September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಪಿ.ಎಂ. ಶ್ರೀ ಸರಕಾರಿ ಮಾ. ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿಗಳ ಮೆಟ್ರಿಕ್ ಮೇಳ – ವ್ಯವಹಾರಿಕ ಜ್ಞಾನಕ್ಕೆ ವೇದಿಕೆ

ಬೆಳ್ತಂಗಡಿ: ಪಿ.ಎಂ. ಶ್ರೀ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ, ವಿದ್ಯಾರ್ಥಿಗಳಲ್ಲಿ ವ್ಯವಹಾರಿಕ ಜ್ಞಾನ ಹಾಗೂ ಕೌಶಲ್ಯಗಳನ್ನು ವೃದ್ಧಿಸುವ ಉದ್ದೇಶದಿಂದ ಜ.29 ರಂದು ವಿದ್ಯಾರ್ಥಿಗಳ ಮೆಟ್ರಿಕ್ ಮೇಳವನ್ನು ಆಯೋಜಿಸಲಾಯಿತು.

ಈ ಮೇಳಕ್ಕೆ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಅವರು ದೀಪ ಪ್ರಜ್ವಲಿಸುವುದರ ಮೂಲಕ ಅಧಿಕೃತ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಕ್ಷೇತ್ರ ಸಂಪನ್ಮೂಲ ಕೇಂದ್ರದ ಕ್ಷೇತ್ರ ಸಮನ್ವಯಾಧಿಕಾರಿ ಬಸವಲಿಂಗಪ್ಪ ಟಿ.ಬಿ, ಶಿಕ್ಷಣ ಸಂಯೋಜಕ ಸಿದ್ದಲಿಂಗಸ್ವಾಮಿ, ಬೆಳ್ತಂಗಡಿ ಕ್ಲಸ್ಟರ್‌ನ ಸಿ.ಆರ್.ಪಿ ಯವರಾದ ವಾರಿಜಾ, ಶಾಲಾ ಎಸ್.ಡಿ.ಎಂ.ಸಿ ಉಪಾಧ್ಯಕ್ಷ ಆರತಿ, ಶಾಲಾ ಮುಖ್ಯ ಶಿಕ್ಷಕ ಸೂರ್ಯನಾರಾಯಣ ಪಿ. ಹಾಗೂ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಮೆಟ್ರಿಕ್ ಮೇಳದಲ್ಲಿ ವಿದ್ಯಾರ್ಥಿಗಳು ಸ್ವಯಂ ತಯಾರಿಸಿದ ಅಗತ್ಯ ವಸ್ತುಗಳು, ತರಕಾರಿಗಳು ಹಾಗೂ ವಿವಿಧ ತಿಂಡಿ-ತಿನಿಸುಗಳನ್ನು ಪ್ರದರ್ಶಿಸಿ ಮಾರಾಟ ನಡೆಸಿದರು. ಹೆಚ್ಚಿನ ಸಂಖ್ಯೆಯಲ್ಲಿ ಪೋಷಕರು ಆಗಮಿಸಿ ಗ್ರಾಹಕರಾಗಿ ವಿದ್ಯಾರ್ಥಿಗಳಿಂದ ವಸ್ತುಗಳನ್ನು ಖರೀದಿಸುವ ಮೂಲಕ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ ನೀಡಿದರು.


ಈ ಮೇಳದ ಮೂಲಕ ವಿದ್ಯಾರ್ಥಿಗಳು ಹಣಕಾಸು ವ್ಯವಹಾರ, ಲೆಕ್ಕಾಚಾರ, ಸಂವಹನ ಕೌಶಲ್ಯ ಮತ್ತು ಸ್ವಾವಲಂಬನೆಯ ಮಹತ್ವವನ್ನು ಪ್ರಾಯೋಗಿಕವಾಗಿ ಅನುಭವಿಸಿದರು. ವಿದ್ಯಾರ್ಥಿಗಳ ಆತ್ಮವಿಶ್ವಾಸ, ಉದ್ಯಮಶೀಲತೆ ಹಾಗೂ ಜೀವನೋಪಯೋಗಿ ಕೌಶಲ್ಯಗಳನ್ನು ಬೆಳೆಸುವಲ್ಲಿ ಮೆಟ್ರಿಕ್ ಮೇಳವು ಅತ್ಯಂತ ಯಶಸ್ವಿಯಾಯಿತು.

Related posts

ಪದ್ಮುಂಜ: ಶ್ರೀ ವಿಷ್ಣು ಅಸೋಸಿಯೇಟ್ಸ್, ಗ್ರಾಮ ಒನ್, ಶ್ರೀ ವಿಷ್ಣು ಡಿಜಿಟಲ್ ಸೇವಾ ಕೇಂದ್ರದಲ್ಲಿ ಇ -ಸ್ಟ್ಯಾಂಪ್ (ಠಸ್ಸೆ) ಪೇಪರ್ ಸೇವೆಯ ಶುಭಾರoಭ ಹಾಗೂ ವಿಶೇಷ ಸಾಧಕರಿಗೆ ಸನ್ಮಾನ

Suddi Udaya

ಡಾ. ಪ್ರದೀಪ್ ಆಟಿಕುಕ್ಕೆ ನಾವೂರು ರವರ ಧಾರ್ಮಿಕ ಸೇವೆಗೆ “ಧರ್ಮ ಸಾರಥಿ” ಬಿರುದು

Suddi Udaya

ಕೊಯ್ಯೂರು ಮಲೆಬೆಟ್ಟು ನಿವಾಸಿ ರಮ್ಯಾ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೊಲೇರೋ ವಾಹನ ಡಿಕ್ಕಿ ಹೊಡೆದು ಬಾಲಕಿ ಅನರ್ಘ್ಯಾ ಸಾವನ್ನಪ್ಪಿದ ಪ್ರಕರಣ : ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಬೆಳ್ತಂಗಡಿ ಚಿತ್ಪಾವನ ಸಂಘಟನೆ ವತಿಯಿಂದ ಪೊಲೀಸರಿಗೆ ಹಾಗೂ ತಹಶೀಲ್ದಾರರಿಗೆ ಮನವಿ

Suddi Udaya

ದಿ‌.ಎನ್ ಪದ್ಮನಾಭ ಮಾಣಿಂಜರಿಗೆ ಶ್ರೀ ಗುರುದೇವ ಸಹಕಾರಿ ಸಂಘದಿಂದ ನುಡಿನಮನ

Suddi Udaya

ಕನ್ಯಾಡಿ I : ನೇರೊಳ್ದಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಮತ್ತು ಅಂಗನವಾಡಿ ಕಾರ್ಯಕರ್ತೆಗೆ ಸನ್ಮಾನ

Suddi Udaya
error: Content is protected !!