July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ವಾಣಿ ಕಾಲೇಜು: ಎನ್ಎಸ್ಎಸ್ ವಾರ್ಷಿಕ ದೈನಂದಿನ ಚಟುವಟಿಕೆಗಳ ಸಮಾರೋಪ ಸಮಾರಂಭ

ಬೆಳ್ತಂಗಡಿ: ವಿದ್ಯಾರ್ಥಿಗಳು ದೇಶಪ್ರೇಮವನ್ನು ಬೆಳೆಸಿಕೊಳ್ಳುವುದರ ಮೂಲಕ ಪರಿಸರ ಸಂರಕ್ಷಣೆಯ ಜವಾಬ್ದಾರಿಯನ್ನೂ ನಿರ್ವಹಿಸಬೇಕು ಎಂದು ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಮನೋಹರ ಬಳೆಂಜ ಹೇಳಿದರು.

ಅವರು ವಾಣಿ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ದೈನಂದಿನ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡುತ್ತಾ, ಹೆತ್ತವರ ಆಶೋತ್ತರಗಳನ್ನು ಈಡೇರಿಸುವಲ್ಲಿ ಮಕ್ಕಳ ಪಾತ್ರ ಮಹತ್ವವಾಗಿದೆ. ಜೀವನದಲ್ಲಿ ಪರಿಶ್ರಮದಿಂದ ತೊಡಗಿಕೊಂಡಾಗ ಭವಿಷ್ಯ ಉತ್ತಮವಾಗುವುದು. ಆಧುನಿಕ ವ್ಯಾಮೋಹಗಳಿಗೆ, ದುಶ್ಚಟಗಳಿಗೆ, ಮಾದಕ ವ್ಯಸನಗಳಿಗೆ, ಸೈಬರ್ ಕ್ರೈಮ್ ಗಳಿಗೆ, ಸಾಮಾಜಿಕ ಜಾಲತಾಣದ ಮೋಸಗಳಿಗೆ ಬಲಿಯಾಗದೆ ಪರಿಶುದ್ಧವಾದ ಜೀವನವನ್ನು ಮಾಡಬೇಕು. ನಾವು ಪುಣ್ಯದ ಕಾರ್ಯಗಳನ್ನು ಮಾಡಿದಾಗ ಅದೇ ರಕ್ಷಣೆಯನ್ನು ನೀಡುತ್ತದೆ ಎಂದರು.

ಕಾಲೇಜಿನ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ ಅಧ್ಯಕ್ಷತೆ ವಹಿಸಿದ್ದರು. ಆಡಳಿತಾಧಿಕಾರಿ ಪ್ರಸಾದ್ ಕುಮಾರ್, ಎನ್ಎಸ್ಎಸ್ ಘಟಕ ನಾಯಕ ತೀರ್ಥೇಶ್, ನಾಯಕಿ ಸುಶ್ಮಿತಾ ಉಪಸ್ಥಿತರಿದ್ದರು.
ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ದಿನೇಶ್ ಗೌಡ ಸ್ವಾಗತಿಸಿದರು. ಸಹ ಕಾರ್ಯಕ್ರಮಾಧಿಕಾರಿ ಕು.ಶ್ರಾವ್ಯ ಧನ್ಯವಾದವಿತ್ತರು. ಸುಶ್ಮಿತಾ ಕಾರ್ಯಕ್ರಮ ನಿರೂಪಿಸಿದರು.

Related posts

ಸೆ.15 ರಂದು ನಡೆಯಲಿರುವ ಮಾನವ ಸರಪಳಿ ಕಾರ್ಯಕ್ರಮದ ಅಂಗವಾಗಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡರಿಂದ ಪ್ರಚಾರಕ್ಕೆ ಚಾಲನೆ

Suddi Udaya

ಜೆಡಿಎಸ್ ಪಕ್ಷದ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಅವರಿಂದ ಮತದಾನ

Suddi Udaya

ಜ.13: ಮಡಂತ್ಯಾರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಬೃಹತ್ ವೈದ್ಯಕೀಯ, ಕ್ಯಾನ್ಸರ್ ತಪಾಸಣೆ ಮತ್ತು ದಂತಾ ಚಿಕಿತ್ಸಾ ಶಿಬಿರ

Suddi Udaya

ದೆಹಲಿಯಲ್ಲಿ ನಿರ್ಮಾಣಗೊಳ್ಳಲಿರುವ ಯೋಧರ ಉದ್ಯಾನವನಕ್ಕೆ ಬೆಳ್ತಂಗಡಿಯಿಂದ ಮಣ್ಣು ಸಮರ್ಪಣೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನ ವತಿಯಿಂದ ವೈದ್ಯಕೀಯ ನೆರವು

Suddi Udaya

ಬೆಳ್ತಂಗಡಿ ಸ್ಥಳೀಯ ಸಂಸ್ಥೆಯಿಂದ ಕಬ್- ಬುಲ್ ಬುಲ್ಸ್ ಉತ್ಸವ, ಸ್ಕೌಟ್ಸ್- ಗೈಡ್ಸ್ ಮೇಳ, ರೋವರ್ಸ್‌ – ರೇಂಜರ್ಸ್‌ ಸಮಾಗಮ

Suddi Udaya
error: Content is protected !!