July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ರವರಿಂದ ಉಜಿರೆ ಶ್ರೀ ಜನಾರ್ಧನ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಜಿರೆ: ಶ್ರೀ ಜನಾರ್ಧನ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ಅವರು ಉಜಿರೆ ಶ್ರೀ ಶಾರದಾ ಮಂಟಪದಲ್ಲಿ ಜ.29 ರಂದು ಬಿಡುಗಡೆಗೊಳಿಸಿ ಬ್ರಹ್ಮಕಲಶೋತ್ಸವದ ಯಶಸ್ವಿಗೆ ನಮ್ಮ‌ ಸಂಪೂರ್ಣ ಸಹಕಾರವಿದೆ ಎಂದರು.

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರಾದ ಶರತ್ ಕೃಷ್ಣ ಪಡ್ವೆಟ್ನಾಯ ಮಾತನಾಡಿ ಕೀರ್ತಿಶೇಷ ವಿಜಯರಾಘವ ಪಡ್ವೆಟ್ನಾಯ ಅವರ ಕನಸಿನಂತೆ ರಾಜಗೋಪುರ ಲೋಕಾರ್ಪಣೆಗೆ ಸಿದ್ದವಾಗಿದೆ. ಊರ, ಪರವೂರ ದಾನಿಗಳ, ಕಾರ್ಯಕರ್ತರ ಸಹಕಾರದಿಂದ ಬೇರೆ ಬೇರೆ ಅಭಿವೃದ್ಧಿ ಕೆಲಸಗಳು ನಡೆದಿದೆ ಎಂದರು.

ರಾಜಗೋಪುರ ಸಮಿತಿ ಅಧ್ಯಕ್ಷ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಶಶಿಧರ ಶೆಟ್ಟಿ ನವಶಕ್ತಿ ಶುಭ ಕೋರಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂಎಲ್ಸಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಕೆ.ಪ್ರತಾಪಸಿಂಹ ನಾಯಕ್ ವಹಿಸಿದ್ದರು.

ವೇದಿಕೆಯಲ್ಲಿ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ಅನುವಂಶಿಯ ಆಡಳಿತ ಮೊಕ್ತೇಸರಾದ ಡಾ.ಸತೀಶ್ಚಂದ್ರ ಎಸ್, ರಾಜಗೋಪುರ ಸಮಿತಿ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕ ಕೆ.ಮೋಹನ್ ಕುಮಾರ್, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಕಾರಂತ್, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಭರತ್ ಕುಮಾರ್, ನಾಲ್ವಿಕೆಯವರಾದ ಶಿವರಾಮ ಪಡ್ವೆಟ್ನಾಯ, ಅನಂತ ಮೋಹನ ಮೂಡಣ್ಣಾಯ ಉಪಸ್ಥಿತರಿದ್ದರು.

ಆಡಳಿತ ಮೊಕ್ತೇಸರಾದ ಶರತ್ ಕೃಷ್ಣ ಪಡ್ವೆಟ್ನಾಯರವರು ಸ್ವಾಗತಿಸಿದರು. ಎಸ್.ಡಿ.ಎಂ ಕಾಲೇಜಿನ ಉಪನ್ಯಾಸಕ ಡಾ. ಶ್ರೀಧರ್ ಭಟ್ ಕಾರ್ಯಕ್ರಮ ನಿರೂಪಿಸಿದರು. ರವೀಂದ್ರ ಶೆಟ್ಟಿ ಬಳಂಜ ವಂದಿಸಿದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರಿಗೆ “ಜೊತೆಯಾಗಿ ಭವಿಷ್ಯವನ್ನು ಕಟ್ಟೋಣ” ಕಾರ್ಯಕ್ರಮ

Suddi Udaya

ಅರಸಿನಮಕ್ಕಿ ಸರಕಾರಿ ಪ.ಪೂ. ಕಾಲೇಜಿಗೆ ಶೇ. 93.33 ಫಲಿತಾಂಶ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್, ನಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟರ್ಸ್ ವತಿಯಿಂದ ಪೂಲ್ ಕ್ಯಾಂಪಸ್ ಡ್ರೈವ್

Suddi Udaya

ಅಖಿಲ ಭಾರತ ವೃತ್ತಿ ಪರೀಕ್ಷೆ: ಎಸ್‌ಡಿಎಂ ಮಹಿಳಾ ಐಟಿಐ ಸಂಸ್ಥೆಗೆ ಶೇ.100 ಫಲಿತಾಂಶ

Suddi Udaya

ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಬೇಡಿ: ಅಭಿನಂದನ್ ಹರೀಶ್ ಕುಮಾರ್

Suddi Udaya
error: Content is protected !!