July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಣ್ಯ ಇಲಾಖೆ ಬುಡಕಟ್ಟು ಸಮುದಾಯದ ಜೊತೆಗೆ ಸರ್ಕಾರವನ್ನು ಕೂಡ ವಂಚಿಸುತ್ತಿದೆ : ಹರೀಶ್ ಎಳನೀರ್

ಬೆಳ್ತಂಗಡಿ: ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಬುಡಕಟ್ಟು ಸಮುದಾಯದ ಕಾಲೋನಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅರಣ್ಯ ಹಕ್ಕು ಕಾಯ್ದೆಯ ಸೆಕ್ಷನ್ 3 (2) ಪ್ರಕಾರ ಅವಕಾಶವಿದ್ದು. ವನ್ಯ ಜೀವಿ ಮಂಡಳಿಯ ಅನುಮತಿ ಮತ್ತು ಅರಣ್ಯ ಸಂರಕ್ಷಣಾ ಕಾಯ್ದೆಯ ಅನ್ವಯ ಭೂ ಪರಿವರ್ತನೆ ಅವಶ್ಯಕತೆ ಇಲ್ಲ ಎಂದು ಬುಡಕಟ್ಟು ಸಚಿವಾಲಯ ಸ್ಪಷ್ಟತೆಯನ್ನು ಕೊಟ್ಟ ಮೇಲೂ ಕೂಡ ಅರಣ್ಯ ಇಲಾಖೆ ವಿತ್ತಂಡ ವಾದ ಮಾಡುತ್ತಿರುವುದು ವಿಪರ್ಯಾಸ.

ಜೀವನೋಪಾಯಕ್ಕಾಗಿ , ಮೇಯಿಸುವುದಕ್ಕಾಗಿ ಅರಣ್ಯವನ್ನು ಅವಲಂಬಿಸಿರುವ ಬುಡಕಟ್ಟುಗಳನ್ನು ಅರಣ್ಯ ಹಕ್ಕು ಕಾಯ್ದೆಯ ಸೆಕ್ಷನ್ 2 (c) ಯಲ್ಲಿ ಅರಣ್ಯವಾಸಿ ಎಂದು ಪರಿಗಣನೆ ಮಾಡಬೇಕು. ಪಟ್ಟಾ ಜಮೀನಿನಲ್ಲಿ ವಾಸವಾಗಿರುವ ಬುಡಕಟ್ಟುಗಳಿಗೆ ಇದು ಅನ್ವಯ ಆಗಲ್ಲ ಅಂತ ಅರಣ್ಯ ಇಲಾಖೆ ಹೇಳುತ್ತಿರುವುದು ಹಾಸ್ಯಾಸ್ಪದ. ಜಿಲ್ಲಾಡಳಿತ ಜನಪ್ರತಿನಿಧಿಗಳು ಜಾರಿಯಲ್ಲಿರುವ ಕಾನೂನನ್ನು ಅನುಷ್ಠಾನ ಮಾಡಲು ಮುಂದಾಗಬೇಕು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಹರೀಶ್ ಎಳನೀರ್ ರವರು ಆಗ್ರಹಿಸಿದ್ದಾರೆ.

Related posts

ಉಜಿರೆ: ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನ ಮೊದಲ ವರ್ಷದ ಬಿಇ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Suddi Udaya

ಮಹಿಳಾ ಶ್ರಮಿಕರ ಸಂಗಮ – 2026 ಕಾರ್ಯಕ್ರಮ

Suddi Udaya

ಕೆರೆಯಲ್ಲಿ ಸ್ನಾನಕ್ಕಿಳಿದ ಯುವಕ ಸಾವು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಮೆಸ್ಕಾಂನಲ್ಲಿ ಕಾರ್ಯನಿರ್ವಹಿಸುತ್ತಿರುವ ನಾಗೇಶ್ ಕುಲಾಲ್ ರಿಗೆ ಗೌರವಾರ್ಪಣೆ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಓರಿಯೆಂಟೇಶನ್ ಕಾರ್ಯಕ್ರಮ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಯವರಿಗೆ ರಾಜ್ಯಪಾಲರಿಂದ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿ ಪ್ರದಾನ

Suddi Udaya
error: Content is protected !!