July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬದ್ಯಾರು ಹಿಬರೋಡಿ ಅನುಗ್ರಹ ನಿಲಯ ವಠಾರದಲ್ಲಿ ಸಂಭ್ರಮ ಸಡಗರದಿಂದ ನಡೆದ ‘ಹಿಬರೋಡಿ ಯಕ್ಷೋತ್ಸವ’

ಬೆಳ್ತಂಗಡಿ: ಪರಮಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ, ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಹಾಗೂ ಶ್ರೀ ಮಹಾಗಣಪತಿ ದೇವರ ಸೇವಾರ್ಥವಾಗಿ ಹಿಬರೋಡಿ ಯಕ್ಷೋತ್ಸವ ಕಾರ್ಯಕ್ರಮ ಜ.29 ರಂದು ಶ್ರೀಮತಿ ಮತ್ತು ದೇವದಾಸ್ ಶೆಟ್ಟಿ ಅನುಗ್ರಹ ನಿಲಯ ಹಿಬರೋಡಿ ಬದ್ಯಾರು ಇವರ ನೇತೃತ್ವದಲ್ಲಿ ಆದ್ದೂರಿಯಾಗಿ ಜರುಗಿತು.

ಬೆಳಿಗ್ಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯವರನ್ನು ಅನುಗ್ರಹ ಮನೆ ವಠಾರಕ್ಕೆ ಬರಮಾಡಿಕೊಳ್ಳಲಾಯಿತು. ಮಧ್ಯಾಹ್ನ 12 ಕ್ಕೆ ಶ್ರೀ ಮಹಾಗಣಪತಿ ದೇವರಿಗೆ ಹೋಮ, ಮಧ್ಯಾಹ್ನ ಮಹಾಪೂಜೆ ಬಳಿಕ ಸಾರ್ವಜನಿಕ ಪ್ರಸಾದ ಭೋಜನ ಕಾರ್ಯಕ್ರಮ ನಡೆಯತು.

ಸಂಜೆ 6 ಕ್ಕೆ ಯಕ್ಷಗಾನ ಮೇಳದ ಚೌಕಿಯಲ್ಲಿ ಮಹಾಗಣಪತಿ ದೇವರಿಗೆ ವಿಶೇಷ ಪೂಜೆ ನಡೆದು ಯಕ್ಷಗಾನ ಆರಂಭಗೊಂಡಿತು. ಸಾರ್ವಜನಿಕ ಪ್ರಸಾದ ಭೋಜನಾ ಕಾರ್ಯಕ್ರಮ ಜರುಗಿತು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯವರಿಂದ “ಸಹಸ್ರ ಕವಚ ಮೋಕ್ಷ ” ಎಂಬ ಪುರಾಣ ಕಥಾ ಭಾಗವನ್ನು ಸೇವೆ ಬಯಲಾಟವಾಗಿ ಪ್ರದರ್ಶನಗೊಂಡಿತು.

ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಆಗಮಿಸಿದಾಗ ಶ್ರೀಮತಿ ಮತ್ತು ದೇವದಾಸ್ ಶೆಟ್ಟಿ, ಮೋಹನ್ ಶೆಟ್ಟಿ ಹಾಗೂ ಕುಟುಂಬಸ್ಥರು ಅವರನ್ನು ಆದರದಿಂದ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ತಾಲೂಕಿನ ಗಣ್ಯರು, ಸಂಘ-ಸಂಸ್ಥೆಯವರು, ಊರಿನ ನಾಗರಿಕರು ಅಪಾರ ಸಂಖ್ಯೆಯಲ್ಲಿ ಭಾಗವಹಿಸಿ ಯಕ್ಷಗಾನವನ್ನು ವೀಕ್ಷಿಸಿದರು.

Related posts

ಬಿ.ಜೆ.ಪಿ ಮನೆ ಮನೆ ಪ್ರಚಾರ ಕಾರ್ಯಕ್ಕೆ ಹರೀಶ್ ಪೂಂಜ ಚಾಲನೆ

Suddi Udaya

ಇಳಂತಿಲ: ಡೇನಿತ್ ಸಾಲ್ಯಾನ್ ತೋಟದಲ್ಲಿ ಕಾಳಿಂಗ ಸರ್ಪ ಪತ್ತೆ

Suddi Udaya

ನಾಳೆ(ಜ.11): ಗುರುವಾಯನಕೆರೆ ಎಕ್ಸೆಲ್ ಶಿಕ್ಷಣ ಸಂಸ್ಥೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತು ಪಾಲಕರಿಗೆ ಪರೀಕ್ಷಾ ನಿಮಿತ್ತ ವಿಶೇಷ ಕಾರ್ಯಾಗಾರ:ಎಕ್ಸೆಲ್ ಬೆಳಕು ಫೌಂಡೇಶನ್ಉಚಿತ ಶಿಕ್ಷಣ ಯೋಜನೆ ಬಗ್ಗೆ ವಿಸ್ಕೃತ ಮಾಹಿತಿ ನೀಡಲಿದ್ದೇವೆ: ಸುಮಂತ್ ಕುಮಾರ್ ಜೈನ್:ಬರುವ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ,ಕಾರ್ಯಾಗಾರವೂ ಮಧ್ಯಾಹ್ನ 2:00 ರಿಂದ ಸಂಜೆ 4:30 ರ ವರೆಗೆ ಜರುಗಲಿದೆ

Suddi Udaya

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಮಕ್ಕಳ ಕುಣಿತ ಭಜನಾ ತಂಡದ ಉದ್ಘಾಟನಾ ಕಾರ್ಯಕ್ರಮ

Suddi Udaya

ಆಂಧ್ರಪ್ರದೇಶದಲ್ಲಿ ನಡೆಯುವ, ದಕ್ಷಿಣ ಭಾರತದ ವಿಜ್ಞಾನ ಮೇಳ: ಬೆಳ್ತಂಗಡಿ ಎಸ್. ಡಿ. ಎಂ ಶಾಲಾ ವಿದ್ಯಾರ್ಥಿ ಅಧಿಶ್ ಬಿ.ಸಿ ಆಯ್ಕೆ

Suddi Udaya

ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ನ ವಿಶೇಷ ಸಭೆ

Suddi Udaya
error: Content is protected !!