September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಣ್ಯ ಇಲಾಖೆ ಬುಡಕಟ್ಟು ಸಮುದಾಯದ ಜೊತೆಗೆ ಸರ್ಕಾರವನ್ನು ಕೂಡ ವಂಚಿಸುತ್ತಿದೆ : ಹರೀಶ್ ಎಳನೀರ್

ಬೆಳ್ತಂಗಡಿ: ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಬುಡಕಟ್ಟು ಸಮುದಾಯದ ಕಾಲೋನಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅರಣ್ಯ ಹಕ್ಕು ಕಾಯ್ದೆಯ ಸೆಕ್ಷನ್ 3 (2) ಪ್ರಕಾರ ಅವಕಾಶವಿದ್ದು. ವನ್ಯ ಜೀವಿ ಮಂಡಳಿಯ ಅನುಮತಿ ಮತ್ತು ಅರಣ್ಯ ಸಂರಕ್ಷಣಾ ಕಾಯ್ದೆಯ ಅನ್ವಯ ಭೂ ಪರಿವರ್ತನೆ ಅವಶ್ಯಕತೆ ಇಲ್ಲ ಎಂದು ಬುಡಕಟ್ಟು ಸಚಿವಾಲಯ ಸ್ಪಷ್ಟತೆಯನ್ನು ಕೊಟ್ಟ ಮೇಲೂ ಕೂಡ ಅರಣ್ಯ ಇಲಾಖೆ ವಿತ್ತಂಡ ವಾದ ಮಾಡುತ್ತಿರುವುದು ವಿಪರ್ಯಾಸ.

ಜೀವನೋಪಾಯಕ್ಕಾಗಿ , ಮೇಯಿಸುವುದಕ್ಕಾಗಿ ಅರಣ್ಯವನ್ನು ಅವಲಂಬಿಸಿರುವ ಬುಡಕಟ್ಟುಗಳನ್ನು ಅರಣ್ಯ ಹಕ್ಕು ಕಾಯ್ದೆಯ ಸೆಕ್ಷನ್ 2 (c) ಯಲ್ಲಿ ಅರಣ್ಯವಾಸಿ ಎಂದು ಪರಿಗಣನೆ ಮಾಡಬೇಕು. ಪಟ್ಟಾ ಜಮೀನಿನಲ್ಲಿ ವಾಸವಾಗಿರುವ ಬುಡಕಟ್ಟುಗಳಿಗೆ ಇದು ಅನ್ವಯ ಆಗಲ್ಲ ಅಂತ ಅರಣ್ಯ ಇಲಾಖೆ ಹೇಳುತ್ತಿರುವುದು ಹಾಸ್ಯಾಸ್ಪದ. ಜಿಲ್ಲಾಡಳಿತ ಜನಪ್ರತಿನಿಧಿಗಳು ಜಾರಿಯಲ್ಲಿರುವ ಕಾನೂನನ್ನು ಅನುಷ್ಠಾನ ಮಾಡಲು ಮುಂದಾಗಬೇಕು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಹರೀಶ್ ಎಳನೀರ್ ರವರು ಆಗ್ರಹಿಸಿದ್ದಾರೆ.

Related posts

ಮಚ್ಚಿನ: ನೆತ್ತರ ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಮೈಸೂರು ಚಾಮುಂಡೇಶ್ವರಿ ಅಗ್ರಿ ಟೂಲ್ಸ್ ಮಾಲಕ ರಾಜೇಶ್ ದೇವಾಡಿಗ ರಿಂದ ಉಚಿತ ರೈನ್ ಕೋಟ್ ವಿತರಣೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ಪ್ರಕರಣ: ಸ್ಥಳ ಮಹಜರು ನಡೆಸಿ ಧರ್ಮಸ್ಥಳ ಠಾಣೆಗೆ ಬಂದ ಎಸ್.ಐ.ಟಿ ತಂಡ

Suddi Udaya

ಮಿತ್ತಬಾಗಿಲು: ಹಿರಿಯ ದೈವನರ್ತಕ ಅಣ್ಣು ನಲಿಕೆ ನಿಧನ

Suddi Udaya

ಗುರುವಾಯನಕೆರೆ ಅಯ್ಯಪ್ಪ ಮಂದಿರದಲ್ಲಿ 80ನೇ ಸ್ವಾತಂತ್ಯ್ರೋತ್ಸವ ಆಚರಣೆ

Suddi Udaya

ಮರೋಡಿಯಲ್ಲಿ ಪ್ರಕಾಶಮಾನವಾಗಿ ಕಂಗೊಳಿಸುತ್ತಿರುವ ಕೂಕ್ರಬೆಟ್ಟು ಸರಕಾರಿ ಶಾಲೆ: ರೂ.1.10 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಶಾಲಾ ಕಟ್ಟಡ, ರಾಷ್ಟ್ರ ಧ್ವಜ ಕಟ್ಟೆ ಉದ್ಘಾಟನೆ,

Suddi Udaya

ಬೆಳಾಲು: ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆ ಪ್ರಕರಣ: ಇಬ್ಬರು ಆರೋಪಿಗಳು ಐದು ದಿನ ಪೊಲೀಸ್ ಕಸ್ಟಡಿಗೆ

Suddi Udaya
error: Content is protected !!