25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬದ್ಯಾರು ಹಿಬರೋಡಿ ಅನುಗ್ರಹ ನಿಲಯ ವಠಾರದಲ್ಲಿ ಸಂಭ್ರಮ ಸಡಗರದಿಂದ ನಡೆದ ‘ಹಿಬರೋಡಿ ಯಕ್ಷೋತ್ಸವ’

ಬೆಳ್ತಂಗಡಿ: ಪರಮಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ, ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಹಾಗೂ ಶ್ರೀ ಮಹಾಗಣಪತಿ ದೇವರ ಸೇವಾರ್ಥವಾಗಿ ಹಿಬರೋಡಿ ಯಕ್ಷೋತ್ಸವ ಕಾರ್ಯಕ್ರಮ ಜ.29 ರಂದು ಶ್ರೀಮತಿ ಮತ್ತು ದೇವದಾಸ್ ಶೆಟ್ಟಿ ಅನುಗ್ರಹ ನಿಲಯ ಹಿಬರೋಡಿ ಬದ್ಯಾರು ಇವರ ನೇತೃತ್ವದಲ್ಲಿ ಆದ್ದೂರಿಯಾಗಿ ಜರುಗಿತು.

ಬೆಳಿಗ್ಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯವರನ್ನು ಅನುಗ್ರಹ ಮನೆ ವಠಾರಕ್ಕೆ ಬರಮಾಡಿಕೊಳ್ಳಲಾಯಿತು. ಮಧ್ಯಾಹ್ನ 12 ಕ್ಕೆ ಶ್ರೀ ಮಹಾಗಣಪತಿ ದೇವರಿಗೆ ಹೋಮ, ಮಧ್ಯಾಹ್ನ ಮಹಾಪೂಜೆ ಬಳಿಕ ಸಾರ್ವಜನಿಕ ಪ್ರಸಾದ ಭೋಜನ ಕಾರ್ಯಕ್ರಮ ನಡೆಯತು.

ಸಂಜೆ 6 ಕ್ಕೆ ಯಕ್ಷಗಾನ ಮೇಳದ ಚೌಕಿಯಲ್ಲಿ ಮಹಾಗಣಪತಿ ದೇವರಿಗೆ ವಿಶೇಷ ಪೂಜೆ ನಡೆದು ಯಕ್ಷಗಾನ ಆರಂಭಗೊಂಡಿತು. ಸಾರ್ವಜನಿಕ ಪ್ರಸಾದ ಭೋಜನಾ ಕಾರ್ಯಕ್ರಮ ಜರುಗಿತು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯವರಿಂದ “ಸಹಸ್ರ ಕವಚ ಮೋಕ್ಷ ” ಎಂಬ ಪುರಾಣ ಕಥಾ ಭಾಗವನ್ನು ಸೇವೆ ಬಯಲಾಟವಾಗಿ ಪ್ರದರ್ಶನಗೊಂಡಿತು.

ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಆಗಮಿಸಿದಾಗ ಶ್ರೀಮತಿ ಮತ್ತು ದೇವದಾಸ್ ಶೆಟ್ಟಿ, ಮೋಹನ್ ಶೆಟ್ಟಿ ಹಾಗೂ ಕುಟುಂಬಸ್ಥರು ಅವರನ್ನು ಆದರದಿಂದ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ತಾಲೂಕಿನ ಗಣ್ಯರು, ಸಂಘ-ಸಂಸ್ಥೆಯವರು, ಊರಿನ ನಾಗರಿಕರು ಅಪಾರ ಸಂಖ್ಯೆಯಲ್ಲಿ ಭಾಗವಹಿಸಿ ಯಕ್ಷಗಾನವನ್ನು ವೀಕ್ಷಿಸಿದರು.

Related posts

ಕಳೆಂಜ ಶಾಲೆತ್ತಡ್ಕ ಹಾ.ಉ.ಸ. ಸಂಘದ ಆಡಳಿತ ಮಂಡಳಿಯಿಂದ ಶಾಸಕ ಹರೀಶ್ ಪೂಂಜ ರವರಿಗೆ ಅಭಿನಂದನೆ

Suddi Udaya

ಮೊಗ್ರು: ಕೋರಿಯಾರು ಎಂಬಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಜ.18: ಉಜಿರೆ ಬೆನಕ ಆಸ್ಪತ್ರೆಯ ರಜತ ಸಂಭ್ರಮ ಹಾಗೂ ನೂತನ ವಿಸ್ತೃತ ಕಟ್ಟಡ ಉದ್ಘಾಟನೆ

Suddi Udaya

ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘ ನೂತನ ಸಮಿತಿಗೆ ತಾಲೂಕಿನ ಐದು ಸದಸ್ಯರ ಆಯ್ಕೆ

Suddi Udaya

ಮಚ್ಚಿನ ಅಂಚೆ ಕಚೇರಿ ಹಾಗೂ ಮಚ್ಚಿನ ಗ್ರಾ.ಪಂ. ಸಹಯೋಗದಲ್ಲಿ ಆಧಾರ್ ಸೀಡಿಂಗ್ ಕ್ಯಾಂಪ್

Suddi Udaya

ಎ.30-ಮೇ.3: ಮಾನ್ಯ ಸತ್ಯಚಾವಡಿ ತರವಾಡು ಮನೆಯ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಸಮಾಲೋಚನೆ ಸಭೆ, ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ

Suddi Udaya
error: Content is protected !!