September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ವಾಣಿ ಕಾಲೇಜು: ಎನ್ಎಸ್ಎಸ್ ವಾರ್ಷಿಕ ದೈನಂದಿನ ಚಟುವಟಿಕೆಗಳ ಸಮಾರೋಪ ಸಮಾರಂಭ

ಬೆಳ್ತಂಗಡಿ: ವಿದ್ಯಾರ್ಥಿಗಳು ದೇಶಪ್ರೇಮವನ್ನು ಬೆಳೆಸಿಕೊಳ್ಳುವುದರ ಮೂಲಕ ಪರಿಸರ ಸಂರಕ್ಷಣೆಯ ಜವಾಬ್ದಾರಿಯನ್ನೂ ನಿರ್ವಹಿಸಬೇಕು ಎಂದು ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಮನೋಹರ ಬಳೆಂಜ ಹೇಳಿದರು.

ಅವರು ವಾಣಿ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ದೈನಂದಿನ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡುತ್ತಾ, ಹೆತ್ತವರ ಆಶೋತ್ತರಗಳನ್ನು ಈಡೇರಿಸುವಲ್ಲಿ ಮಕ್ಕಳ ಪಾತ್ರ ಮಹತ್ವವಾಗಿದೆ. ಜೀವನದಲ್ಲಿ ಪರಿಶ್ರಮದಿಂದ ತೊಡಗಿಕೊಂಡಾಗ ಭವಿಷ್ಯ ಉತ್ತಮವಾಗುವುದು. ಆಧುನಿಕ ವ್ಯಾಮೋಹಗಳಿಗೆ, ದುಶ್ಚಟಗಳಿಗೆ, ಮಾದಕ ವ್ಯಸನಗಳಿಗೆ, ಸೈಬರ್ ಕ್ರೈಮ್ ಗಳಿಗೆ, ಸಾಮಾಜಿಕ ಜಾಲತಾಣದ ಮೋಸಗಳಿಗೆ ಬಲಿಯಾಗದೆ ಪರಿಶುದ್ಧವಾದ ಜೀವನವನ್ನು ಮಾಡಬೇಕು. ನಾವು ಪುಣ್ಯದ ಕಾರ್ಯಗಳನ್ನು ಮಾಡಿದಾಗ ಅದೇ ರಕ್ಷಣೆಯನ್ನು ನೀಡುತ್ತದೆ ಎಂದರು.

ಕಾಲೇಜಿನ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ ಅಧ್ಯಕ್ಷತೆ ವಹಿಸಿದ್ದರು. ಆಡಳಿತಾಧಿಕಾರಿ ಪ್ರಸಾದ್ ಕುಮಾರ್, ಎನ್ಎಸ್ಎಸ್ ಘಟಕ ನಾಯಕ ತೀರ್ಥೇಶ್, ನಾಯಕಿ ಸುಶ್ಮಿತಾ ಉಪಸ್ಥಿತರಿದ್ದರು.
ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ದಿನೇಶ್ ಗೌಡ ಸ್ವಾಗತಿಸಿದರು. ಸಹ ಕಾರ್ಯಕ್ರಮಾಧಿಕಾರಿ ಕು.ಶ್ರಾವ್ಯ ಧನ್ಯವಾದವಿತ್ತರು. ಸುಶ್ಮಿತಾ ಕಾರ್ಯಕ್ರಮ ನಿರೂಪಿಸಿದರು.

Related posts

ಇಂದಬೆಟ್ಟು: ಕಲ್ಲಾಜೆ ನಿವಾಸಿ ವಸಂತ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ನಾಡಗೀತೆ, ರಾಷ್ಟ್ರಗೀತೆ ಬರವಣಿಗೆಯ ಸ್ಪರ್ಧೆ

Suddi Udaya

ಉಜಿರೆ ದೇವಸ್ಥಾನದಲ್ಲಿ ಸಂಕಷ್ಟ ಚತುರ್ಥಿ ಪ್ರಯುಕ್ತ  ಕಾವ್ಯವಾಚನ-ವ್ಯಾಖ್ಯಾನ   

Suddi Udaya

ಶ್ರಮದಾನದ ಮೂಲಕ ಐತನಡ್ಕ ಸೇತುವೆ ಪರಿಸರ ಸ್ವಚ್ಛಗೊಳಿಸಿದ ಗ್ರಾಮಸ್ಥರು-ಪೊದೆಗಳಿಂದ ಸಂಚಾರಕ್ಕೆ ಉಂಟಾಗಿದ್ದ ತೊಂದರೆ ನಿವಾರಣೆ-ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

ಭವಿಷ್ಯದ ಮಾರ್ಗಸೂಚಿ ರೂಪಿಸಲು ಬೆಳ್ತಂಗಡಿ ಧರ್ಮಪ್ರಾಂತ್ಯದಲ್ಲಿ ಪಾಲನಾ ಸಮಿತಿ ಹಾಗೂ ಧರ್ಮಗುರುಗಳ ಸಮ್ಮೇಳನ

Suddi Udaya

ಬದನಾಜೆ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!