September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬದ್ಯಾರು ಹಿಬರೋಡಿ ಅನುಗ್ರಹ ನಿಲಯ ವಠಾರದಲ್ಲಿ ಸಂಭ್ರಮ ಸಡಗರದಿಂದ ನಡೆದ ‘ಹಿಬರೋಡಿ ಯಕ್ಷೋತ್ಸವ’

ಬೆಳ್ತಂಗಡಿ: ಪರಮಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ, ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಹಾಗೂ ಶ್ರೀ ಮಹಾಗಣಪತಿ ದೇವರ ಸೇವಾರ್ಥವಾಗಿ ಹಿಬರೋಡಿ ಯಕ್ಷೋತ್ಸವ ಕಾರ್ಯಕ್ರಮ ಜ.29 ರಂದು ಶ್ರೀಮತಿ ಮತ್ತು ದೇವದಾಸ್ ಶೆಟ್ಟಿ ಅನುಗ್ರಹ ನಿಲಯ ಹಿಬರೋಡಿ ಬದ್ಯಾರು ಇವರ ನೇತೃತ್ವದಲ್ಲಿ ಆದ್ದೂರಿಯಾಗಿ ಜರುಗಿತು.

ಬೆಳಿಗ್ಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯವರನ್ನು ಅನುಗ್ರಹ ಮನೆ ವಠಾರಕ್ಕೆ ಬರಮಾಡಿಕೊಳ್ಳಲಾಯಿತು. ಮಧ್ಯಾಹ್ನ 12 ಕ್ಕೆ ಶ್ರೀ ಮಹಾಗಣಪತಿ ದೇವರಿಗೆ ಹೋಮ, ಮಧ್ಯಾಹ್ನ ಮಹಾಪೂಜೆ ಬಳಿಕ ಸಾರ್ವಜನಿಕ ಪ್ರಸಾದ ಭೋಜನ ಕಾರ್ಯಕ್ರಮ ನಡೆಯತು.

ಸಂಜೆ 6 ಕ್ಕೆ ಯಕ್ಷಗಾನ ಮೇಳದ ಚೌಕಿಯಲ್ಲಿ ಮಹಾಗಣಪತಿ ದೇವರಿಗೆ ವಿಶೇಷ ಪೂಜೆ ನಡೆದು ಯಕ್ಷಗಾನ ಆರಂಭಗೊಂಡಿತು. ಸಾರ್ವಜನಿಕ ಪ್ರಸಾದ ಭೋಜನಾ ಕಾರ್ಯಕ್ರಮ ಜರುಗಿತು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯವರಿಂದ “ಸಹಸ್ರ ಕವಚ ಮೋಕ್ಷ ” ಎಂಬ ಪುರಾಣ ಕಥಾ ಭಾಗವನ್ನು ಸೇವೆ ಬಯಲಾಟವಾಗಿ ಪ್ರದರ್ಶನಗೊಂಡಿತು.

ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಆಗಮಿಸಿದಾಗ ಶ್ರೀಮತಿ ಮತ್ತು ದೇವದಾಸ್ ಶೆಟ್ಟಿ, ಮೋಹನ್ ಶೆಟ್ಟಿ ಹಾಗೂ ಕುಟುಂಬಸ್ಥರು ಅವರನ್ನು ಆದರದಿಂದ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ತಾಲೂಕಿನ ಗಣ್ಯರು, ಸಂಘ-ಸಂಸ್ಥೆಯವರು, ಊರಿನ ನಾಗರಿಕರು ಅಪಾರ ಸಂಖ್ಯೆಯಲ್ಲಿ ಭಾಗವಹಿಸಿ ಯಕ್ಷಗಾನವನ್ನು ವೀಕ್ಷಿಸಿದರು.

Related posts

ವೇಣೂರು : ಟೈಲರ್ ಸಂಜೀವ ಪಾಣೂರು ಹೃದಯಾಘಾತದಿಂದ ನಿಧನ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಧರ್ಮಸ್ಥಳ : ಆಟೋ ಚಾಲಕನ ಮೇಲೆ ಹಲ್ಲೆ ಪ್ರಕರಣ: ಮೂವರು ಆರೋಪಿಗಳ ಬಂಧನ

Suddi Udaya

ಪಡಂಗಡಿ: ಸಿಡಿಲು ಬಡಿದು ಕಟ್ಟಡಕ್ಕೆ ಬೆಂಕಿ

Suddi Udaya

ಎರಡನೇ ಬಾರಿಗೆ ಕನಾ೯ಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಸಂಭ್ರಮಾಚರಣೆ : ವಿಜಯೋತ್ಸವ

Suddi Udaya

ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾದ ನವಚೇತನ ಆಂ.ಮಾ. ಶಾಲೆಯ ವಿದ್ಯಾರ್ಥಿ ಶರ್ವಿನ್ ಮೊನಿಸ್ ರವರನ್ನು ಸನ್ಮಾನಿಸಿ ಅಭಿನಂದಿಸಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!