರ ಸಮಿತಿ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ವತಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ

Suddi Udaya

ಧರ್ಮಸ್ಥಳ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಉತ್ತಮ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಬೆಳಾಲು: ರೈತರ ಸದಸ್ಯತ್ವ ನೋಂದಾವಣೆ ಮತ್ತು ರೈತರಿಗೆ ಮಾಹಿತಿ ಕಾರ್ಯಕ್ರಮ

Suddi Udaya

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಗೆ ಮಂಗಳೂರಿನ ಎಂಸಿಸಿ ಬ್ಯಾಂಕ್ ನಿಂದ ಕ್ರೀಡಾ ಉಪಕರಣಗಳ ಕೊಡುಗೆ

Suddi Udaya

ಜ.4: ಸುಲ್ಕೇರಿ ನೂತನ ಶ್ರೀ ನೇಮಿನಾಥ ಸಭಾಭವನ ಉದ್ಘಾಟನೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ನೂತನ “ಅಕ್ಷಯ ಪಾಕಶಾಲೆ” ಶಾಸಕ ಹರೀಶ್ ಪೂಂಜರಿಂದ ಲೋಕಾರ್ಪಣೆ: ಸಂಘದಿಂದ ರೂ. 70 ಸಾವಿರ ವೈದ್ಯಕೀಯ ನೆರವು

Suddi Udaya
error: Content is protected !!