23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸ್ವಂತ ಖರ್ಚಿನಲ್ಲಿ ಸಾರ್ವಜನಿಕ ರಸ್ತೆಯ ದುರಸ್ತಿ; ವೇಣೂರು ಗ್ರಾ.ಪಂ. ಸದಸ್ಯರ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ

ವೇಣೂರು: ಎಷ್ಟೋ ಗ್ರಾಮೀಣ ರಸ್ತೆಗಳು ದುರಸ್ತಿಗಾಗಿ ಕಾಯುತ್ತಿವೆ. ಕೆಲವನ್ನು ಪಂಚಾಯತ್‌ನ ಅನುದಾನದಿಂದ ದುರಸ್ತಿ ಕಾರ್ಯ ನಡೆದರೆ ಇನ್ನು ಕೆಲವು ರಸ್ತೆಗಳು ಅನುದಾನಗಳ ಕೊರತೆಯಿಂದ ಬಾಕಿಉಳಿದಿವೆ. ವೇಣೂರು ಗ್ರಾ.ಪಂ.ನ ಸದಸ್ಯರೊಬ್ಬರು ತಮ್ಮ ಸ್ವಂತ ಖರ್ಚಿನಿಂದಲೇ ಮಣ್ಣಿನ ರಸ್ತೆಯ ದುರಸ್ತಿ ಮಾಡಿಸಿ ಮಾದರಿಯಾಗಿದ್ದಾರೆ.

ಗ್ರಾಮಸ್ಥರ ಬೇಡಿಕೆಗೆ ಅನುಗುಣವಾಗಿ ಪಂಚಾಯತ್‌ನಲ್ಲಿ ಅನುದಾನಗಳು ದೊರೆಯುತ್ತಿಲ್ಲ. ಇದನ್ನು ಮನಗಂಡು ಪಂಚಾಯತ್ ಸದಸ್ಯರಾದ ಮೂಡುಕೋಡಿಯ ಸುಂದರ ಹೆಗ್ಡೆ ಬಿಇ ಅವರು ತಮ್ಮ ಸ್ವಂತ ಖರ್ಚಿನಿಂದ ಮೂಡುಕೋಡಿ-ಪುತ್ತಿಲಕಜೆ ರಸ್ತೆಯ ದುರಸ್ತಿ ಕಾರ್ಯ ನಡೆಸಿದ್ದು, ಇವರ ಈ ಕಾರ್ಯ ಗ್ರಾಮದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ವೇಣೂರು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ಸುಂದರ ಹೆಗ್ಡೆಯವರು ಧಾರ್ಮಿಕ, ಸಾಮಾಜಿಕ ಸೇವೆಯಲ್ಲೂ ಗುರುತಿಸಿಕೊಂಡಿದ್ದಾರೆ.

Related posts

ಕಾಶಿಪಟ್ಣ ಗ್ರಾ.ಪಂ.ನಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಭೆ

Suddi Udaya

ಶ್ರೀ ಕ್ಷೇತ್ರ ಧ. ಗ್ರಾ. ಯೋ. ಸಮುದಾಯ ಅಭಿವೃದ್ಧಿ ವತಿಯಿಂದ ರೂ.25 ಸಾವಿರ ಆರ್ಥಿಕ ನೆರವು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಹಿಂದೂ ಧಾರ್ಮಿಕ ಶ್ರದ್ದಾ ಕೇಂದ್ರದ ವಿರುದ್ದ ನಡೆಯುತ್ತಿರುವ ಷಡ್ಯಂತ್ರವನ್ನು ಖಂಡಿಸಿ; ಬಿಜೆಪಿ ರಾಜ್ಯಾಧ್ಯಕ್ಷ ಬಿ‌.ವೈ ವಿಜಯೇಂದ್ರ ಅವರ ನೇತೃತ್ವದಲ್ಲಿ ಧರ್ಮಸ್ಥಳ ಚಲೋ ಬೃಹತ್ ಸಮಾವೇಶ

Suddi Udaya

ಅ.28-29 ರಂದು ನಡೆಯಲಿರುವ “ವಿಶ್ವ ಬಂಟರ ಸಮ್ಮೇಳನದ” ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಬ್ಬಡ್ಡಿ ಪಂದ್ಯಾಟ: ಸ.ಉ.ಹಿ.ಪ್ರಾ. ಶಾಲೆ ಬರೆಂಗಾಯ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಆರಂಬೋಡಿ ಕಿ. ಪ್ರಾ. ಶಾಲೆಗೆ ಬಟ್ಟಲು ಮತ್ತು ಗ್ಯಾಸ್ ಸ್ಟವ್ ವಿತರಣೆ

Suddi Udaya
error: Content is protected !!