September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಲೆಚುಕ್ಕಿ ರೋಗದಿಂದ ಅಡಕೆ ಬೆಳೆಗಾರರು ಸಂಕಷ್ಟಕ್ಕೀಡಾಗಿದ್ದಾರೆ: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್

ಬೆಳ್ತಂಗಡಿ: ಮಲೆನಾಡು, ಕರಾವಳಿ ಹಾಗೂ ಶಿವಮೊಗ್ಗ ಭಾಗದ ವಾಣಿಜ್ಯ ಬೆಳೆಯಾದ ಅಡಿಕೆಗೆ ಅಂದಾಜು 88559 ಹೆಕ್ಟೇರ್ ಪ್ರದೇಶದಲ್ಲಿ ಎಲೆಚುಕ್ಕೆ ರೋಗವು ಭಾದೆ ಕಂಡುಬಂದಿರುತ್ತದೆ ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ತಿಳಿಸಿದ್ದಾರೆ.

ವಿಧಾನ ಪರಿಷತ್ ನಲ್ಲಿ ಸದಸ್ಯ ಪ್ರತಾಪಸಿಂಹ ನಾಯಕ್ ಉಜಿರೆ ಅವರು ಎಲೆಚುಕ್ಕಿ ರೋಗದಿಂದ ಅಡಕೆ ಬೆಳೆಗಾರರು ಆರ್ಥಿಕವಾಗಿ ಅತ್ಯಂತ ಸಂಕಷ್ಟಕ್ಕೀಡಾಗಿರುವ ಬಗ್ಗೆ ಗಮನ ಸೆಳೆಯುವ ಪ್ರಶ್ನೆಗೆ ಸಚಿವರು ಉತ್ತರಿಸಿದರು.

2025-26 ನೇ ಸಾಲಿನಲ್ಲಿ MIDH ಮಾರ್ಗಸೂಚಿಯನ್ವಯ ರಾಷ್ಟ್ರೀಯ ತೋಟಗಾರಿಕೆ ಮಿಶನ್ ಯೋಜನೆಯ “Special Interventions” ಎಲೆಚುಕ್ಕೆ ರೋಗದ ನಿಯಂತ್ರಣ ಕಾರ್ಯಕ್ರಮದಡಿ ಸಮಗ್ರ ರೋಗ/ಕೀಟಗಳ ಹಾಗೂ ಪೋಷಕಾಂಶಗಳ ನಿರ್ವಹಣೆಗಾಗಿ ಪ್ರತಿ ಹೆಕ್ಟೇರಿಗೆ ತಗಲುವ ರೂ 5000 ಗಳಲ್ಲಿ ಶೇ.30 ರಂತೆ ಪ್ರತಿ ಹೆಕ್ಟೇರಿಗೆ ರೂ.1500 ದರದಲ್ಲಿ 2 ಹೆಕ್ಟೇರ್ ರವರೆಗೆ 3000/ರೂ.860-65 ಲಕ್ಷಗಳ ಅನುದಾನ ನಿಗದಿಯಾಗಿದೆ ಈವರೆಗೂ 14115 ರೈತರಿಗೆ ರೂ.452.61 ಲಕ್ಷಗಳ ಸಹಾಯಧನ ನೀಡಲಾಗಿರುತ್ತದೆ. ಕಾರ್ಯಕ್ರಮ ಪ್ರಗತಿಯಲ್ಲಿರುತ್ತದೆ.
ಮುಂಗಾರು ಮತ್ತು ಹಿಂಗಾರು ಮರುವಿನ್ಯಾಸಗೊಳಿಸಲಾದ ಬೆಳೆವಿಮೆ ನಮ್ಮ ಸಂಭವಿಸಿದಲ್ಲಿ ವಿಮಾ ಒದಗಿಸಲಾಗುತ್ತಿದೆ. ವುಸ್ತಕ ಸಾಲಿನಲ್ಲಿ ಅಡಿಕೆ ಬೆಳೆಗೆ ಬಾಧಿಸುವ ಎಲೆಚುಕ್ಕಿ ರೋಗ ಬಾಧಿತ ಸಸ್ಯದ ಭಾಗಗಳನ್ನು ತೆಗೆಯುವುದು ಮತ್ತು ನಾಶಪಡಿಸುವುದು ಸಸ್ಯ ನಿರ್ವಹಣೆಗೆ ಸಹಾಯಧನಕ್ಕಾಗಿ ಒಟ್ಟಾರೆ ರೂ.57776.33 ಲಕ್ಷಗಳ ಪ್ರಸ್ತಾವನೆಯನ್ನು ಸಿದ್ಧಪಡಿಸಲಾಗಿದೆ. ಇದರಲ್ಲಿ,MIDH ಮಾರ್ಗಸೂಚಿಯನ್ವಯ 30 ಸಹಾಯಧನದಂತೆ ಒಟ್ಟು ರೂ.17332.90 ಲಕ್ಷಗಳನ್ನುಕೇಂದ್ರ ಸರಕಾರಕ್ಕೆ ಸಲ್ಲಿಸಲಾಗಿದೆ.

ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ವಿಮಾ ಪರಿಹಾರದಲ್ಲಿ ಹವಮಾನ ವೈಪರಿತ್ಯದಿಂದ ಆಗುವ/ ಹೆಚ್ಚಾಗುವ ರೋಗಗಳಿಂದಾಗುವ ನಷ್ಟವು ಸಹ ಪರೋಕ್ಷವಾಗಿ ಒಳಗೊಂಡಿರುತ್ತದೆ. 2024-25ನೇ ಸಾಲಿನಲ್ಲಿ ಈ ಯೋಜನೆಯಡಿ ಅಡಿಕೆ ಬೆಳೆಗೆ ವಿಮಾ ಕಂಪನಿಗಳಿಂದ ಈವರೆವಿಗೆ 365920 ಅರ್ಹ ರೈತ ಪ್ರಕರಣಗಳಿಗೆ ರೂ. 47254 13 ಲಕ್ಷ ಪರಿಹಾರ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Related posts

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ: ಬಿ.ಸಿ.ರೋಡಿನಿಂದ ದೇವರ ಆಭರಣ, ಉತ್ಸವ ಮೂರ್ತಿ ಮೆರವಣಿಗೆ

Suddi Udaya

ಲಾಯಿಲ : ರಸ್ತೆಗಳ ಬದಿಯಲ್ಲಿರುವ ಚರಂಡಿಗಳ ಹೂಳೆತ್ತುವಂತೆ ಮತ್ತು ಗಿಡ ಗಂಟಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರಿಂದ ಗ್ರಾ.ಪಂ.ಗೆ ಮನವಿ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಆಳ್ವಾಸ್ ವೈದ್ಯಕೀಯ  ಕಾಲೇಜಿಗೆ ತುಳು ಅಲ್ಪಸಂಖ್ಯಾತ ಮಾನ್ಯತೆ: 150 ಎಮ್‌ಬಿಬಿಎಸ್ ಸೀಟುಗಳ ಪೈಕಿ ತುಳು ಭಾಷಿಕ ಅಲ್ಪಸಂಖ್ಯಾತರಿಗೆ 54 ಸೀಟುಗಳು

Suddi Udaya

ವಸಂತ ಬಂಗೇರ ಕುಟುಂಬಸ್ಥರಿಂದ ಕೃತಜ್ಞತಾ ಪತ್ರ

Suddi Udaya

ರಾಜ್ಯಮಟ್ಟದ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್ : ಹೇಮಚಂದ್ರರಿಗೆ ಬೆಸ್ಟ್ ಲಿಪ್ಟರ್ ಕರ್ನಾಟಕ ಪ್ರಶಸ್ತಿ

Suddi Udaya
error: Content is protected !!