ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಭೀಷ್ಮ ಏಕಾದಶೀ ಪ್ರಯುಕ್ತ ವಿಷ್ಣು ಸಹಸ್ರನಾಮ ಪಠಣ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಮಹಾವಿದ್ಯಾಲಯದಲ್ಲಿ ಸಂಸ್ಕೃತ ವಿಭಾಗದ ವತಿಯಿಂದ ಭೀಷ್ಮ ಏಕಾದಶಿಯ ಪ್ರಯುಕ್ತ ಜ.29 ರಂದು ವಿಷ್ಣುಸಹಸ್ರನಾಮ ಪಠಣ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮವನ್ನು ಸಂಸ್ಕೃತ ವಿಭಾಗದ ಸಹಾಯಕ ಪ್ರಾಧ್ಯಾಪಕ ಶ್ರೇಯಸ್ ಪಾಳಂದೆ ಸಂಯೋಜಿಸಿದರು, ದ್ವಿತೀಯ ವರ್ಷದ ವಿಜ್ಞಾನ ಹಾಗೂ ಕಲಾ ವಿಭಾಗದ ಸಂಸ್ಕೃತ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉತ್ಸಾಹದಿಂದ, ಸಮಚಿತ್ತರಾಗಿ ಮತ್ತು ಭಕ್ತಿಭಾವದಿಂದ ಭಾಗವಹಿಸಿದರು. ಸಂಸ್ಕೃತ ವಿಭಾಗದ ಮುಖ್ಯಸ್ಥರಾದ ಪ್ರೊ. ಶ್ರೀಧರ ಭಟ್ಟರು ಕಾರ್ಯಕ್ರಮಕ್ಕೆ ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಲ್ಲಿ ಭೀಷ್ಮ ಏಕಾದಶಿಯ ಮಹತ್ವದ ಕುರಿತು ಅರಿವು ಉಂಟಾಯಿತು. ವಿಷ್ಣುಸಹಸ್ರನಾಮ ಪಠಣದಿಂದ ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಮತ್ತು ಮಾನಸಿಕ ಸ್ಥೈರ್ಯದ ಹೆಚ್ಚಳದ ಜೊತೆಗೆ ಭಾಷೆಯ ಶುದ್ಧ ಉಚ್ಚಾರ ಹಾಗೂ ಭಾರತೀಯ ಸಂಸ್ಕೃತಿ ಮತ್ತು ಮೌಲ್ಯಗಳ ಬಗ್ಗೆ ಗೌರವ ಹೆಚ್ಚುವಂತೆ ಮಾಡಿತು. ಈ ರೀತಿಯ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಸರ್ವಾಂಗೀಣ ವ್ಯಕ್ತಿತ್ವ ವಿಕಾಸಕ್ಕೆ ಸಹಕಾರಿಯಾಗಿದ್ದು, ಸಂಸ್ಕೃತ ವಿಭಾಗದ ಧಾರ್ಮಿಕ–ಸಾಂಸ್ಕೃತಿಕ ಚಟುವಟಿಕೆಗಳಿಗೆ ಮತ್ತೊಂದು ಅರ್ಥಪೂರ್ಣ ಆಯಾಮವನ್ನು ನೀಡಿದವು

Related posts

ಮರೋಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಹೆಗ್ಗಡೆಯವರಿಗೆ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಗೌರವ ಪ್ರಶಸ್ತಿ: ಸಿರಿ ಸಿಬ್ಬಂದಿಗಳಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಕುದ್ರಾಯ ಸಮೀಪದ ಬೋಳಿಯಾರುನಲ್ಲಿ ಮೋರಿಯ ತಡೆಗೋಡೆ ಕುಸಿತ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ವರ್ಷಾವಧಿ ಜಾತ್ರಾ ಮಹೋತ್ಸವ: ಹಸಿರು ಹೊರೆಕಾಣಿಕೆ, ಧ್ವಜಾರೋಹಣ

Suddi Udaya

ಕೂಟ ಮಹಾ ಜಗತ್ತು ಬಂಟ್ವಾಳ ಅಂಗಸಂಸ್ಥೆಯ ಮಹಿಳಾ ವೇದಿಕೆಯ ರಜತ ಸಂಭ್ರಮ

Suddi Udaya
error: Content is protected !!