July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಣ್ಯ ಇಲಾಖೆ ಬುಡಕಟ್ಟು ಸಮುದಾಯದ ಜೊತೆಗೆ ಸರ್ಕಾರವನ್ನು ಕೂಡ ವಂಚಿಸುತ್ತಿದೆ : ಹರೀಶ್ ಎಳನೀರ್

ಬೆಳ್ತಂಗಡಿ: ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಬುಡಕಟ್ಟು ಸಮುದಾಯದ ಕಾಲೋನಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅರಣ್ಯ ಹಕ್ಕು ಕಾಯ್ದೆಯ ಸೆಕ್ಷನ್ 3 (2) ಪ್ರಕಾರ ಅವಕಾಶವಿದ್ದು. ವನ್ಯ ಜೀವಿ ಮಂಡಳಿಯ ಅನುಮತಿ ಮತ್ತು ಅರಣ್ಯ ಸಂರಕ್ಷಣಾ ಕಾಯ್ದೆಯ ಅನ್ವಯ ಭೂ ಪರಿವರ್ತನೆ ಅವಶ್ಯಕತೆ ಇಲ್ಲ ಎಂದು ಬುಡಕಟ್ಟು ಸಚಿವಾಲಯ ಸ್ಪಷ್ಟತೆಯನ್ನು ಕೊಟ್ಟ ಮೇಲೂ ಕೂಡ ಅರಣ್ಯ ಇಲಾಖೆ ವಿತ್ತಂಡ ವಾದ ಮಾಡುತ್ತಿರುವುದು ವಿಪರ್ಯಾಸ.

ಜೀವನೋಪಾಯಕ್ಕಾಗಿ , ಮೇಯಿಸುವುದಕ್ಕಾಗಿ ಅರಣ್ಯವನ್ನು ಅವಲಂಬಿಸಿರುವ ಬುಡಕಟ್ಟುಗಳನ್ನು ಅರಣ್ಯ ಹಕ್ಕು ಕಾಯ್ದೆಯ ಸೆಕ್ಷನ್ 2 (c) ಯಲ್ಲಿ ಅರಣ್ಯವಾಸಿ ಎಂದು ಪರಿಗಣನೆ ಮಾಡಬೇಕು. ಪಟ್ಟಾ ಜಮೀನಿನಲ್ಲಿ ವಾಸವಾಗಿರುವ ಬುಡಕಟ್ಟುಗಳಿಗೆ ಇದು ಅನ್ವಯ ಆಗಲ್ಲ ಅಂತ ಅರಣ್ಯ ಇಲಾಖೆ ಹೇಳುತ್ತಿರುವುದು ಹಾಸ್ಯಾಸ್ಪದ. ಜಿಲ್ಲಾಡಳಿತ ಜನಪ್ರತಿನಿಧಿಗಳು ಜಾರಿಯಲ್ಲಿರುವ ಕಾನೂನನ್ನು ಅನುಷ್ಠಾನ ಮಾಡಲು ಮುಂದಾಗಬೇಕು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಹರೀಶ್ ಎಳನೀರ್ ರವರು ಆಗ್ರಹಿಸಿದ್ದಾರೆ.

Related posts

ಬದನಾಜೆ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಮಂಗಳೂರು ವಿವಿ ಅಂತರ್ ಕಾಲೇಜು ನೆಟ್‌ಬಾಲ್ ಪಂದ್ಯಾಟ : ಉಜಿರೆಯ ಎಸ್‌.ಡಿ.ಎಂ ಚಾಂಪಿಯನ್ಸ್

Suddi Udaya

ನಿಡ್ಲೆಯಲ್ಲಿ ಸಂಪನ್ನಗೊಂಡ 34ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ

Suddi Udaya

ಎ.10-14: ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya

ಬಾರ್ಯ ಗ್ರಾ.ಪಂ. ಅಧ್ಯಕ್ಷರಾಗಿ ಉಸ್ಮಾನ್, ಉಪಾಧ್ಯಕ್ಷರಾಗಿ ಯಶೋಧ ಶೆಟ್ಟಿ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಮಣದ ಪ್ರಯುಕ್ತ ವಿಶೇಷ ಪೂಜೆ

Suddi Udaya
error: Content is protected !!