ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಭೀಷ್ಮ ಏಕಾದಶೀ ಪ್ರಯುಕ್ತ ವಿಷ್ಣು ಸಹಸ್ರನಾಮ ಪಠಣ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಮಹಾವಿದ್ಯಾಲಯದಲ್ಲಿ ಸಂಸ್ಕೃತ ವಿಭಾಗದ ವತಿಯಿಂದ ಭೀಷ್ಮ ಏಕಾದಶಿಯ ಪ್ರಯುಕ್ತ ಜ.29 ರಂದು ವಿಷ್ಣುಸಹಸ್ರನಾಮ ಪಠಣ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮವನ್ನು ಸಂಸ್ಕೃತ ವಿಭಾಗದ ಸಹಾಯಕ ಪ್ರಾಧ್ಯಾಪಕ ಶ್ರೇಯಸ್ ಪಾಳಂದೆ ಸಂಯೋಜಿಸಿದರು, ದ್ವಿತೀಯ ವರ್ಷದ ವಿಜ್ಞಾನ ಹಾಗೂ ಕಲಾ ವಿಭಾಗದ ಸಂಸ್ಕೃತ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉತ್ಸಾಹದಿಂದ, ಸಮಚಿತ್ತರಾಗಿ ಮತ್ತು ಭಕ್ತಿಭಾವದಿಂದ ಭಾಗವಹಿಸಿದರು. ಸಂಸ್ಕೃತ ವಿಭಾಗದ ಮುಖ್ಯಸ್ಥರಾದ ಪ್ರೊ. ಶ್ರೀಧರ ಭಟ್ಟರು ಕಾರ್ಯಕ್ರಮಕ್ಕೆ ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಲ್ಲಿ ಭೀಷ್ಮ ಏಕಾದಶಿಯ ಮಹತ್ವದ ಕುರಿತು ಅರಿವು ಉಂಟಾಯಿತು. ವಿಷ್ಣುಸಹಸ್ರನಾಮ ಪಠಣದಿಂದ ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಮತ್ತು ಮಾನಸಿಕ ಸ್ಥೈರ್ಯದ ಹೆಚ್ಚಳದ ಜೊತೆಗೆ ಭಾಷೆಯ ಶುದ್ಧ ಉಚ್ಚಾರ ಹಾಗೂ ಭಾರತೀಯ ಸಂಸ್ಕೃತಿ ಮತ್ತು ಮೌಲ್ಯಗಳ ಬಗ್ಗೆ ಗೌರವ ಹೆಚ್ಚುವಂತೆ ಮಾಡಿತು. ಈ ರೀತಿಯ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಸರ್ವಾಂಗೀಣ ವ್ಯಕ್ತಿತ್ವ ವಿಕಾಸಕ್ಕೆ ಸಹಕಾರಿಯಾಗಿದ್ದು, ಸಂಸ್ಕೃತ ವಿಭಾಗದ ಧಾರ್ಮಿಕ–ಸಾಂಸ್ಕೃತಿಕ ಚಟುವಟಿಕೆಗಳಿಗೆ ಮತ್ತೊಂದು ಅರ್ಥಪೂರ್ಣ ಆಯಾಮವನ್ನು ನೀಡಿದವು

Related posts

ವೇಣೂರು: ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಮಂತ್ರಿ ಮಂಡಲ ರಚನೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಪ್ರಚಂಡ ಗೆಲುವು: ಅಭಿವೃದ್ಧಿಗೆ ಸಂದ ಭರ್ಜರಿ ಜಯ: ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂಗೆ ಸೋಲು

Suddi Udaya

ಬೆಳ್ತಂಗಡಿ :ಭತ್ತ ಬೆಳೆಯುವ ಕೃಷಿಕರಿಗೆ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜ ದಾಸ್ತಾನು ಲಭ್ಯ

Suddi Udaya

ಉಜಿರೆ ಹಳೇಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನಟ ರಮೇಶ್ ಅರವಿಂದ್ ಭೇಟಿ: ಅಭಿವೃದ್ಧಿ ಹೊಂದುತ್ತಿರುವ ಶಾಲೆಯ ಬಗ್ಗೆ ಮೆಚ್ಚುಗೆ

Suddi Udaya

ಖಿಲ್ರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ ಬೆನಕ ಆಸ್ಪತ್ರೆಗೆ ವಿಧಾನಸಭೆಯ ಸ್ಪೀಕರ್ ಯು. ಟಿ ಖಾದರ್ ಭೇಟಿ

Suddi Udaya
error: Content is protected !!