25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಣ್ಯ ಇಲಾಖೆ ಬುಡಕಟ್ಟು ಸಮುದಾಯದ ಜೊತೆಗೆ ಸರ್ಕಾರವನ್ನು ಕೂಡ ವಂಚಿಸುತ್ತಿದೆ : ಹರೀಶ್ ಎಳನೀರ್

ಬೆಳ್ತಂಗಡಿ: ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಬುಡಕಟ್ಟು ಸಮುದಾಯದ ಕಾಲೋನಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅರಣ್ಯ ಹಕ್ಕು ಕಾಯ್ದೆಯ ಸೆಕ್ಷನ್ 3 (2) ಪ್ರಕಾರ ಅವಕಾಶವಿದ್ದು. ವನ್ಯ ಜೀವಿ ಮಂಡಳಿಯ ಅನುಮತಿ ಮತ್ತು ಅರಣ್ಯ ಸಂರಕ್ಷಣಾ ಕಾಯ್ದೆಯ ಅನ್ವಯ ಭೂ ಪರಿವರ್ತನೆ ಅವಶ್ಯಕತೆ ಇಲ್ಲ ಎಂದು ಬುಡಕಟ್ಟು ಸಚಿವಾಲಯ ಸ್ಪಷ್ಟತೆಯನ್ನು ಕೊಟ್ಟ ಮೇಲೂ ಕೂಡ ಅರಣ್ಯ ಇಲಾಖೆ ವಿತ್ತಂಡ ವಾದ ಮಾಡುತ್ತಿರುವುದು ವಿಪರ್ಯಾಸ.

ಜೀವನೋಪಾಯಕ್ಕಾಗಿ , ಮೇಯಿಸುವುದಕ್ಕಾಗಿ ಅರಣ್ಯವನ್ನು ಅವಲಂಬಿಸಿರುವ ಬುಡಕಟ್ಟುಗಳನ್ನು ಅರಣ್ಯ ಹಕ್ಕು ಕಾಯ್ದೆಯ ಸೆಕ್ಷನ್ 2 (c) ಯಲ್ಲಿ ಅರಣ್ಯವಾಸಿ ಎಂದು ಪರಿಗಣನೆ ಮಾಡಬೇಕು. ಪಟ್ಟಾ ಜಮೀನಿನಲ್ಲಿ ವಾಸವಾಗಿರುವ ಬುಡಕಟ್ಟುಗಳಿಗೆ ಇದು ಅನ್ವಯ ಆಗಲ್ಲ ಅಂತ ಅರಣ್ಯ ಇಲಾಖೆ ಹೇಳುತ್ತಿರುವುದು ಹಾಸ್ಯಾಸ್ಪದ. ಜಿಲ್ಲಾಡಳಿತ ಜನಪ್ರತಿನಿಧಿಗಳು ಜಾರಿಯಲ್ಲಿರುವ ಕಾನೂನನ್ನು ಅನುಷ್ಠಾನ ಮಾಡಲು ಮುಂದಾಗಬೇಕು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಹರೀಶ್ ಎಳನೀರ್ ರವರು ಆಗ್ರಹಿಸಿದ್ದಾರೆ.

Related posts

ಮರೋಡಿಯಲ್ಲಿ ಪ್ರಕಾಶಮಾನವಾಗಿ ಕಂಗೊಳಿಸುತ್ತಿರುವ ಕೂಕ್ರಬೆಟ್ಟು ಸರಕಾರಿ ಶಾಲೆ: ರೂ.1.10 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಶಾಲಾ ಕಟ್ಟಡ, ರಾಷ್ಟ್ರ ಧ್ವಜ ಕಟ್ಟೆ ಉದ್ಘಾಟನೆ,

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ನಿಟ್ಟಡೆ ಕುಂಭಶ್ರೀ ವಿದ್ಯಾಸಂಸ್ಥೆ ಚಾಂಪಿಯನ್

Suddi Udaya

ಜೆಸಿಐ ಮಡಂತ್ಯಾರಿನ ಪದಗ್ರಹಣ ಸಮಾರಂಭ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಸಭೆ

Suddi Udaya

ಕೌಕ್ರಾಡಿ: ಮಣ್ಣಗುಂಡಿಯಲ್ಲಿ ಗುಡ್ಡ ಕುಸಿತ: ಹೆದ್ದಾರಿ ವಾಹನ ಸಂಚಾರ ಸ್ಥಗಿತ

Suddi Udaya
error: Content is protected !!