ಬೆಳ್ತಂಗಡಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ನಿರ್ದೇಶನದ ಮೇರೆಗೆ ಪೇಪರ್ ಲೇಸ್ ರಿಜಿಸ್ಟ್ರೇಷನ್ ವ್ಯವಸ್ಥೆಯನ್ನು ಜಾರಿಗೊಳಿಸಲು ತರಬೇತಿ ನೀಡಲಾಗುತ್ತಿದೆ.
ಕಾವೇರಿ ತಂತ್ರಾಂಶದ ಎಂಜಿನಿಯರ್ ಅವರಿಂದ ಫೆ 03ರಂದು ಅಪರಾಹ್ನ 4 ಗಂಟೆಗೆ ಬೆಳ್ತಂಗಡಿ ತಾಲೂಕು ಪಂಚಾಯತ್ ಸಭಾಂಗಣ ದಲ್ಲಿ ತರಬೇತಿ ಆಯೋಜಿಸಲಾಗಿದೆ ಎಂದು ಬೆಳ್ತಂಗಡಿ ತಾಲೂಕಿನ ಪ್ರಭಾರ ಉಪನೋಂದಣಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಸ್ತಾವೇಜು ಬರಹಗಾರರು, ವಕೀಲರು, ಇ-ಸ್ಟಾಂಪ್ ಪೇಪರ್ ಮಾರಾಟಗಾರರು, ಕರ್ನಾಟಕ ಒನ್, ಗ್ರಾಮ ಒನ್. ಬಾಪೂಜಿ ಸೇವಾ ಕೇಂದ್ರದ ಸಿಬ್ಬಂದಿ ಹಾಗೂ ಆಸಕ್ತ ಸಾರ್ವಜನಿಕರು ತರಬೇತಿಯಲ್ಲಿ ಭಾಗವಹಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ











