23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಲೆಚುಕ್ಕಿ ರೋಗದಿಂದ ಅಡಕೆ ಬೆಳೆಗಾರರು ಸಂಕಷ್ಟಕ್ಕೀಡಾಗಿದ್ದಾರೆ: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್

ಬೆಳ್ತಂಗಡಿ: ಮಲೆನಾಡು, ಕರಾವಳಿ ಹಾಗೂ ಶಿವಮೊಗ್ಗ ಭಾಗದ ವಾಣಿಜ್ಯ ಬೆಳೆಯಾದ ಅಡಿಕೆಗೆ ಅಂದಾಜು 88559 ಹೆಕ್ಟೇರ್ ಪ್ರದೇಶದಲ್ಲಿ ಎಲೆಚುಕ್ಕೆ ರೋಗವು ಭಾದೆ ಕಂಡುಬಂದಿರುತ್ತದೆ ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ತಿಳಿಸಿದ್ದಾರೆ.

ವಿಧಾನ ಪರಿಷತ್ ನಲ್ಲಿ ಸದಸ್ಯ ಪ್ರತಾಪಸಿಂಹ ನಾಯಕ್ ಉಜಿರೆ ಅವರು ಎಲೆಚುಕ್ಕಿ ರೋಗದಿಂದ ಅಡಕೆ ಬೆಳೆಗಾರರು ಆರ್ಥಿಕವಾಗಿ ಅತ್ಯಂತ ಸಂಕಷ್ಟಕ್ಕೀಡಾಗಿರುವ ಬಗ್ಗೆ ಗಮನ ಸೆಳೆಯುವ ಪ್ರಶ್ನೆಗೆ ಸಚಿವರು ಉತ್ತರಿಸಿದರು.

2025-26 ನೇ ಸಾಲಿನಲ್ಲಿ MIDH ಮಾರ್ಗಸೂಚಿಯನ್ವಯ ರಾಷ್ಟ್ರೀಯ ತೋಟಗಾರಿಕೆ ಮಿಶನ್ ಯೋಜನೆಯ “Special Interventions” ಎಲೆಚುಕ್ಕೆ ರೋಗದ ನಿಯಂತ್ರಣ ಕಾರ್ಯಕ್ರಮದಡಿ ಸಮಗ್ರ ರೋಗ/ಕೀಟಗಳ ಹಾಗೂ ಪೋಷಕಾಂಶಗಳ ನಿರ್ವಹಣೆಗಾಗಿ ಪ್ರತಿ ಹೆಕ್ಟೇರಿಗೆ ತಗಲುವ ರೂ 5000 ಗಳಲ್ಲಿ ಶೇ.30 ರಂತೆ ಪ್ರತಿ ಹೆಕ್ಟೇರಿಗೆ ರೂ.1500 ದರದಲ್ಲಿ 2 ಹೆಕ್ಟೇರ್ ರವರೆಗೆ 3000/ರೂ.860-65 ಲಕ್ಷಗಳ ಅನುದಾನ ನಿಗದಿಯಾಗಿದೆ ಈವರೆಗೂ 14115 ರೈತರಿಗೆ ರೂ.452.61 ಲಕ್ಷಗಳ ಸಹಾಯಧನ ನೀಡಲಾಗಿರುತ್ತದೆ. ಕಾರ್ಯಕ್ರಮ ಪ್ರಗತಿಯಲ್ಲಿರುತ್ತದೆ.
ಮುಂಗಾರು ಮತ್ತು ಹಿಂಗಾರು ಮರುವಿನ್ಯಾಸಗೊಳಿಸಲಾದ ಬೆಳೆವಿಮೆ ನಮ್ಮ ಸಂಭವಿಸಿದಲ್ಲಿ ವಿಮಾ ಒದಗಿಸಲಾಗುತ್ತಿದೆ. ವುಸ್ತಕ ಸಾಲಿನಲ್ಲಿ ಅಡಿಕೆ ಬೆಳೆಗೆ ಬಾಧಿಸುವ ಎಲೆಚುಕ್ಕಿ ರೋಗ ಬಾಧಿತ ಸಸ್ಯದ ಭಾಗಗಳನ್ನು ತೆಗೆಯುವುದು ಮತ್ತು ನಾಶಪಡಿಸುವುದು ಸಸ್ಯ ನಿರ್ವಹಣೆಗೆ ಸಹಾಯಧನಕ್ಕಾಗಿ ಒಟ್ಟಾರೆ ರೂ.57776.33 ಲಕ್ಷಗಳ ಪ್ರಸ್ತಾವನೆಯನ್ನು ಸಿದ್ಧಪಡಿಸಲಾಗಿದೆ. ಇದರಲ್ಲಿ,MIDH ಮಾರ್ಗಸೂಚಿಯನ್ವಯ 30 ಸಹಾಯಧನದಂತೆ ಒಟ್ಟು ರೂ.17332.90 ಲಕ್ಷಗಳನ್ನುಕೇಂದ್ರ ಸರಕಾರಕ್ಕೆ ಸಲ್ಲಿಸಲಾಗಿದೆ.

ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ವಿಮಾ ಪರಿಹಾರದಲ್ಲಿ ಹವಮಾನ ವೈಪರಿತ್ಯದಿಂದ ಆಗುವ/ ಹೆಚ್ಚಾಗುವ ರೋಗಗಳಿಂದಾಗುವ ನಷ್ಟವು ಸಹ ಪರೋಕ್ಷವಾಗಿ ಒಳಗೊಂಡಿರುತ್ತದೆ. 2024-25ನೇ ಸಾಲಿನಲ್ಲಿ ಈ ಯೋಜನೆಯಡಿ ಅಡಿಕೆ ಬೆಳೆಗೆ ವಿಮಾ ಕಂಪನಿಗಳಿಂದ ಈವರೆವಿಗೆ 365920 ಅರ್ಹ ರೈತ ಪ್ರಕರಣಗಳಿಗೆ ರೂ. 47254 13 ಲಕ್ಷ ಪರಿಹಾರ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Related posts

ತುಮಕೂರು ಜಿಲ್ಲೆಯ ಕ್ಯಾತಸಂದ್ರಲ್ಲಿ ನಡೆದ ಗಣಪತಿ ಶೋಭಯಾತ್ರೆಯಲ್ಲಿ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ತಂಡ

Suddi Udaya

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ : ಜಿ.ಎ.ಎಸ್. ಕಂಬದಲ್ಲಿ ಢಮರ್ ಶಬ್ದ

Suddi Udaya

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ ದೈನಂದಿನ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

Suddi Udaya

ರಾಜ್ಯೋತ್ಸವ ಪ್ರಶಸ್ತಿಗೆ ಸಹಕರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಗೆ ದಯಾ ವಿಶೇಷ ಶಾಲೆಯ ವತಿಯಿಂದ ಗೌರವಾರ್ಪಣೆ

Suddi Udaya

ಅಕ್ರಮವಾಗಿ ಮದ್ಯ ಮಾರಾಟ: ವೇಣೂರು ಪೊಲೀಸರಿಂದ ದಾಳಿ

Suddi Udaya

ಬೆಳ್ತಂಗಡಿ ಯುವ ಕಾಂಗ್ರೆಸ್ ನಗರ ಸಮಿತಿಯ ನೂತನ ಅಧ್ಯಕ್ಷರಾಗಿ ಸುದರ್ಶನ್ ಶೆಟ್ಟಿ ನೇಮಕ

Suddi Udaya
error: Content is protected !!