September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ: ರುಡ್ ಸೆಟ್‌ನಲ್ಲಿ ವಿದ್ಯುತ್ ಉಪಕರಣ ಹಾಗೂ ದ್ವಿಚಕ್ರ ವಾಹನ ರಿಪೇರಿ ತರಬೇತಿ ಸಮಾರೋಪ

ಉಜಿರೆ: ರುಡ್ ಸೆಟ್ ಸಂಸ್ಥೆ, ಉಜಿರೆ ಇವರ ಆಶ್ರಯದಲ್ಲಿ ನಡೆದ ಗೃಹೋಪಯೋಗಿ ವಿದ್ಯುತ್ ಉಪಕರಣಗಳ ದುರಸ್ತಿ ಹಾಗೂ ದ್ವಿಚಕ್ರ ವಾಹನಗಳ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇತ್ತೀಚೆಗೆ ನಡೆಯಿತು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳದ ಪಾರುಪತ್ಯಗಾರರಾದ ಲಕ್ಷ್ಮೀ ನಾರಾಯಣ ರಾವ್ ಅವರು ಮಾತನಾಡಿ, ವೃತ್ತಿಯಲ್ಲಿ ಶಿಸ್ತು, ಸೇವಾಭಾವ ಹಾಗೂ ಪ್ರಾಮಾಣಿಕತೆಯನ್ನು ಅಳವಡಿಸಿಕೊಂಡು ಅನುಭವ ಗಳಿಸಬೇಕು ಎಂದು ಸಲಹೆ ನೀಡಿದರು. ಹೆಗ್ಗಡೆಯವರ ಪರಿಕಲ್ಪನೆಯ ರುಡ್ ಸೆಟ್ ಸಂಸ್ಥೆ ಕೇವಲ ತಾಂತ್ರಿಕ ತರಬೇತಿಗೆ ಸೀಮಿತವಾಗದೇ, ಜೀವನ ಕೌಶಲ್ಯಗಳನ್ನು ಕಲಿಸುವ ಅತ್ಯಂತ ಮಹತ್ವದ ಸಂಸ್ಥೆಯಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರುಡ್ ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಪಿ. ವಿಜಯಕುಮಾರ್ ವಹಿಸಿ ಮಾತನಾಡಿ, ತರಬೇತಿ ಪಡೆದವರು ಬ್ಯಾಂಕ್ ಹಾಗೂ ಸರ್ಕಾರದ ವಿವಿಧ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಸ್ವ ಉದ್ಯೋಗ ಆರಂಭಿಸುವಂತೆ ಕರೆ ನೀಡಿದರು.

ಉಜಿರೆ ರುಡ್ ಸೆಟ್ ಸಂಸ್ಥೆಯ ನಿರ್ದೇಶಕ ಅಜೇಯ ಸ್ವಾಗತ ಭಾಷಣ ಮಾಡಿದರು. ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರೂಪಣೆ ನಡೆಸಿದರು. ಹಿರಿಯ ಉಪನ್ಯಾಸಕ ಕೆ. ಕರುಣಾಕರ ಜೈನ್ ವಂದಿಸಿದರು.

ಸೀತಾ ಹೆಗಡೆ ಹಾಗೂ ರಶ್ಮಿ ಪ್ರಾರ್ಥನೆ ನೆರವೇರಿಸಿದರು. ತರಬೇತಿರ್ಥಿಗಳಾದ ಗಿರೀಶ್, ಪುರಂದರ ರೈ, ಜೋಸೆಫ್ ಪಿಂಟೋ ಹಾಗೂ ಸುರೇಶ್ ಅವರುಗಳು ತಮ್ಮ ತರಬೇತಿ ಅನುಭವಗಳನ್ನು ಹಂಚಿಕೊಂಡರು.

Related posts

ಕಳೆಂಜ: ಕಾಯರ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಳೆಗಾಗಿ ಸಾಮೂಹಿಕ ಪ್ರಾರ್ಥನೆ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಕಲ್ಮಂಜ ಸತ್ಯನಪಲ್ಕೆ ಹಾ.ಉ. ಮಹಿಳಾ ಸಹಕಾರಿ ಸಂಘ ಉದ್ಘಾಟನೆ

Suddi Udaya

ಎಸ್‌.ಡಿ‌.ಎಂ. ನ್ಯಾಚುರೋಪಥಿ ಮತ್ತು ಯೋಗ ಸೈನ್ಸ್‌ ಕಾಲೇಜಿನಲ್ಲಿ ವಿಶ್ವ ಏಡ್ಸ್‌ ದಿನಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮ

Suddi Udaya

ಎರಡು ವರ್ಷದ ಕತ್ತಲೆಗೆ ಅಂತ್ಯ ಹಾಡಿದ ಶಾಸಕ ಹರೀಶ್ ಪೂಂಜ: ಮಂದಹಾಸ ಮೂಡಿಸಿದ ವಿದ್ಯುತ್ ಸಂಪರ್ಕ

Suddi Udaya
error: Content is protected !!