30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ವಾಣಿ ಕಾಲೇಜು: ಎನ್ಎಸ್ಎಸ್ ವಾರ್ಷಿಕ ದೈನಂದಿನ ಚಟುವಟಿಕೆಗಳ ಸಮಾರೋಪ ಸಮಾರಂಭ

ಬೆಳ್ತಂಗಡಿ: ವಿದ್ಯಾರ್ಥಿಗಳು ದೇಶಪ್ರೇಮವನ್ನು ಬೆಳೆಸಿಕೊಳ್ಳುವುದರ ಮೂಲಕ ಪರಿಸರ ಸಂರಕ್ಷಣೆಯ ಜವಾಬ್ದಾರಿಯನ್ನೂ ನಿರ್ವಹಿಸಬೇಕು ಎಂದು ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಮನೋಹರ ಬಳೆಂಜ ಹೇಳಿದರು.

ಅವರು ವಾಣಿ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ದೈನಂದಿನ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡುತ್ತಾ, ಹೆತ್ತವರ ಆಶೋತ್ತರಗಳನ್ನು ಈಡೇರಿಸುವಲ್ಲಿ ಮಕ್ಕಳ ಪಾತ್ರ ಮಹತ್ವವಾಗಿದೆ. ಜೀವನದಲ್ಲಿ ಪರಿಶ್ರಮದಿಂದ ತೊಡಗಿಕೊಂಡಾಗ ಭವಿಷ್ಯ ಉತ್ತಮವಾಗುವುದು. ಆಧುನಿಕ ವ್ಯಾಮೋಹಗಳಿಗೆ, ದುಶ್ಚಟಗಳಿಗೆ, ಮಾದಕ ವ್ಯಸನಗಳಿಗೆ, ಸೈಬರ್ ಕ್ರೈಮ್ ಗಳಿಗೆ, ಸಾಮಾಜಿಕ ಜಾಲತಾಣದ ಮೋಸಗಳಿಗೆ ಬಲಿಯಾಗದೆ ಪರಿಶುದ್ಧವಾದ ಜೀವನವನ್ನು ಮಾಡಬೇಕು. ನಾವು ಪುಣ್ಯದ ಕಾರ್ಯಗಳನ್ನು ಮಾಡಿದಾಗ ಅದೇ ರಕ್ಷಣೆಯನ್ನು ನೀಡುತ್ತದೆ ಎಂದರು.

ಕಾಲೇಜಿನ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ ಅಧ್ಯಕ್ಷತೆ ವಹಿಸಿದ್ದರು. ಆಡಳಿತಾಧಿಕಾರಿ ಪ್ರಸಾದ್ ಕುಮಾರ್, ಎನ್ಎಸ್ಎಸ್ ಘಟಕ ನಾಯಕ ತೀರ್ಥೇಶ್, ನಾಯಕಿ ಸುಶ್ಮಿತಾ ಉಪಸ್ಥಿತರಿದ್ದರು.
ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ದಿನೇಶ್ ಗೌಡ ಸ್ವಾಗತಿಸಿದರು. ಸಹ ಕಾರ್ಯಕ್ರಮಾಧಿಕಾರಿ ಕು.ಶ್ರಾವ್ಯ ಧನ್ಯವಾದವಿತ್ತರು. ಸುಶ್ಮಿತಾ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಮನವಿಗೆ ಕೆಎಸ್ ಆರ್ ಟಿ ಸಿ ಸ್ಪಂದನೆ: ಆ.25 ಧರ್ಮಸ್ಥಳದಿಂದ ನಾರಾವಿಗೆ ಸರ್ಕಾರಿ ಬಸ್ ಪ್ರಾರಂಭ

Suddi Udaya

ರಸ್ತೆಯಲ್ಲಿ ಸಿಕ್ಕಿದ ಲಕ್ಷಾಂತರ ರೂ.ಮೌಲ್ಯದ ಚಿನ್ನದ ಬ್ರಾಸ್ ಲೈಟ್: ವಾರಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ಬಳಂಜದ ಯುವಕ,ಉದ್ಯಮಿ ಜಗದೀಶ್ ಪೂಜಾರಿ ಪೆರಾಜೆ

Suddi Udaya

ಬೈಲಂಗಡಿ :ಶ್ರೀ ಸೋಮನಾಥೇಶ್ವರ ದೇವಸ್ಥಾನ ತೋಟತ್ತಾಡಿ ಬ್ರಹ್ಮ ಕಲಶೋತ್ಸವ ಕಾರ್ಯಾಲಯ ಉದ್ಘಾಟನೆ

Suddi Udaya

ನಾಳೆ (ನ.8): ಬೆಳ್ತಂಗಡಿ ತಾಲೂಕಿನಲ್ಲಿ ಪ್ರಥಮ ಬಾರಿಗೆ ಪ್ರಖ್ಯಾತ ಪ್ಲೈವುಡ್ ಮಳಿಗೆ “ಆನ್‌ಪ್ಲೈ” ಶುಭಾರಂಭ

Suddi Udaya

ಇಂದಬೆಟ್ಟು ಟೀಮ್ ದೇವನಾರಿ ಸೇವಾ ಯೋಜನೆಯಿಂದ ನೀರಿನ ಟ್ಯಾಂಕ್ ಕೊಡುಗೆ

Suddi Udaya

ಎಸ್. ಡಿ. ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ರಸ್ತೆ ಸಂಚಾರ ಸುರಕ್ಷತಾ ಜಾಗೃತಿ’ ಕಾರ್ಯಕ್ರಮ

Suddi Udaya
error: Content is protected !!