ಮಚ್ಚಿನ: ಪೇಜಾವರ ಶ್ರೀಧರ್ ಭಟ್ ಹಾಗೂ ಅವರ ಪುತ್ರ ಆದಿತ್ಯರಾವ್ ರವರಿಂದ ಮಚ್ಚಿನ ಸರ್ಕಾರಿ ಪ್ರೌಢಶಾಲೆಯ 2024- 25 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕ ಗಳಿಸಿದ 19 ಮಂದಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನವನ್ನು ವಿತರಿಸಿದರು.

ಸತತವಾಗಿ ಸುಮಾರು ಏಳು ವರ್ಷಗಳಿಂದ ಮಚ್ಚಿನ ಸರ್ಕಾರಿ ಪ್ರೌಢಶಾಲೆ ಇಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳಿಗೆ ಪ್ರತಿವರ್ಷ ಪೇಜಾವರ ಶ್ರೀಧರ್ ಭಟ್ ಹಾಗೂ ಅವರ ಪುತ್ರ ಆದಿತ್ಯರಾವ್ ಇವರು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್ ಪಡೆದ ಎಲ್ಲಾ ಮಕ್ಕಳಿಗೆ ಪ್ರೋತ್ಸಾಹದ ನೀಡುತ್ತಾ ಬರುತ್ತಿದ್ದು ಈ ವರ್ಷ 19 ವಿದ್ಯಾರ್ಥಿಗಳಿಗೆ ಪ್ರೊತ್ಸಾಹ ಧನ ನೀಡಿರುತ್ತಾರೆ.
ಇವರನ್ನು ಸಂಸ್ಥೆಯ ಮುಖ್ಯ ಶಿಕ್ಷಕರು, ಶಿಕ್ಷಕ ವೃoದ, ಎಸ್ಡಿಎಂಸಿ ಕಾರ್ಯಧ್ಯಕ್ಷರು, ಸದಸ್ಯರ ವತಿಯಿಂದ ಅಭಿನಂದಿಸಲಾಯಿತು.











