25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ವಾಣಿ ಕಾಲೇಜು: ಎನ್ಎಸ್ಎಸ್ ವಾರ್ಷಿಕ ದೈನಂದಿನ ಚಟುವಟಿಕೆಗಳ ಸಮಾರೋಪ ಸಮಾರಂಭ

ಬೆಳ್ತಂಗಡಿ: ವಿದ್ಯಾರ್ಥಿಗಳು ದೇಶಪ್ರೇಮವನ್ನು ಬೆಳೆಸಿಕೊಳ್ಳುವುದರ ಮೂಲಕ ಪರಿಸರ ಸಂರಕ್ಷಣೆಯ ಜವಾಬ್ದಾರಿಯನ್ನೂ ನಿರ್ವಹಿಸಬೇಕು ಎಂದು ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಮನೋಹರ ಬಳೆಂಜ ಹೇಳಿದರು.

ಅವರು ವಾಣಿ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ದೈನಂದಿನ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡುತ್ತಾ, ಹೆತ್ತವರ ಆಶೋತ್ತರಗಳನ್ನು ಈಡೇರಿಸುವಲ್ಲಿ ಮಕ್ಕಳ ಪಾತ್ರ ಮಹತ್ವವಾಗಿದೆ. ಜೀವನದಲ್ಲಿ ಪರಿಶ್ರಮದಿಂದ ತೊಡಗಿಕೊಂಡಾಗ ಭವಿಷ್ಯ ಉತ್ತಮವಾಗುವುದು. ಆಧುನಿಕ ವ್ಯಾಮೋಹಗಳಿಗೆ, ದುಶ್ಚಟಗಳಿಗೆ, ಮಾದಕ ವ್ಯಸನಗಳಿಗೆ, ಸೈಬರ್ ಕ್ರೈಮ್ ಗಳಿಗೆ, ಸಾಮಾಜಿಕ ಜಾಲತಾಣದ ಮೋಸಗಳಿಗೆ ಬಲಿಯಾಗದೆ ಪರಿಶುದ್ಧವಾದ ಜೀವನವನ್ನು ಮಾಡಬೇಕು. ನಾವು ಪುಣ್ಯದ ಕಾರ್ಯಗಳನ್ನು ಮಾಡಿದಾಗ ಅದೇ ರಕ್ಷಣೆಯನ್ನು ನೀಡುತ್ತದೆ ಎಂದರು.

ಕಾಲೇಜಿನ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ ಅಧ್ಯಕ್ಷತೆ ವಹಿಸಿದ್ದರು. ಆಡಳಿತಾಧಿಕಾರಿ ಪ್ರಸಾದ್ ಕುಮಾರ್, ಎನ್ಎಸ್ಎಸ್ ಘಟಕ ನಾಯಕ ತೀರ್ಥೇಶ್, ನಾಯಕಿ ಸುಶ್ಮಿತಾ ಉಪಸ್ಥಿತರಿದ್ದರು.
ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ದಿನೇಶ್ ಗೌಡ ಸ್ವಾಗತಿಸಿದರು. ಸಹ ಕಾರ್ಯಕ್ರಮಾಧಿಕಾರಿ ಕು.ಶ್ರಾವ್ಯ ಧನ್ಯವಾದವಿತ್ತರು. ಸುಶ್ಮಿತಾ ಕಾರ್ಯಕ್ರಮ ನಿರೂಪಿಸಿದರು.

Related posts

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

Suddi Udaya

ಅರಸಿನಮಕ್ಕಿಯಲ್ಲಿ 22ನೇ ವರ್ಷದ ಅಷ್ಟಮಿ : ಹರೀಶ್ ಪೂಂಜರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ “ನ್ಯೂ ಏಜ್ ಕೆರಿಯರ್ ಆಪರ್ಚುನಿಟಿಸ್” ವಿಷಯದ ಮೇಲೆ ಉಪನ್ಯಾಸ

Suddi Udaya

ನಾಲ್ಕೂರು ಗ್ರಾಮದ ಅಲೈಮಾರ್ ನಲ್ಲಿ ರಸ್ತೆ ದುರಸ್ಥಿ,

Suddi Udaya

ಧರ್ಮಸ್ಥಳ ಗ್ರಾಮದಲ್ಲಿ 6ನೇ ಗುರುತು ಮಾಡಿದ್ದ ಜಾಗದಲ್ಲಿ ಅಸ್ಥಿಪಂಜರ ಪತ್ತೆಯಾದ ಪ್ರಕರಣ: ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯಲ್ಲಿ ತಾಲೂಕು ಮಟ್ಟದ ಪ್ರಾರಂಭಿಕ ತರಬೇತಿ ಶಿಬಿರ ಹಾಗೂ ಪುನಶ್ಚೇತನ ತರಬೇತಿ ಶಿಬಿರ

Suddi Udaya
error: Content is protected !!