September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಳದಂಗಡಿ ಶಾಖೆಯ 3ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆ

ಅಳದಂಗಡಿ : ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಳದಂಗಡಿ ಶಾಖೆಯ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ಅಳದಂಗಡಿ ಶಾಖೆಯಲ್ಲಿ ಜರುಗಿತು.

ಕಾರ್ಯಕ್ರಮದಲ್ಲಿ ಸಂಘದ ಸದಸ್ಯರುಗಳಾದ ತುಳುಪುಲೆ, ರಾಜು ಪೂಜಾರಿ , ವಿಶ್ವನಾಥ್ ಬಂಗೇರ, ವಿಶ್ವನಾಥ್ ಕುದ್ಯಾಡಿ, ಪೂರ್ನೇಶ್, ರತ್ನಾಕರ ಕೋಟ್ಯಾನ್, ಅಜುರುದ್ದೀನ್, ದಯಾಕರ ರೈ, ಮನೋಹರ ಶೆಟ್ಟಿ, ಸದಾನಂದ ಆಚಾರ್ಯಾ, ಜಲಜ ವಿ ಸಾಲ್ಯಾನ್, ಶೋಭ, ಸುರೇಖ, ನೀಲಯ್ಯ ಗೌಡ ಉಪಸ್ಥಿತರಿದ್ದರು.

ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮಾತನಾಡಿ, ಗ್ರಾಹಕರ ಪ್ರೋತ್ಸಾಹದಿಂದ ಸಂಘವು ಇಂದಿಗೆ 33 ಶಾಖೆಯನ್ನು ಹೊಂದಲು ಕಾರಣೀಭೂತವಾಗಿದೆ ಹಾಗೂ ಸಂಘದ ಪಾಲು ಬಂಡವಾಳವು 22.5 ಲಕ್ಷದಿಂದ ಪ್ರಾರಂಭವಾಗಿ ಇಂದು 300 ಕೋಟಿ ಠೇವಣಿಯಾಗಲು ಗ್ರಾಹಕರೇ ಕಾರಣ ಎಂದು ಪ್ರಶಂಸಿದರು. ಸಂಸ್ಥೆಯು ಕೇವಲ ಬ್ಯಾಂಕಿಂಗ್ ಮಾತ್ರವಲ್ಲದೆ ಜೀವ ವಿಮೆ, ಆರೋಗ್ಯ ವಿಮೆ, ಮತ್ತು ವಾಹನ ವಿಮಾ ಸೌಲಭ್ಯಗಳನ್ನು ಹೊಂದಿರುತ್ತದೆ. ಆರೋಗ್ಯ ಶಿಬಿರವನ್ನು ಸಹ ನಮ್ಮ ಸಂಘ ಹಮ್ಮಿಕೊಂಡು ಬರುತ್ತಿದೆ. ಮುಂದಿನ ದಿನಗಳಲ್ಲಿ ಅಳದಂಗಡಿ ಶಾಖೆಯಲ್ಲೂ ಆರೋಗ್ಯ ಶಿಬಿರವನ್ನು ನಡೆಸಲ್ಲಿದ್ದೇವೆ ಎಂದು ತಿಳಿಸಿದರು.

ಸಂಘದ ಸದಸ್ಯ ಮನೋಹರ ಶೆಟ್ಟಿ ಮಾತನಾಡಿ ಸಿಬ್ಬಂದಿಗಳು ಉತ್ತಮ ಸೇವೆಯನ್ನು ನೀಡುತ್ತಿದ್ದಾರೆ ಜವಾಬ್ದಾರಿಯಿಂದ ಕಾರ್ಯ ನಿಭಾಯಿಸುತ್ತಾರೆ ಎಂದು ಶ್ಲಾಘಿಸಿದರು. ಸದಸ್ಯ ನೀಲಯ್ಯ ಗೌಡ ಮಾತನಾಡಿ ಶಾಖೆ ಆರಂಭದಿಂದಲೂ ಉತ್ತಮ ವ್ಯವಹಾರ ನಡೆಸುತ್ತಿದ್ದು ಸಂಘದ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತ ಪಡಿಸಿದರು. ಸದಸ್ಯೆ ಸುರೇಖ ಮಾತನಾಡಿ ಆವರ್ತನ ಖಾತೆಯಿಂದ ಸಣ್ಣ ಮಟ್ಟದ ಉಳಿತಾಯ ಮಾಡಲು ಬಹಳ ಸಹಾಯವಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನಿರ್ದೇಶಕ ಗೋಪಾಲ್ ಎಮ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಉಪಸ್ಥಿತರಿದ್ದರು.
ಸಂಘದ ಅಳದಂಗಡಿ ಶಾಖೆಯ ಶಾಖಾಧಿಕಾರಿ ಕಾವ್ಯಶ್ರೀ ಎಸ್ ಸ್ವಾಗತಿಸಿ, ಶಾಖೆಯ ಸಿಬ್ಬಂದಿ ಲೋಶಿತ ವಂದಿಸಿದರು. ಶಾಖೆಯ ಸಿಬ್ಬಂದಿ ಸ್ವಾತಿ ಎಸ್ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ಪ.ಪಂ. ನಾಲ್ಕನೇ ವಾರ್ಡಿನ ಹಿಂದೂ ರುದ್ರ ಭೂಮಿಗೆ ರೂ 40 ಲಕ್ಷ ವೆಚ್ಚದಲ್ಲಿ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಸತ್ಯಾಸತ್ಯತೆ ಶೀಘ್ರವಾಗಿ ಹೊರಬರಲಿದೆ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ವಿಜಯೇಂದ್ರ ಹೇಳಿಕೆ

Suddi Udaya

ಬೆಳ್ತಂಗಡಿ : ಕುಣಿತ ಭಜನಾ ತರಬೇತಿ ನೀಡುತ್ತಿರುವ ತರಬೇತಿದಾರರುಗಳ ಸಭೆ: ಪ್ರಥಮ ಬಾರಿಗೆ ಭಜನೆಯಲ್ಲಿ ನಿನ್ನೆ ಇಂದು ನಾಳೆಯ ಬಗ್ಗೆ ಗಂಭೀರ ಚರ್ಚೆ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಬಾಯಿ ಮತ್ತು ಹಲ್ಲಿನ ಆರೋಗ್ಯದ ಮುಂಜಾಗ್ರತಾ ಕ್ರಮದ ಕುರಿತು ಕಾರ್ಯಾಗಾರ

Suddi Udaya

ಗರ್ಡಾಡಿ: ಬೋಳಿಯಾರ್ ನಲ್ಲಿ 25 ಮೇಕೆಯ ತಲೆ ಕಡಿದು ಪ್ರಮುಖರ ಫೋಟೋ ಬಳಸಿ ವಾಮಾಚಾರ

Suddi Udaya

ರಕ್ಷಿತ್ ಶಿವರಾಂರವರ ಕಾರ್ಯವೈಖರಿ ಮೆಚ್ಚಿ ಕಾಂಗ್ರೆಸ್ ಸೇರ್ಪಡೆಗೊಂಡ ಅಳದಂಗಡಿಯ ಯುವಸಮೂಹ

Suddi Udaya
error: Content is protected !!