25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಣ್ಯ ಇಲಾಖೆ ಬುಡಕಟ್ಟು ಸಮುದಾಯದ ಜೊತೆಗೆ ಸರ್ಕಾರವನ್ನು ಕೂಡ ವಂಚಿಸುತ್ತಿದೆ : ಹರೀಶ್ ಎಳನೀರ್

ಬೆಳ್ತಂಗಡಿ: ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಬುಡಕಟ್ಟು ಸಮುದಾಯದ ಕಾಲೋನಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅರಣ್ಯ ಹಕ್ಕು ಕಾಯ್ದೆಯ ಸೆಕ್ಷನ್ 3 (2) ಪ್ರಕಾರ ಅವಕಾಶವಿದ್ದು. ವನ್ಯ ಜೀವಿ ಮಂಡಳಿಯ ಅನುಮತಿ ಮತ್ತು ಅರಣ್ಯ ಸಂರಕ್ಷಣಾ ಕಾಯ್ದೆಯ ಅನ್ವಯ ಭೂ ಪರಿವರ್ತನೆ ಅವಶ್ಯಕತೆ ಇಲ್ಲ ಎಂದು ಬುಡಕಟ್ಟು ಸಚಿವಾಲಯ ಸ್ಪಷ್ಟತೆಯನ್ನು ಕೊಟ್ಟ ಮೇಲೂ ಕೂಡ ಅರಣ್ಯ ಇಲಾಖೆ ವಿತ್ತಂಡ ವಾದ ಮಾಡುತ್ತಿರುವುದು ವಿಪರ್ಯಾಸ.

ಜೀವನೋಪಾಯಕ್ಕಾಗಿ , ಮೇಯಿಸುವುದಕ್ಕಾಗಿ ಅರಣ್ಯವನ್ನು ಅವಲಂಬಿಸಿರುವ ಬುಡಕಟ್ಟುಗಳನ್ನು ಅರಣ್ಯ ಹಕ್ಕು ಕಾಯ್ದೆಯ ಸೆಕ್ಷನ್ 2 (c) ಯಲ್ಲಿ ಅರಣ್ಯವಾಸಿ ಎಂದು ಪರಿಗಣನೆ ಮಾಡಬೇಕು. ಪಟ್ಟಾ ಜಮೀನಿನಲ್ಲಿ ವಾಸವಾಗಿರುವ ಬುಡಕಟ್ಟುಗಳಿಗೆ ಇದು ಅನ್ವಯ ಆಗಲ್ಲ ಅಂತ ಅರಣ್ಯ ಇಲಾಖೆ ಹೇಳುತ್ತಿರುವುದು ಹಾಸ್ಯಾಸ್ಪದ. ಜಿಲ್ಲಾಡಳಿತ ಜನಪ್ರತಿನಿಧಿಗಳು ಜಾರಿಯಲ್ಲಿರುವ ಕಾನೂನನ್ನು ಅನುಷ್ಠಾನ ಮಾಡಲು ಮುಂದಾಗಬೇಕು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಹರೀಶ್ ಎಳನೀರ್ ರವರು ಆಗ್ರಹಿಸಿದ್ದಾರೆ.

Related posts

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ತಾಲೂಕು ಮಟ್ಟದ ಖೋ-ಖೋ ಸ್ಪರ್ಧೆ: ನಡ ಸರಕಾರಿ ಪಿ.ಯು. ಕಾಲೇಜು ಬಾಲಕರ ಹಾಗೂ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ವಿಷ ಪದಾರ್ಥ ಸೇವಿಸಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಶಿಬಾಜೆ: ಕಾಡಾನೆ ದಾಳಿಗೆ ಹಸು ಬಲಿ

Suddi Udaya

ಚಾರ್ಮಾಡಿ: ಕುಡಿಯುವ ನೀರಿಗಾಗಿ ಪಂಚಾಯತ್ ಎದುರು ಜನರ ಪ್ರತಿಭಟನೆ: ತಕ್ಷಣ ಗ್ರಾ.ಪಂ. ನಿಂದ ಸ್ಪಂದನೆ

Suddi Udaya

ಮಡವು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya
error: Content is protected !!