25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಣ್ಯ ಇಲಾಖೆ ಬುಡಕಟ್ಟು ಸಮುದಾಯದ ಜೊತೆಗೆ ಸರ್ಕಾರವನ್ನು ಕೂಡ ವಂಚಿಸುತ್ತಿದೆ : ಹರೀಶ್ ಎಳನೀರ್

ಬೆಳ್ತಂಗಡಿ: ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಬುಡಕಟ್ಟು ಸಮುದಾಯದ ಕಾಲೋನಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅರಣ್ಯ ಹಕ್ಕು ಕಾಯ್ದೆಯ ಸೆಕ್ಷನ್ 3 (2) ಪ್ರಕಾರ ಅವಕಾಶವಿದ್ದು. ವನ್ಯ ಜೀವಿ ಮಂಡಳಿಯ ಅನುಮತಿ ಮತ್ತು ಅರಣ್ಯ ಸಂರಕ್ಷಣಾ ಕಾಯ್ದೆಯ ಅನ್ವಯ ಭೂ ಪರಿವರ್ತನೆ ಅವಶ್ಯಕತೆ ಇಲ್ಲ ಎಂದು ಬುಡಕಟ್ಟು ಸಚಿವಾಲಯ ಸ್ಪಷ್ಟತೆಯನ್ನು ಕೊಟ್ಟ ಮೇಲೂ ಕೂಡ ಅರಣ್ಯ ಇಲಾಖೆ ವಿತ್ತಂಡ ವಾದ ಮಾಡುತ್ತಿರುವುದು ವಿಪರ್ಯಾಸ.

ಜೀವನೋಪಾಯಕ್ಕಾಗಿ , ಮೇಯಿಸುವುದಕ್ಕಾಗಿ ಅರಣ್ಯವನ್ನು ಅವಲಂಬಿಸಿರುವ ಬುಡಕಟ್ಟುಗಳನ್ನು ಅರಣ್ಯ ಹಕ್ಕು ಕಾಯ್ದೆಯ ಸೆಕ್ಷನ್ 2 (c) ಯಲ್ಲಿ ಅರಣ್ಯವಾಸಿ ಎಂದು ಪರಿಗಣನೆ ಮಾಡಬೇಕು. ಪಟ್ಟಾ ಜಮೀನಿನಲ್ಲಿ ವಾಸವಾಗಿರುವ ಬುಡಕಟ್ಟುಗಳಿಗೆ ಇದು ಅನ್ವಯ ಆಗಲ್ಲ ಅಂತ ಅರಣ್ಯ ಇಲಾಖೆ ಹೇಳುತ್ತಿರುವುದು ಹಾಸ್ಯಾಸ್ಪದ. ಜಿಲ್ಲಾಡಳಿತ ಜನಪ್ರತಿನಿಧಿಗಳು ಜಾರಿಯಲ್ಲಿರುವ ಕಾನೂನನ್ನು ಅನುಷ್ಠಾನ ಮಾಡಲು ಮುಂದಾಗಬೇಕು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಹರೀಶ್ ಎಳನೀರ್ ರವರು ಆಗ್ರಹಿಸಿದ್ದಾರೆ.

Related posts

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಹರೀಶ್ ಪೂಂಜರವರ ಹೆಸರಿನಲ್ಲಿ ನಕಲಿ ಸಂದೇಶ ರವಾನೆ: ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಿಜೆಪಿ ಸಾಮಾಜಿಕ ಜಾಲತಾಣದ ಪ್ರಕೋಷ್ಟದಿಂದ ದೂರು

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ : ವರದಿ ಸಾಲಿನಲ್ಲಿ ರೂ. 394.12 ಕೋಟಿ ವಾರ್ಷಿಕ ವ್ಯವಹಾರ ನಡೆಸಿ, ರೂ.1.54 ಕೋಟಿ ಲಾಭ: ರಾಕೇಶ್ ಹೆಗ್ಡೆ

Suddi Udaya

ಮೂರು ಪಿಕಪ್ ವಾಹನದಲ್ಲಿ ಹಿಂಸಾತ್ಮಕವಾಗಿ ಜಾನುವಾರು ಸಾಗಾಟದ ಪ್ರಕರಣ ಪತ್ತೆ: ಪಿಕಪ್ ಸಹಿತ ವಾಹನದಲ್ಲಿದ್ದ 6 ದನ, 2 ಗಂಡು ಕರುಗಳು ಸೇರಿ ಒಟ್ಟು 8 ಜಾನುವಾರು ವಶ

Suddi Udaya

ಪುದುವೆಟ್ಟು ಪಂಚಾಯತ್ ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸಿಂಧೂ ಕೆ.ಎಸ್ ಯವರಿಂದ ನಾಮಪತ್ರ ಸಲ್ಲಿಕೆ

Suddi Udaya

ಸುಲ್ಕೇರಿ ಲಯನ್ಸ್ ಕ್ಲಬ್ ವತಿಯಿಂದ ಕಿಂಡಿ ಅಣೆಕಟ್ಟಿಗೆ ಸಿಲುಕಿದ ಮರದ ದಿಮ್ಮಿಗಳ ತೆರವು

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya
error: Content is protected !!