July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಲೆಚುಕ್ಕಿ ರೋಗದಿಂದ ಅಡಕೆ ಬೆಳೆಗಾರರು ಸಂಕಷ್ಟಕ್ಕೀಡಾಗಿದ್ದಾರೆ: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್

ಬೆಳ್ತಂಗಡಿ: ಮಲೆನಾಡು, ಕರಾವಳಿ ಹಾಗೂ ಶಿವಮೊಗ್ಗ ಭಾಗದ ವಾಣಿಜ್ಯ ಬೆಳೆಯಾದ ಅಡಿಕೆಗೆ ಅಂದಾಜು 88559 ಹೆಕ್ಟೇರ್ ಪ್ರದೇಶದಲ್ಲಿ ಎಲೆಚುಕ್ಕೆ ರೋಗವು ಭಾದೆ ಕಂಡುಬಂದಿರುತ್ತದೆ ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ತಿಳಿಸಿದ್ದಾರೆ.

ವಿಧಾನ ಪರಿಷತ್ ನಲ್ಲಿ ಸದಸ್ಯ ಪ್ರತಾಪಸಿಂಹ ನಾಯಕ್ ಉಜಿರೆ ಅವರು ಎಲೆಚುಕ್ಕಿ ರೋಗದಿಂದ ಅಡಕೆ ಬೆಳೆಗಾರರು ಆರ್ಥಿಕವಾಗಿ ಅತ್ಯಂತ ಸಂಕಷ್ಟಕ್ಕೀಡಾಗಿರುವ ಬಗ್ಗೆ ಗಮನ ಸೆಳೆಯುವ ಪ್ರಶ್ನೆಗೆ ಸಚಿವರು ಉತ್ತರಿಸಿದರು.

2025-26 ನೇ ಸಾಲಿನಲ್ಲಿ MIDH ಮಾರ್ಗಸೂಚಿಯನ್ವಯ ರಾಷ್ಟ್ರೀಯ ತೋಟಗಾರಿಕೆ ಮಿಶನ್ ಯೋಜನೆಯ “Special Interventions” ಎಲೆಚುಕ್ಕೆ ರೋಗದ ನಿಯಂತ್ರಣ ಕಾರ್ಯಕ್ರಮದಡಿ ಸಮಗ್ರ ರೋಗ/ಕೀಟಗಳ ಹಾಗೂ ಪೋಷಕಾಂಶಗಳ ನಿರ್ವಹಣೆಗಾಗಿ ಪ್ರತಿ ಹೆಕ್ಟೇರಿಗೆ ತಗಲುವ ರೂ 5000 ಗಳಲ್ಲಿ ಶೇ.30 ರಂತೆ ಪ್ರತಿ ಹೆಕ್ಟೇರಿಗೆ ರೂ.1500 ದರದಲ್ಲಿ 2 ಹೆಕ್ಟೇರ್ ರವರೆಗೆ 3000/ರೂ.860-65 ಲಕ್ಷಗಳ ಅನುದಾನ ನಿಗದಿಯಾಗಿದೆ ಈವರೆಗೂ 14115 ರೈತರಿಗೆ ರೂ.452.61 ಲಕ್ಷಗಳ ಸಹಾಯಧನ ನೀಡಲಾಗಿರುತ್ತದೆ. ಕಾರ್ಯಕ್ರಮ ಪ್ರಗತಿಯಲ್ಲಿರುತ್ತದೆ.
ಮುಂಗಾರು ಮತ್ತು ಹಿಂಗಾರು ಮರುವಿನ್ಯಾಸಗೊಳಿಸಲಾದ ಬೆಳೆವಿಮೆ ನಮ್ಮ ಸಂಭವಿಸಿದಲ್ಲಿ ವಿಮಾ ಒದಗಿಸಲಾಗುತ್ತಿದೆ. ವುಸ್ತಕ ಸಾಲಿನಲ್ಲಿ ಅಡಿಕೆ ಬೆಳೆಗೆ ಬಾಧಿಸುವ ಎಲೆಚುಕ್ಕಿ ರೋಗ ಬಾಧಿತ ಸಸ್ಯದ ಭಾಗಗಳನ್ನು ತೆಗೆಯುವುದು ಮತ್ತು ನಾಶಪಡಿಸುವುದು ಸಸ್ಯ ನಿರ್ವಹಣೆಗೆ ಸಹಾಯಧನಕ್ಕಾಗಿ ಒಟ್ಟಾರೆ ರೂ.57776.33 ಲಕ್ಷಗಳ ಪ್ರಸ್ತಾವನೆಯನ್ನು ಸಿದ್ಧಪಡಿಸಲಾಗಿದೆ. ಇದರಲ್ಲಿ,MIDH ಮಾರ್ಗಸೂಚಿಯನ್ವಯ 30 ಸಹಾಯಧನದಂತೆ ಒಟ್ಟು ರೂ.17332.90 ಲಕ್ಷಗಳನ್ನುಕೇಂದ್ರ ಸರಕಾರಕ್ಕೆ ಸಲ್ಲಿಸಲಾಗಿದೆ.

ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ವಿಮಾ ಪರಿಹಾರದಲ್ಲಿ ಹವಮಾನ ವೈಪರಿತ್ಯದಿಂದ ಆಗುವ/ ಹೆಚ್ಚಾಗುವ ರೋಗಗಳಿಂದಾಗುವ ನಷ್ಟವು ಸಹ ಪರೋಕ್ಷವಾಗಿ ಒಳಗೊಂಡಿರುತ್ತದೆ. 2024-25ನೇ ಸಾಲಿನಲ್ಲಿ ಈ ಯೋಜನೆಯಡಿ ಅಡಿಕೆ ಬೆಳೆಗೆ ವಿಮಾ ಕಂಪನಿಗಳಿಂದ ಈವರೆವಿಗೆ 365920 ಅರ್ಹ ರೈತ ಪ್ರಕರಣಗಳಿಗೆ ರೂ. 47254 13 ಲಕ್ಷ ಪರಿಹಾರ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Related posts

ಬಂದಾರು: ಪೆರ್ಲ ಬೈಪಾಡಿಯ ಕಾಡಂಡ ಬಳಿ ಗುಡ್ಡಕ್ಕೆ ಬೆಂಕಿ

Suddi Udaya

ಮದುವೆ ಸಮಾರಂಭದಲ್ಲಿ ಮಾದರಿ ಕಾರ್ಯ ವರನ ತಂದೆ ಮುಳುಗು ತಜ್ಞ ರಿಗೆ ಬಂಧು ಮಿತ್ರರಿಂದ ಸನ್ಮಾನ: ತನ್ನ ಪ್ರಾಯ ಲೆಕ್ಕಿಸದೆ ಇನ್ನೊಬ್ಬರ ಪ್ರಾಣ ರಕ್ಷಿಸುವ ಬಂದಾರು ಮಹಮ್ಮದರ ಸೇವೆ ಅನುಕರಣೀಯ :ಕೆ. ಎಂ.ಮುಸ್ತಫ

Suddi Udaya

ಕೂಕ್ರಬೆಟ್ಟು ಶಾಲೆಯಲ್ಲಿ ನಾರಾವಿ ವಲಯ ಮಟ್ಟದ ವಾಲಿಬಾಲ್‌ ಪಂದ್ಯಾಟ: ಸಾವ್ಯ, ಅಂಡಿಂಜೆ ಶಾಲಾ ಮಕ್ಕಳು ಪ್ರಥಮ

Suddi Udaya

ಉಜಿರೆಯ ಶ್ರೀ ಧ. ಮಂ. ಕಾಲೇಜಿನ ಪ್ರಾಧ್ಯಾಪಕ ಸುವೀರ್ ಜೈನ್ ಅವರಿಗೆ ಪಿಎಚ್. ಡಿ. ಪದವಿ

Suddi Udaya

ಮದ್ದಡ್ಕ ಮಸ್ಜಿದ್‌ನ ನೂತನ ಆಡಳಿತ ಕಚೇರಿ ಉದ್ಘಾಟನೆ

Suddi Udaya

ಹಣ ತೆಗೆಯಲು ಅಪರಿಚಿತನಿಗೆ ಎಟಿಎಂ ಕಾರ್ಡ್, ಪಿನ್ ನಂಬರ್ ನೀಡಿದ ವ್ಯಕ್ತಿ ಎಟಿಎಂ ಕಾರ್ಡ್ ಬದಲಾಯಿಸಿ ನೀಡಿದ ಅಪರಿಚಿತ ಖಾತೆಯಿಂದ 1 ಲಕ್ಷಕ್ಕೂ ಅಧಿಕ ರೂ. ತೆಗೆದು ವಂಚನೆ

Suddi Udaya
error: Content is protected !!